Bangalore: ಲೇಡಿ ಪಿಎಸ್‌ಐಗೆ ಬ್ಲ್ಯಾಕ್‌ಮೇಲ್‌: ಪುರುಷ ಪಿಎಸ್‌ಐ ಸೆರೆ

ನನ್ನ ಜತೆಗಿನ ಫೋಟೋ ಇಟ್ಟುಕೊಂಡು ಲೈಂಗಿಕ ದೌರ್ಜನ್ಯ: ಮಹಿಳಾ ಪಿಎಸ್‌ಐ ಆರೋಪ; ಪೊಲೀಸ್‌ ತರಬೇತಿ ವೇಳೆ ಆರೋಪಿ ಪರಿಚಯ

Team Udayavani, Mar 14, 2024, 10:43 AM IST

6-bng

ಬೆಂಗಳೂರು: ಮಹಿಳಾ ಪಿಎಸ್‌ಐವೊಬ್ಬರ ಜೊತೆಗಿನ ವೈಯಕ್ತಿಕ ದೃಶ್ಯಗಳನ್ನು ಸೆರೆ ಹಿಡಿದು ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಸಹೋದ್ಯೋಗಿ ಪುರುಷ ಪಿಎಸ್‌ಐಯನ್ನು ಚಂದ್ರಾಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆಎಸ್‌ಐಎಸ್‌ಎಫ್ನ ಸಂಜಯ್‌ ಕುಮಾರ್‌ (34) ಬಂಧಿತ ಪಿಎಸ್‌ಐ.

ಈತನ ಸಹೋದ್ಯೋಗಿ 28 ವರ್ಷದ ಮಹಿಳಾ ಪಿಎಸ್‌ಐ ಕೊಟ್ಟ ದೂರಿನ ಆಧಾರದ ಮೇಲೆ ಚಂದ್ರಾ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ತರಬೇತಿ ಪಡೆಯುವ ವೇಳೆ ದೂರುದಾರ ಪಿಎಸ್‌ಐಗೆ ಆರೋಪಿ ಸಂಜಯ್‌ ಪರಿಚಯವಾಗಿತ್ತು. ಆರಂಭದಲ್ಲಿ ಸಂಜಯ್‌ ಪ್ರೇಮ ನಿವೇದನೆ ಮಾಡಿದ್ದರು. ಇದನ್ನು ದೂರುದಾರ ಮಹಿಳೆ ತಿರಸ್ಕರಿಸಿದ್ದರು. ಕೆಎಸ್‌ಐಎಸ್‌ಎಫ್ ಪಿಎಸ್‌ಐ ಆಗಿ ಇದ್ದುಕೊಂಡು ನಿಮ್ಮನ್ನು ವಿವಾಹ ಆಗುವುದಿಲ್ಲ. ಯುಪಿಎಸ್ಸಿ ಮಾಡುತ್ತೇನೆ. ನನಗೆ ಓದಲು ಸಹಾಯ ಮಾಡಿ ಎಂದು ಸಂಜಯ್‌ ಹೇಳಿದ್ದರು. ಓದಿನ ನೆಪ ಇಟ್ಟುಕೊಂಡು ದೂರುದಾರರಿಗೆ ಹತ್ತಿರವಾದರು. ತದನಂತರ ತರಬೇತಿ ಮುಗಿದ ಬಳಿಕ ಕರೆಮಾಡಿ ನೀವು ನನಗೆ ಓದಲು ಸಹಾಯ ಮಾಡುತ್ತೇನೆ ಎಂದು ಹೇಳಿದ್ದೀರಿ. ನನಗೆ ಹಲವು ಸಮಸ್ಯೆಗಳಿವೆ ಸಹಾಯ ಮಾಡಿ ಎಂದು ಹೇಳಿ ಆಗಾಗ ಹಣ ತೆಗೆದುಕೊಂಡು ವಾಪಸ್‌ ಕೊಡುತ್ತಿದ್ದರು ಎಂದು ದೂರಿನಲ್ಲಿ ಮಹಿಳಾ ಪಿಎಸ್‌ಐ ಉಲ್ಲೇಖೀಸಿದ್ದಾರೆ.

ಮಹಿಳಾ ಪಿಎಸ್‌ಐಗೆ ಬ್ಲ್ಯಾಕ್‌ ಮೇಲ್‌: 2020ರಲ್ಲಿ ನನ್ನಿಂದ 5.50 ಲಕ್ಷ ರೂ. ತೆಗೆದುಕೊಂಡರು. ಓದುವ ನೆಪದಲ್ಲಿ ಹತ್ತಿರ ಆಗಿ ಜೊತೆಗಿರುವ ಸಮಯದ ಫೋಟೋಗಳನ್ನು ನನಗೆ ತಿಳಿಯದೆ ತೆಗೆದುಕೊಂಡಿದ್ದಾರೆ.

ಅವುಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌ ಮಾಡಿ ನನಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದಾರೆ. ಸಾಯುತ್ತೇನೆ ಎನ್ನುವುದು, ಕೈ ಕೊಯ್ದುಕೊಳ್ಳುವುದು ಮಾಡುತ್ತಿದ್ದರು. ಈ ರೀತಿಯಾಗಿ ಬ್ಲ್ಯಾಕ್‌ ಮೇಲ್‌ ಮಾಡಿ ನನ್ನನ್ನು ಕರೆಸಿಕೊಳ್ಳುತ್ತಿದ್ದರು. ಮದ್ಯಪಾನ, ಆನ್‌ಲೈನ್‌ ಬೆಟ್ಟಿಂಗ್‌ ಚಟ ಹೊಂದಿರುವುದು ಗಮನಕ್ಕೆ ಬಂದು ನಾನು ಸುಮ್ಮನಿದ್ದೆ. ಸಂಜಯ್‌ ಬಳಿ ಮಾತನಾಡದೇ ಇದ್ದಾಗ ಅವರು ನನ್ನ ಕರ್ತವ್ಯ ಸ್ಥಳದಲ್ಲಿ ಸಿಬ್ಬಂದಿಗೆ ಕರೆ ಮಾಡುತ್ತಿದ್ದರು.

ನನ್ನ ಬ್ಯಾಚ್‌ ನವರಿಗೆ ಕರೆಮಾಡಿ ನನ್ನ ಬಗ್ಗೆ ಇಲ್ಲ-ಸಲ್ಲದ ಆರೋಪ ಮಾಡಿದ್ದಾರೆ. ನನ್ನ ಮನೆಯ ಸುತ್ತಾ ಚಾಕು ಹಿಡಿದು ತಿರುಗಾಡಿ ಜೀವ ಬೆದರಿಕೆ ಹಾಕಿದ್ದಾರೆ. ಕರ್ತವ್ಯ ಸ್ಥಳಕ್ಕೆ ಬಂದು ಥಳಿಸಿ ನನಗೆ ತೊಂದರೆ ಕೊಟ್ಟಿದ್ದಾರೆ. ನನ್ನ ಖಾಕಿ ಯೂನಿಫಾರಂ ಗೌರವ ಮತ್ತು ನನ್ನ ಘನತೆಗೆ ಚ್ಯುತಿ ತಂದಿದ್ದಾರೆ. ನೀನು ನನ್ನನ್ನು ತಿರಸ್ಕರಿಸಿದರೆ ಅಪಹರಿಸಿಕೊಂಡು ಹೋಗಿ ತಾಳಿ ಕಟ್ಟುವುದಾಗಿ ಬೆದರಿಕೆ ಒಡ್ಡಿದ್ದಾರೆ. ಮಾ.11ರಂದು ಸಂಜಯ್‌ ನನ್ನ ಮನೆಗೆ ನುಗ್ಗಿ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಎಫ್ಐಆರ್‌ನಲ್ಲಿ ಮಹಿಳಾ ಪಿಎಸ್‌ಐ ಆರೋಪಿಸಿದ್ದಾರೆ. ಚಂದ್ರಾಲೇಔಟ್‌ ಠಾಣೆ ಪೊಲೀಸರು ತನಿಖೆ ನಡೆಸಿ ಸಂಜಯ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಎಫ್ಐಆರ್‌ನಲ್ಲಿ ಏನಿದೆ?

 ಕರ್ತವ್ಯ ಸ್ಥಳಕ್ಕೆ ಬಂದು ಥಳಿತ

 ಅಪಹರಿಸಿ ವಿವಾಹವಾಗುವ ಬೆದರಿಕೆ

 ಮನೆಗೆ ನುಗ್ಗಿ ಹಲ್ಲೆಗೆ ಯತ್ನ

 ಚಾಕು ಹಿಡಿದು ಜೀವ ಬೆದರಿಕೆ

 ನನ್ನ ಸ್ನೇಹಿತರಿಗೆ ಕರೆ ಮಾಡಿ ಅಪಪ್ರಚಾರ

-ಉದಯವಾಣಿ ಸಮಾಚಾರ

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.