Perdoor ಶ್ರೀ ಅನಂತಪದ್ಮನಾಭ ದೇವಸ್ಥಾನ: ಶ್ರೀಮನ್ಮಹಾರಥೋತ್ಸವ ಸಂಪನ್ನ
Team Udayavani, Mar 17, 2024, 12:04 AM IST
ಹೆಬ್ರಿ: ಪೆರ್ಡೂರು ಕದಳೀಪ್ರಿಯ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಶನಿವಾರ ಶ್ರೀಮನ್ಮಹಾರಥೋತ್ಸವ ಸಂಪನ್ನಗೊಂಡಿತು.
ರಾಘವೇಂದ್ರ ತಂತ್ರಿ ಹಾಗೂ ಅರ್ಚಕ ಜಯರಾಮ ಅಡಿಗ ಅವರ ನೇತೃತ್ವದಲ್ಲಿ ಬೆಳಗ್ಗೆ ಪ್ರಧಾನ ಹೋಮ, ಕಲಶಾಭಿಷೇಕ, ರಥಹೋಮ, ರಥಸಂಪ್ರೋಕ್ಷಣೆ, ಕೊಡಿಪೂಜೆ, ಮಹಾಪೂಜೆ, ಪೂರ್ವಾಹ್ನ ರಥಾರೋಹಣ ನಡೆದು ಸಂಜೆ ದೇವರ ಮಹಾಹಾರಥೋತ್ಸವವು ವಿಜೃಂಭಣೆಯಿಂದ ನೆರವೇರಿತು.
ಮಧ್ಯಾಹ್ನದ ಅನ್ನಸಂತರ್ಪಣೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ರಾತ್ರಿ ದೀವಟಿಕೆ ಸಲಾಮ್, ನರ್ತನ, ವಾದ್ಯ ಸೇವೆ, ಹಚ್ಚಡ ಸೇವೆ, ರಥಾವರೋಹಣ, ಪಲ್ಲಕ್ಕಿ ಉತ್ಸವ, ತೆಪ್ಪೋತ್ಸವ, ಓಲಗಮಂಟಪ ಪೂಜೆ, ಅಷ್ಟವಧಾನ ಸೇವೆಗಳು, ಮಹಾಪೂಜೆ, ಶ್ರೀ ಭೂತಬಲಿ, ಕವಾಟಬಂಧನ, ಶಯನೋಲಗ ಇತ್ಯಾದಿ ನಡೆದವು.
ದೇವಸ್ಥಾನದ ಆಡಳಿತಾಧಿಕಾರಿ ಗುರುರಾಜ್, ಕಾರ್ಯನಿರ್ವಹಣಾಧಿಕಾರಿ ರಾಜಗೋಪಾಲ ಉಪಾಧ್ಯಾಯ ಇದ್ದರು. ವಿಶೇಷ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಸುಗಮ ಸಂಚಾರಕ್ಕೆ ಬಸ್ ಮಾರ್ಗದ ಬದಲಾವಣೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.