Kaup- ಶಿರ್ವ ಮುಖ್ಯರಸ್ತೆ; ರಸ್ತೆಯಲ್ಲಿರುವ ಹೈಟೆನ್ಶನ್‌ ವಿದ್ಯುತ್‌ ಕಂಬಗಳು:ಅಪಾಯದ ಕರೆಗಂಟೆ


Team Udayavani, Mar 14, 2024, 9:20 AM IST

3-kaup

ಶಿರ್ವ: ಕಾಪು-ಶಿರ್ವ ಮುಖ್ಯ ರಸ್ತೆ ಅಗಲೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 5ಕೋ. 75 ಲ. ರೂ. ಅನುದಾನ ಮಂಜೂರಾಗಿದ್ದು, ಕಳತ್ತೂರು ಮಿಲ್‌ಬಳಿಯ ಶೆಟ್ಟಿಗಾರ್‌ ಕಂಪೌಂಡ್‌ನಿಂದ ಶಾಂತಿಗುಡ್ಡೆಗಾಗಿ ಶಿರ್ವ ಮುಖ್ಯ ರಸ್ತೆವರೆಗಿನ ಸುಮಾರು 3 ಕಿ.ಮೀ. ರಸ್ತೆ ವಿಸ್ತರಣೆಗೊಂಡಿದೆ.

ಆದರೆ ಅಪಾಯಕಾರಿ ಹೈಟೆನ್ಶನ್‌ ವಿದ್ಯುತ್‌ ಕಂಬಗಳು ರಸ್ತೆಯಲ್ಲಿಯೇ ಉಳಿದುಕೊಂಡಿದ್ದು ಅಪಾಯದ ಭೀತಿ ಎದುರಾಗಿದೆ. ರಸ್ತೆ ಕಾಮಗಾರಿ ಮುಗಿದರೂ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷದಿಂದಾಗಿ ತುಕ್ಕು ಹಿಡಿದ ಅಪಾಯಕಾರಿ ಕಂಬಗಳನ್ನು ತೆರವುಗೊಳಿಸಲಾಗಿಲ್ಲ. ಅಪಾಯಕಾರಿ ಹೈಟೆನ್ಶನ್‌ವಿದ್ಯುತ್‌ ಕಂಬಗಳು ರಸ್ತೆಯಲ್ಲಿದ್ದರೂ ತೆರವುಗೊಳಿಸದೇ ತರಾತುರಿಯಲ್ಲಿ ಗುತ್ತಿಗೆದಾರರು ಡಾಮರೀಕರಣ ನಡೆಸಿದ್ದಾರೆ.

ಕಾಪು-ಶಿರ್ವ ಮುಖ್ಯರಸ್ತೆಯ ಸಂತ ಮೇರಿ ಕಾಲೇಜಿನ ಹಿಂಭಾಗದ ರಸ್ತೆಯಲ್ಲಿ ಮತ್ತು ಪ.ಪೂ.ಕಾಲೇಜಿನ ಹಿಂಭಾಗದ ವಾಣಿಜ್ಯ ಸಂಕೀರ್ಣವೊಂದರ ಮುಂಭಾಗದಲ್ಲಿ ಬುಡದಲ್ಲಿ ತುಕ್ಕು ಹಿಡಿದ ಕಂಬಗಳು ರಸ್ತೆಯಲ್ಲಿವೆ. ವಾಹನ ನಿಬಿಡತೆಯಿರುವ ಈ ರಸ್ತೆಯಲ್ಲಿ ಶಾಲಾ ವಾಹನಗಳ ಸಹಿತ ಸಾವಿರಾರು ಲಘು, ಘನ ಮತ್ತು ದ್ವಿಚಕ್ರ ವಾಹನಗಳು ಚಲಿಸುತ್ತಿದ್ದು, ವಾಹನ ಸವಾರರಿಗೆ ತೊಂದರೆಯಾಗಿದೆ.

ಅಪಾಯಕಾರಿ ವಿದ್ಯುತ್‌ ಕಂಬಗಳು

ತುಕ್ಕು ಹಿಡಿದ ಕಬ್ಬಿಣದ ಅಪಾಯಕಾರಿ ವಿದ್ಯುತ್‌ ಕಂಬಗಳು ರಸ್ತೆಯಲ್ಲಿದ್ದರೂ ಇಲಾಖೆ ಪ್ರಯಾಣಿಕರ / ವಾಹನ ಸವಾರರ ಸುರಕ್ಷತೆಗಾಗಿ ಯಾವುದೇ ಮುಂಜಾಗ್ರತೆ ವಹಿಸದೆ ನಿರ್ಲಕ್ಷ ವಹಿಸಿದೆ. ಅಪಾಯದ ಬಗ್ಗೆ ಬ್ಯಾರಿಕೇಡ್‌ ಅಥವಾ ಯಾವುದೇ ಮುಂಜಾಗ್ರತಾ ಫಲಕಗಳನ್ನು ಅಳವಡಿಸದೇ ಇರುವುದರಿಂದ ರಾತ್ರಿ ವೇಳೆಯಲ್ಲಿ ಚಲಿಸುವ ವಾಹನಗಳು ಯಾವುದೇ ಕ್ಷಣದಲ್ಲಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮೆಸ್ಕಾಂಗೆ ಅರ್ಜಿಸಲ್ಲಿಸಿ ಕಂಬಗಳನ್ನು ಸ್ಥಳಾಂತರಿಸದೆ ರಸ್ತೆ ವಿಸ್ತರಣೆ ಕಾಮಗಾರಿ ನಡೆಸಿರುವುದರಿಂದಾಗಿ ಸಮಸ್ಯೆಯಾಗಿದೆ.

ಕಾಪು ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ಅವರು ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಮಾ. 4ರಂದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ಗಮನಹರಿಸಿ, ಹೆಚ್ಚಿನ ಅನಾಹುತ ಸಂಭವಿಸುವ ಮುನ್ನ ಸೂಕ್ತ ಕ್ರಮ ಕೈಗೊಂಡು ನಾಗರಿಕರ/ವಾಹನ ಸವಾರರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಿದೆ.

ರಸ್ತೆ ಡಾಮರೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಪೂರ್ಣಗೊಂಡಿಲ್ಲ. ಈಗಾಗಲೇ ಮೆಸ್ಕಾಂಗೆ ವಿದ್ಯುತ್‌ ಕಂಬ ತೆರವುಗೊಳಿಸಲು ಮನವಿ ಮಾಡಲಾಗಿದ್ದು, ಕಂಬಗಳು ಸ್ಥಳಾಂತರಗೊಂಡ ಕೂಡಲೇ ರಸ್ತೆಯನ್ನು ಪೂರ್ಣಗೊಳಿಸಲಾಗುವುದು.ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. –  ಸುಧೀರ್‌, ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌, ಸಬ್‌ ಡಿವಿಜನ್‌ ಉಡುಪಿ.

ವಿದ್ಯುತ್‌ ಕಂಬ ಸ್ಥಳಾಂತರಕ್ಕೆ ಲೋಕೋಪಯೋಗಿ ಇಲಾಖೆ ಅರ್ಜಿ ಸಲ್ಲಿಸಿದಲ್ಲಿ ಎಸ್ಟಿಮೇಟ್‌ ಮಾಡಿಕೊಟ್ಟ ಬಳಿಕ ಕಂಬ ಸ್ಥಳಾಂತರಿಸಬೇಕು. ಕಂಬ ಸ್ಥಳಾಂತರಗೊಂಡ ಬಳಿವೇ ಇಲಾಖೆ/ಗುತ್ತಿಗೆದಾರರು ರಸ್ತೆ ಡಾಮರೀಕರಣಗೊಳಿಸಬೇಕಿದೆ. ಕಂಬ ಸ್ಥಳಾಂತರಿಸಲು ಇಲಾಖೆ ಕೂಡಲೇ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. –ಸುಶಾನ್‌, ಸಹಾಯಕ ಅಭಿಯಂತರರು, ಮೆಸ್ಕಾಂ ಕಾಪು.

ಸತೀಶ್ಚಂದ್ರ ಶೆಟ್ಟಿ, ಶಿರ್ವ

ಟಾಪ್ ನ್ಯೂಸ್

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.