Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

ರಾಜ್ಯದ ಘಟನಾಘಟಿ ನಾಯಕರು ಭವಿಷ್ಯ ಕಂಡುಕೊಂಡ ಕ್ಷೇತ್ರ; ಒಕ್ಕಲಿಗ ಮತದಾರರೇ ಅಧಿಕ

Team Udayavani, Mar 17, 2024, 7:45 AM IST

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

ರಾಮನಗರ: ಒಂದೆಡೆ ನಾಲ್ಕನೇ ಬಾರಿ ಗೆಲುವಿನ ಕನಸು ಕಾಣುತ್ತಿರುವ ಉಪಮುಖ್ಯಮಂತ್ರಿ ಸಹೋದರ ಡಿ.ಕೆ. ಸುರೇಶ್‌, ಮತ್ತೊಂದೆಡೆ ಹೊಸದಾಗಿ ರಾಜಕೀಯಕ್ಕೆ ಪ್ರವೇಶಿಸಿರುವ ಮಾಜಿ ಪ್ರಧಾನಿ ಅಳಿಯ ಡಾ| ಮಂಜುನಾಥ್‌. ಇಬ್ಬರು ದಿಗ್ಗಜರ ಸ್ಪರ್ಧೆಯೊಂದಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಹೈವೋಲ್ಟೆàಜ್‌ ಅಖಾಡವಾಗಿ ಮಾರ್ಪಟ್ಟಿದೆ.

ರಾಜ್ಯದಲ್ಲಿ ಒಕ್ಕಲಿಗ ನಾಯಕತ್ವದ ಪಟ್ಟಕ್ಕಾಗಿ ಹೋರಾಡುತ್ತಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಪಾಲಿಗೆ ಈ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ. ರಾಮನಗರ ವಿಧಾನಸಭಾ ಚುನಾವಣೆಯಲ್ಲಿ ಪುತ್ರನ ಸೋಲಿಗೆ ಕಾರಣ ವಾದ ಡಿ.ಕೆ.ಸುರೇಶ್‌ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕ ದಳಪತಿಗಳದ್ದಾದರೆ, ಈ ಕ್ಷೇತ್ರದಲ್ಲಿ ಗೆದ್ದು ಎನ್‌ಡಿಎ ಮೈತ್ರಿಕೂಟಕ್ಕೆ ಟಾಂಗ್‌ ನೀಡುವ ಮೂಲಕ ತನ್ನ ರಾಜಕೀಯ ಶಕ್ತಿ ಹೆಚ್ಚಿಸಿಕೊಳ್ಳುವ ತವಕ ಡಿಕೆಎಸ್‌ ಸಹೋದರರದ್ದಾಗಿದೆ. ಹೀಗಾಗಿ ಗ್ರಾಮಾಂತರದಲ್ಲಿ ಚುನಾವಣ ಕಾವು ತುಸು ಜೋರಾಗಿಯೇ ಇದೆ.

ಕ್ಷೇತ್ರ ಪರಿಚಯ
1967ರಲ್ಲಿ ರಚನೆಯಾದ ಕನಕಪುರ ಲೋಕಸಭಾ ಕ್ಷೇತ್ರ 2008ರ ಕ್ಷೇತ್ರ ಪುನರ್‌ ವಿಂಗಡಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವಾಗಿ ಬಲದಾಗಿದ್ದು, ರಾಮನಗರ, ಕನಕಪುರ, ಚನ್ನಪಟ್ಟಣ, ಮಾಗಡಿ, ಕುಣಿಗಲ್‌, ರಾಜರಾಜೇಶ್ವರಿ, ಬೆಂಗಳೂರು ದಕ್ಷಿಣ, ಆನೇಕಲ್‌ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕನಕಪುರ ಕ್ಷೇತ್ರ ವಿದ್ದಾಗಿನಿಂದ ರಾಜಕೀಯವಾಗಿ ಸಾಕಷ್ಟು ಪ್ರಾಮುಖ್ಯ ಪಡೆದಿದ್ದು, ಈ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಕೇಂದ್ರ ಸಚಿವರಾದ ಸಿ.ಕೆ.ಜಾಫರ್‌ ಷರೀಪ್‌, ಎಂ.ವಿ.ರಾಜಶೇಖರನ್‌, ಚಂದ್ರಶೇಖರ್‌ ಮೂರ್ತಿ, ಎಚ್‌.ಡಿ.ಕುಮಾರಸ್ವಾಮಿಯಂತಹ ಘಟಾನುಘಟಿ ರಾಜಕಾರಣಿಗಳು ರಾಜಕೀಯ ಭವಿಷ್ಯ ಕಂಡು ಕೊಂಡಿದ್ದಾರೆ.

ಬಲಾಬಲ
ಪ್ರಸ್ತುತ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 5 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌, ಎರಡರಲ್ಲಿ ಬಿಜೆಪಿ ಮತ್ತು ಒಂದು ಕ್ಷೇತ್ರದಲ್ಲಿ ಜೆಡಿಎಸ್‌ ಗೆಲುವು ಸಾಧಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಅಭ್ಯಥಿಯಾಗಿ ಸ್ಪರ್ಧಿಸಿದ್ದ ಡಿ.ಕೆ.ಸುರೇಶ್‌ 2 ಲಕ್ಷ ಮತಗಳ ಅಂತರದಿಂದ ಬಿಜೆಪಿಯ ಮಾಜಿ ಎಂಎಲ್‌ಸಿ ಅಶ್ವತ್ಥ್ನಾರಾಯಣ ಗೌಡ ಅವರನ್ನು ಸೋಲಿಸಿದ್ದರು.

ಜಾತಿ ಲೆಕ್ಕಾಚಾರ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ 7 ಲಕ್ಷಕ್ಕೂ ಹೆಚ್ಚು ಒಕ್ಕಲಿಗ ಮತದಾರರಿದ್ದಾರೆ. ಉಳಿದಂತೆ 3.50 ಲಕ್ಷ ದಲಿತ ಮತದಾರರು, 2 ಲಕ್ಷ ಮುಸ್ಲಿಮರು, 1.50 ಲಕ್ಷ ಲಿಂಗಾಯತರು, ಜತೆಗೆ ಇತರ ಸಮುದಾಯದವರೂ ಇದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಫಲಿತಾಂಶದ ಆಧಾರದಲ್ಲಿ ಚನ್ನಪಟ್ಟಣ ಹೊರತುಪಡಿಸಿ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಪ್ರಮುಖ ಪಕ್ಷಗಳಾಗಿದ್ದರೆ, ಚನ್ನಪಟ್ಟಣದಲ್ಲಿ ಜೆಡಿಎಸ್‌-ಬಿಜೆಪಿ ಪ್ರಮುಖ ಪಕ್ಷಗಳಾಗಿವೆ. ಇನ್ನು ರಾಜರಾಜೇಶ್ವರಿ, ಬೆಂಗಳೂರು ದಕ್ಷಿಣ, ಆನೇಕಲ್‌ನಲ್ಲಿ ಬಿಜೆಪಿ-ಕಾಂಗ್ರೆಸ್‌ ಪ್ರಬಲ ಪಕ್ಷಗಳಾಗಿವೆ. ಒಂದೆಡೆ ಡಿಸಿಎಂ ತಮ್ಮ ಮತ್ತೂಂದೆಡೆ ಮಾಜಿ ಪ್ರಧಾನಿಗಳ ಅಳಿಯ ಸ್ಪರ್ಧೆಗಿಳಿಯುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಮತದಾರ ಯಾರಿಗೆ ಆಶೀರ್ವದಿಸುತ್ತಾನೆ ಎಂದು ಕಾಯ್ದು ನೋಡಬೇಕಿದೆ.

ಕಳೆದ ಬಾರಿಯ ಫಲಿತಾಂಶ
ವಿಜೇತ ಅಭ್ಯರ್ಥಿ : ಡಿ.ಕೆ.ಸುರೇಶ್‌ ( ಕಾಂಗ್ರೆಸ್‌)
ಪಡೆದ ಮತ: 8,77,712
ಗೆಲುವಿನ ಅಂತರ: 2,07,229

ಮತದಾರರ ವಿವರ 2019         2024
ಮಹಿಳೆಯರು: 12,09,276         13,37,507
ಪುರುಷರು : 1287524                 13,88,731
ಇತರ :341                                     321
ಒಟ್ಟು: 24,97,141                      27,26,559

ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.