ಶಿರೂರ:ಹಂದಿಗಳ ಕಾಟದಿಂದ ಬೆಳೆ ನಾಶ- ರೈತ ಕಂಗಾಲು


Team Udayavani, Mar 13, 2024, 1:39 PM IST

Udayavani Kannada Newspaper

ಉದಯವಾಣಿ ಸಮಾಚಾರ
ಶಿರೂರ: ಪಟ್ಟಣದಿಂದ ನೀಲಾನಗರಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಕೃಷಿಭೂಮಿಯಲ್ಲಿನ ಬೆಳೆಗಳಿಗೆ ಹಂದಿ (ಕಾಡಹಂದಿಗಳ) ಕಾಟದಿಂದ ಬೆಳೆಹಾನಿಯಾಗಿದ್ದು ಇದರಿಂದ ರೈತರು ಕಂಗಾಲಾಗಿದ್ದಾರೆ.

ಒಂದು ವರ್ಷದಿಂದ ಈ ಹಂದಿಗಳ ಕಾಟದಿಂದ ರೈತರು ಬೇಸತ್ತು ಹೋಗಿದ್ದು, ಭೂಮಿಯಲ್ಲಿನ ತೋಗರಿ, ಜೋಳ, ಕಡಲೆ, ಶೇಂಗಾ, ಕಬ್ಬು ಸೇರಿದಂತೆ ನಾನಾ ಬೆಳೆಗಳು ನಾಶವಾಗಿವೆ. ಈ ಕುರಿತು ರೈತರು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದು ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಪರಿಹಾರವು ಮರೀಚಿಕೆಯಾಗಿದೆ. ಒಂದೊದು ಭಾರಿ ಭೂಮಿಗೆ ಬಿತ್ತಿದ ಬೀಜಗಳನ್ನು ಸಹ ತಿಂದು ಹಾಕಿರುವ ಉದಾಹರಣೆಗಳಿವೆ.

ರಾತ್ರಿ ಕಾವಲು ಕಾಯುತ್ತಿರುವ ರೈತರು: ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ನಾಯಿಗಳೊಂದಿಗೆ ರೈತರು ರಾತ್ರಿಇಡಿ ನಿದ್ದೆಗೆಟ್ಟು ಕಾವಲುಕಾಯುವಂತಾಗಿದೆ. ನಿತ್ಯ ರಾತ್ರಿ ಇದೊಂದು ಕೆಲಸವಾಗಿದೆ. ಸಾವಿರಾರು ಸಾಲ ಮಾಡಿ ಬಿತ್ತನೆ ಮಾಡಿದ ಕಾಡಹಂದಿಗಳ ಪಾಲಾಗುತ್ತಿದೆ. ಗುಡ್ಡದಿಂದ ರಾತ್ರಿ ಏಕಾಏಕಿ 50ಕ್ಕೂ ಹೆಚ್ಚು ಇರುವ ಹಂದಿಗಳ ಗುಂಪು ಕೃಷಿಭೂಮಿಗಳಿಗೆ ದಾಳಿ ಮಾಡುತ್ತಿದ್ದು, ಸದ್ಯ ರಾಶಿಗೆ ಬಂದಿರುವ ಶೇಂಗಾ ಬೆಳೆ ಹಂದಿಗಳ ಪಾಲಾಗುತ್ತಿದೆ. ಒಮ್ಮೊಮ್ಮೆ ಜನರ ಮೇಲೆ ಕಾಡಹಂದಿಗಳು ದಾಳಿ ಮಾಡಿವೆ ಎನ್ನುತ್ತಾರೆ ರೈತರು.

ಅಧಿಕಾರಿಗಳು ರಕ್ಷಣೆ ಮಾಡಿ: ಅರಣ್ಯ ಇಲಾಖೆ
ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳು ರೈತರ ಕಷ್ಟವನ್ನು ಅರಿತು ಶಾಶ್ವತವಾದ ಸಮಸ್ಯೆಗೆ ಮುಂದಾಗಿ ರೈತರ ಬೆಳೆ ರಕ್ಷಣೆ ಮಾಡಬೇಕೆಂದು ನೊಂದ ರೈತರು ಒತ್ತಾಯಿಸಿದ್ದಾರೆ.

ಕಾಡಹಂದಿಗಳ ಕಾಟದಿಂದ ರೈತರಿಗೆ ಕಷ್ಟವಾಗಿದ್ದು, ನಮ್ಮ ಕೃಷಿಭೂಮಿಗೆ ನಾವೇ ತೆರಳಲು ಹೆದರಿಕೆಯಾಗುತ್ತದೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ನಾಶವಾದ ಬೆಳೆಗಳಿಗೆ ಪರಿಹಾರ ಕೊಡಬೇಕು. ಹಂದಿಗಳನ್ನು ಬೇರೆಡೆ ಕಳುಹಿಸಬೇಕು.
*ಮೊಹಮ್ಮದ ಹಳದೂರ, ಶಿರೂರ ರೈತ

ಈ ಹಂದಿ ಕಾಟದ ಸಮಸ್ಯೆಯನ್ನು ಹಾಗೂ ರೈತರಿಗಾದ ಬೆಳೆ ಹಾನಿಯ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಹಂದಿ ಕಾಟ ತಪ್ಪಿಸಲು ಕೆಲವೇ ದಿನಗಳಲ್ಲಿ ಶಿರೂರ ಗುಡ್ಡದಿಂದ ನೀಲಾನಗರದವರೆಗೂ ತಂತಿ ಬೇಲಿ ಹಾಕಲು ಕ್ರಮ ಕೈಗೊಂಡಿದ್ದು, ಹಾನಿಯಾದ ಬೆಳೆಗೆ ಪರಿಶೀಲನೆ ಮಾಡಿ ಪರಿಹಾರ ನೀಡುವುದಾಗಿ ತಿಳಿಪಡಿಸಿದ್ದಾರೆ.
*ಅಮೀನಸಾಬ ಗುಜರಾತಿ, ಗಸ್ತು ಅರಣ್ಯ ಪಾಲಕ ಶಿರೂರ

*ಶಂಕರ ಹೂಗಾರ

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

festcide

Feticide: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಪತ್ತೆ

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

1-MLP

BJP:ಮಹಾಲಿಂಗಪುರ ಪುರಸಭೆಯ 4 ಸದಸ್ಯರು, 3 ಮುಖಂಡರು ಪಕ್ಷದಿಂದ ಉಚ್ಛಾಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.