ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ


Team Udayavani, Mar 16, 2024, 6:18 PM IST

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

ಉದಯವಾಣಿ ಸಮಾಚಾರ
ಮುಧೋಳ: ಕಳೆದ ತಿಂಗಳು ವಾಯವ್ಯ ರಸ್ತೆ ಸಾರಿಗೆ ನಿಮಗದಲ್ಲಿ ಕಾರ್ಯಾರಂಭ ಮಾಡಿದ್ದ ಯುಪಿಐ ವಹಿವಾಟಿನಲ್ಲಿ ಮುಧೋಳ ಘಟಕದ ಸಿಬ್ಬಂದಿ ಅದ್ವಿತೀಯ ಸಾಧನೆಗೈಯುವ ಮೂಲಕ ಸಾರ್ವಜನಿಕರಲ್ಲಿ ಯುಪಿಐ ವಹಿವಾಟಿಗೆ ಪ್ರೇರೇಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿನ ಒಟ್ಟು 50 ಘಟಕಗಳಲ್ಲಿ ಯುಪಿಐ ವಹಿವಾಟು ಕಾರ್ಯಾರಂಭ ಮಾಡಿದ್ದು, ಇದೀಗ ಎಲ್ಲ ಘಟಕಗಳ ವಹಿವಾಟಿನ ಮೊದಲ 10 ಸ್ಥಾನದಲ್ಲಿ ಮುಧೋಳ ಘಟಕವು ನಾಲ್ಕನೇ ಸ್ಥಾನ ಪಡೆಯುವ ಮೂಲಕ ಉತ್ತಮ ಸಾಧನೆಗೈದಿದೆ.

ಫೆ.13ರಂದು ಯುಪಿಐಯನ್ನು ಆಯ್ದ ಘಟಕಗಳಲ್ಲಿ ಕಾರ್ಯಗತಗೊಳಿಸಲಾಗಿತ್ತು. ಡಿಜಿಟಲ್‌ ಇಂಡಿಯಾ ಯೋಜನೆ ಹಾಗೂ
ನಿರ್ವಾಹಕ ಮತ್ತು ಪ್ರಯಾಣಿಕರ ಮಧ್ಯದಲ್ಲಿ ಚಿಲ್ಲರೆ ವ್ಯವಹಾರದ ಕಿರಿಕಿರಿ ತಪ್ಪಿಸುವುದು, ಕ್ಯಾಶ್‌ಲೆಸ್‌ ವ್ಯವಹಾರ ವೃದ್ಧಿಯ ಉದ್ದೇಶದಿಂದ ಆರಂಭಗೊಂಡ ಯುಪಿಐ ವಹಿವಾಟಿಗೆ ಸಾರ್ವಜನಿಕರಿಂದ ಆರಂಭದಲ್ಲಿಯೇ ಉತ್ತಮ ಸ್ಪಂದನೆ ದೊರೆಯಿತು. ಇದೀಗ ಸಾರಿಗೆ ಬಸ್‌ ಗಳಲ್ಲಿ ಒಂದು ತಿಂಗಳಿನ ಅಂತರದಲ್ಲಿ ಲಕ್ಷಾಂತರ ರೂ. ಯುಪಿಐ ವಹಿವಾಟು ನಡೆಯುತ್ತಿದೆ. ಹೀಗೆ ಆರಂಭಗೊಂಡಿರುವ ಯುಪಿಐನಿಂದ ಇದೀಗ ಮುಧೋಳ ಘಟಕ ಮಹತ್ತರ ಸಾಧನೆ ಮಾಡಿದೆ.

ಟಾಪ್‌ ಹತ್ತರಲ್ಲಿ ಜಿಲ್ಲೆಯ ಮೂರು ಘಟಕಗಳು:
ಅಧಿಕಾರಿಗಳು ನೀಡುವ ಮಾಹಿತಿ ಪ್ರಕಾರ  ಮಾ. 3ರಿಂದ ಮಾ.13ರವರೆಗಿನ ಯುಪಿಐ ವಹಿವಾಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ
ಸಾರಿಗೆ ನಿಗಮದಲ್ಲಿ ಗುರುತಿಸಿರುವ ಟಾಪ್‌ 10ರಲ್ಲಿ ಜಿಲ್ಲೆಯ ಮುಧೋಳ, ಬಾಗಲಕೋಟೆ ಹಾಗೂ ಗುಳೇದಗುಡ್ಡ ಘಟಕಗಳು ಸ್ಥಾನ ಪಡೆದುಕೊಂಡಿವೆ. ಮೊದಲ ಹತ್ತರ ಸ್ಥಾನದಲ್ಲಿ ಕ್ರಮವಾಗಿ ಗೋಕಾಕ, ಹುಬ್ಬಳ್ಳಿ-1, ಬೆಳಗಾವಿ, ಮುಧೋಳ, ಹುಬ್ಬಳ್ಳಿ-2, ಬಾಗಲಕೋಟೆ, ಬೆಟಗೇರಿ, ಗುಳೇದಗುಡ್ಡ, ಅಥಣಿ, ಸಂಕೇಶ್ವರ ಘಟಕಗಳು ಸ್ಥಾನ ಪಡೆದುಕೊಂಡಿವೆ.

ಮುಧೋಳ 4, ಬಾಗಲಕೋಟೆ 6 ಹಾಗೂ ಗುಳೇದಗುಡ್ಡ ಘಟಕ 8ನೇ ಸ್ಥಾನ ಪಡೆದುಕೊಂಡಿವೆ. ನಾಲ್ಕನೇ ಸ್ಥಾನದಲ್ಲಿರುವ
ಮುಧೋಳ ಘಟಕದ ವತಿಯಿಂದ ಒಟ್ಟು 11534 ಯುಪಿಐ ವಹಿವಾಟು ನಡೆದಿದೆ. ಒಟ್ಟು 7,67,431 ರೂ. ಸಂಗ್ರಹವಾಗಿದೆ.

ನಿರ್ವಾಹಕನ ಸಾಧನೆ: ಇನ್ನು ಯುಪಿಐ ವಹಿವಾಟಿನಲ್ಲಿ ವಾಯವ್ಯ ರಸ್ತೆ ಸಾರಿಗೆ ನಿಗಮದಲ್ಲಿಯೇ ಅತಿ ಹೆಚ್ಚು ವಹಿವಾಟು
ನಡೆಸುವ ಮೂಲಕ ಮುಧೋಳ ಘಟಕದ ಡಿ.ಆರ್‌. ಬಾಗೇವಾಡಿ ವಿಶೇಷ ಸನ್ಮಾನಕ್ಕೆ ಪಾತ್ರರಾಗಿದ್ದಾರೆ. ಬಾಗೇವಾಡಿ ಮಾ. 6ರಂದು ಒಟ್ಟು 157 ಪ್ರಯಾಣಿಕರಿಂದ ಯುಪಿಐ ವಹಿವಾಟು ನಡೆಸುವ ಮೂಲಕ ಉತ್ತಮ ಕಾರ್ಯನಿರ್ವಹಿಸಿದ್ದಾರೆ.

ನಿರ್ವಾಹಕನ ಕಾರ್ಯವೈಖರಿ ಮೆಚ್ಚಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ್‌ ಎಸ್‌.
ಪ್ರಶಂಸನಾ ಪತ್ರ ನೀಡುವ ಮೂಲಕ ನಿರ್ವಾಹಕನ ಬೆನ್ನುತಟ್ಟುವ ಕೆಲಸ ಮಾಡಿದ್ದಾರೆ.

ಚಿಲ್ಲರೆ ಸಮಸ್ಯೆ ಹಾಗೂ ಕ್ಯಾಶ್‌ಲೆಸ್‌ ವ್ಯವಹಾರದ ಉದ್ದೇಶದಿಂದ ಜಾರಿಗೆ ತಂದಿರುವ ಯುಪಿಐ ವ್ಯವಸ್ಥೆ ಇಂದು ಹೆಚ್ಚು ಜನಪ್ರಿಯವಾಗಿದೆ. ಈ ವಿಭಾಗದಲ್ಲಿ ಮುಧೋಳ ಘಟಕ ಸಲ್ಲಿಸುತ್ತಿರುವ ಸೇವೆ ನಮಗೆ ತೃಪ್ತಿ ತಂದಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರು ಯುಪಿಐ ವಹಿವಾಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೊಡಗಿಕೊಳ್ಳುವ ಮೂಲಕ ವ್ಯವಹಾರ ಸರಳೀಕರಣ
ಮಾಡಿಕೊಳ್ಳಬೇಕು.
ಸಂಗಮೇಶ ಮಾಟೊಳ್ಳಿ, ಮುಧೋಳ ಘಟಕ ವ್ಯವಸ್ಥಾಪಕ 

ಯುಪಿಐನಿಂದ ಚಿಲ್ಲರೆ ಸಮಸ್ಯೆಗೆ ಮುಕ್ತಿ ದೊರೆತಿದೆ. ಸಾರಿಗೆ ಬಸ್‌ನಲ್ಲಿ ಆನ್‌ಲೈನ್‌ ಪೇಮೆಂಟ್‌ ಮಾಡುವ ಮೂಲಕ ಕ್ಯಾಶ್‌ಲೆಸ್‌
ವ್ಯವಹಾರವೂ ಸರಳವಾಗಿದೆ. ಬಸ್‌ನಲ್ಲಿ ಮೊದಲಿಗಿಂತ ಈಗಿನ ಪ್ರಯಾಣ ಹೆಚ್ಚು ಅನುಕೂಲವಾಗಿದೆ.
ಬಸವರಾಜ ಕೋಲೂರ,ಪ್ರಯಾಣಿಕ

*ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.