![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 15, 2024, 2:18 PM IST
ಮುಂಬೈ: ಟೀಂ ಇಂಡಿಯಾ ಆಟಗಾರ, ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕ ಶ್ರೇಯಸ್ ಅಯ್ಯರ್ ಅವರ ಫಿಟ್ನೆಸ್ ಬಗೆಗಿನ ಊಹಾಪೋಹಗಳು ಕ್ರಿಕೆಟ್ ವಲಯಗಳಲ್ಲಿ ಇನ್ನೂ ಮುಂದುವರಿದಿದೆ. ಗುರುವಾರದಂದು ರಣಜಿ ಟ್ರೋಫಿಯಲ್ಲಿ ಮುಂಬೈನ ಜೊತೆಗಿನ ಅಯ್ಯರ್ ಅವರ ಬೆನ್ನಿನ ಗಾಯವು ಉಲ್ಬಣಗೊಂಡಿತು ಎಂದು ವರದಿಯಾಗಿತ್ತು. ಕೆಲವು ಮೂಲಗಳು ಅವರು ಗಾಯದ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಕೆಲವು ಆರಂಭಿಕ ಪಂದ್ಯಗಳಿಂದ ಹೊರಗುಳಿಯಬಹುದು ಎಂದು ಸೂಚಿಸಿದರೆ, ಸಂಬಂಧಪಟ್ಟ ಅಧಿಕಾರಿಗಳು ಪಂದ್ಯಾವಳಿಯಲ್ಲಿ ಅವರ ಭಾಗವಹಿಸುವಿಕೆಗೆ ಯಾವುದೇ ಅಪಾಯವನ್ನು ನಿರಾಕರಿಸಿದ್ದಾರೆ.
“ಆತಂಕಕ್ಕೆ ಕಾರಣವಿಲ್ಲ; ಅವರು ಆರೋಗ್ಯವಾಗಿದ್ದಾರೆ ಮತ್ತು ಎರಡು ದಿನಗಳಲ್ಲಿ ಐಪಿಎಲ್ ಪೂರ್ವ ಶಿಬಿರಕ್ಕಾಗಿ ಕೋಲ್ಕತ್ತಾಗೆ ಹೋಗಲಿದ್ದಾರೆ” ಎಂದು ಮುಂಬೈ ತಂಡದ ಮ್ಯಾನೇಜರ್ ಭೂಷಣ್ ಪಾಟೀಲ್ ಹೇಳಿದ್ದಾರೆ.
ಕೆಕೆಆರ್ ಫ್ರಾಂಚೈಸಿ ಕೂಡಾ ಅಯ್ಯರ್ ಫಿಟ್ ಆಗಿದ್ದಾರೆ ಎಂದು ಹೇಳಿದೆ ಎಂದು ಕ್ರಿಕ್ ಬಜ್ ವರದಿ ಮಾಡಿದೆ. ಆದಾಗ್ಯೂ, ಅಯ್ಯರ್ ಮಾತ್ರ ತನ್ನ ಫಿಟ್ನೆಸ್ ಸ್ಥಿತಿಯನ್ನು ಇನ್ನೂ ಖಚಿತಪಡಿಸಿಲ್ಲ.
ಗುರುವಾರ ಮುಕ್ತಾಯಗೊಂಡ ರಣಜಿ ಟ್ರೋಫಿ ಫೈನಲ್ ನ ನಾಲ್ಕನೇ ಮತ್ತು ಐದನೇ ದಿನಗಳಲ್ಲಿ ವಿದರ್ಭದ ಎರಡನೇ ಇನ್ನಿಂಗ್ಸ್ ನಲ್ಲಿ ಅಯ್ಯರ್ ಫೀಲ್ಡಿಂಗ್ ಬಾರದೆ ಇದ್ದಾಗ ಅವರ ಫಿಟ್ನೆಸ್ ಬಗ್ಗೆ ಪ್ರಶ್ನೆಗಳು ಎದ್ದವು.
ಮುಂಬೈ ಪರವಾಗಿ ಎರಡನೇ ಇನ್ನಿಂಗ್ಸ್ ನಲ್ಲಿ 95 ರನ್ ಗಳಿಸುವ ಸಮಯದಲ್ಲಿ, ಅಯ್ಯರ್ ಅವರು ಎರಡು ಸಂದರ್ಭಗಳಲ್ಲಿ ಫಿಸಿಯೋ ನೆರವು ಪಡೆದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.