Election Manifesto: ಸಾರ್ವಜನಿಕರ ಸಲಹೆ; ಬಿಜೆಪಿ: “ಸಂಕಲ್ಪ ಪತ್ರ’ ಬಿಡುಗಡೆ
Team Udayavani, Mar 16, 2024, 1:33 AM IST
ಮಂಗಳೂರು: ಭಾರತೀಯ ಜನತಾ ಪಕ್ಷ ದ.ಕ. ಲೋಕಸಭಾ ಕ್ಷೇತ್ರದ ನಿಮ್ಮ ಸಲಹೆ- ನಮ್ಮ ಸಂಕಲ್ಪ ಅಭಿಯಾನದ “ಸಂಕಲ್ಪ ಪತ್ರ’ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ನಗರದ ಖಾಸಗಿ ಹೊಟೇಲ್ನಲ್ಲಿ ನಡೆಯಿತು.
ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚುನಾವಣ ಪ್ರಣಾಳಿಕೆ ದ.ಕ. ಜಿಲ್ಲಾ ಸಂಚಾಲಕ ಶಾಂತಾರಾಮ ಶೆಟ್ಟಿ ಅವರು, ದೇಶದಲ್ಲಿ ಕನಿಷ್ಠ ಒಂದು ಕೋಟಿ ಮಂದಿಯ ಸಲಹೆ ಪಡೆಯಲು ಉದ್ದೇಶಿಸಲಾಗಿದ್ದು, ಅದೇ ರೀತಿ ದ.ಕ. ಲೋಕಸಭಾ ಕ್ಷೇತ್ರದಿಂದ 50 ಸಾವಿರ ಮಂದಿಯ ಸಲಹೆ ಪಡೆಯುವ ನಿಟ್ಟಿನಲ್ಲಿ ಸಂಕಲ್ಪ ಪತ್ರ ಬಿಡುಗಡೆ ಮಾಡಲಾಗಿದೆ. ಕಳೆದ 10 ವರ್ಷಗಳ ಬಿಜೆಪಿ ಆಡಳಿತ ಅವಧಿಯಲ್ಲಿ ಶೇ.95ರಷ್ಟು ಭರವಸೆಗಳನ್ನು ಈಡೇರಿಸುವ ಮೂಲಕ ಹೇಳಿದ ಮಾತನ್ನು ಪೂರ್ಣಗೊಳಿಸಿದೆ. ಮುಖ್ಯವಾಗಿ ರಾಮಮಂದಿರ ನಿರ್ಮಾಣ, ತ್ರಿವಳಿ ತಲಾಕ್ ರದ್ದು, ಕಾಶ್ಮೀರ 370ನೇ ವಿಧಿ ರದ್ದು ಮೊದಲಾದ ವಿಚಾರಗಳನ್ನು ಜಾರಿಗೆ ತರಲಾಗಿದೆ.
ಮುಂದಿನ ಒಂದು ತಿಂಗಳ ಕಾಲ ಜಿಲ್ಲೆಯ ಶಾಲೆ, ಕಾಲೇಜು, ದೇವಸ್ಥಾನ, ಮಾಲ್ಗಳಲ್ಲಿ ಸಂಕಲ್ಪ ಪತ್ರವನ್ನು ಹಾಕುವ ಬಾಕ್ಸ್ ಇರಿಸಲಾಗುವುದು. ಸಾರ್ವಜನಿಕರು ಪತ್ರವನ್ನು ಭರ್ತಿ ಮಾಡಿ ಬಾಕ್ಸ್ಗೆ ಹಾಕಬಹುದು. ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿ ಬಿಜೆಪಿ ರಾಷ್ಟ್ರೀಯ ಕಚೇರಿಗೆ ಕಳುಹಿಸಿ, ಪ್ರಣಾಳಿಕೆಯಲ್ಲಿ ಸೇರಿಸಲಾಗುವುದು. ಸಾರ್ವಜನಿಕರು ತಮ್ಮ ಬೇಡಿಕೆಗಳು ಸೇರಿದಂತೆ ಕೃಷಿ, ಮೀನುಗಾರಿಕೆ, ಹೈನುಗಾರಿಕೆ, ಉದ್ದಿಮೆ, ರಸ್ತೆ, ಮೂಲ ಸೌಕರ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಬಹುದಾಗಿದೆ. ನಮೋ ಆ್ಯಪ್ ಮೂಲಕ ಅಥವಾ 9090902024 ಮೊಬೈಲ್ ಸಂಖ್ಯೆಗೆ ಮಿಸ್ಕಾಲ್ ನೀಡುವ ಮೂಲಕವೂ ಸಲಹೆ ನೀಡಬಹುದು ಎಂದರು.
ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬೃಜೇಶ್ ಚೌಟ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ದ.ಕ. ಚುನಾವಣ ಸಂಚಾಲಕ ನಿತಿನ್ ಕುಮಾರ್, ಜಿಲ್ಲಾ ಬಿಜೆಪಿ ಖಜಾಂಚಿ ಸಂಜಯ್ ಪ್ರಭು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.