![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 14, 2024, 3:49 PM IST
ಮುಂಬೈ: ದೇಶಿಯ ಕ್ರಿಕೆಟ್ ನ ದಿಗ್ಗಜ ಮುಂಬೈ ತಂಡವು ಮತ್ತೊಮ್ಮೆ ರಣಜಿ ಟ್ರೋಫಿ ಗೆದ್ದುಕೊಂಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ದ 169 ರನ್ ಅಂತರದ ಗೆಲುವು ಸಾಧಿಸಿದೆ.
ಗೆಲುವಿಗೆ 538 ರನ್ ಗಳ ಕಠಿಣ ಗುರಿ ಪಡೆದಿದ್ದ ವಿದರ್ಭ ತಂಡವು 368 ರನ್ ಗಳಿಗೆ ಆಲೌಟಾಯಿತು. ಇದರೊಂದಿಗೆ ಮುಂಬೈ 169 ರನ್ ಅಂತರದ ಗೆಲುವು ಪಡೆಯಿತು. ಮುಂಬೈ ದಾಖಲೆಯ 42ನೇ ಬಾರಿಗೆ ರಣಜಿ ಟ್ರೋಫಿ ಕಪ್ ಗೆದ್ದುಕೊಂಡಿದೆ.
ವಿದರ್ಭ ತಂಡದ ನಾಯಕ ಅಕ್ಷಯ್ ವಾಡ್ಕರ್ (102 ರನ್) ಮತ್ತು ಹರ್ಷ ದುಬೆ (65 ರನ್) ಅವರು ಮೊದಲ ಅವಧಿಗೆ ಮುಂಬೈ ತಂಡವನ್ನು ಗೆಲುವಿನಿಂದ ದೂರವಿಟ್ಟರು. ಕೊನೆಯ ದಿನದಾಟವು ವಿದರ್ಭವು 5 ವಿಕೆಟ್ ಗೆ 248 ರನ್ ಗಳೊಂದಿಗೆ ಆರಂಭಿಸಿತು. ಗೆಲುವಿಗೆ ಇನ್ನೂ 290 ರನ್ಗಳ ಅಗತ್ಯವಿತ್ತು. ಅಂತಿಮವಾಗಿ ತಂಡವು 368 ರನ್ಗಳಿಗೆ ಆಲೌಟ್ ಆಯಿತು.
ಮುಂಬೈ ಪರವಾಗಿ ತನುಷ್ ಕೋಟ್ಯಾನ್ ನಾಲ್ಕು ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ ಮತ್ತು ಮುಶೀರ್ ಖಾನ್ ತಲಾ ಎರಡು ವಿಕೆಟ್ ಕಿತ್ತರು. ಶಮ್ಸ್ ಮಲಾನಿ ಮತ್ತು ಧವಳ್ ಕುಲಕರ್ಣಿ ತಲಾ ಒಂದು ವಿಕೆಟ್ ಕಿತ್ತರು.
42nd RANJI TROPHY FOR MUMBAI…!!!
– Rulers of Indian cricket. 👊⭐pic.twitter.com/5IAHTBTJ21
— Johns. (@CricCrazyJohns) March 14, 2024
ಎರಡನೇ ಇನ್ನಿಂಗ್ಸ್ ನಲ್ಲಿ 136 ರನ್ ಗಳಿಸಿದ ಮುಶೀರ್ ಖಾನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ತನುಷ್ ಕೋಟ್ಯಾನ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.