Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


Team Udayavani, Mar 19, 2024, 3:10 PM IST

11-kushtagi

ಕುಷ್ಟಗಿ: ತಾಲೂಕಿನ ನಿಡಶೇಸಿ ಮೊರಾರ್ಜಿ ವಸತಿ ಶಾಲೆಯ ಅವ್ಯವಸ್ಥೆಗೆ ಕಾರಣರಾದ ಪ್ರಾಂಶುಪಾಲೆಯ ವಿರುದ್ದ ವಿಧ್ಯಾರ್ಥಿಗಳು ಡಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ  ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿ, ಪ್ರಾಂಶುಪಾಲೆ ಸೌಭಾಗ್ಯ ಹಾಗೂ ಸಮಾಜ ವಿಜ್ಞಾನ ಹಾಗೂ ವಿಜ್ಞಾನ ಶಿಕ್ಷಕರ ವಿರುದ್ದ ಆಕ್ರೋಶ ಹೊರ ಹಾಕಿದರು.

ತರಗತಿ ಹಾಗೂ ವಸತಿ ನಿಲಯದ ಮೂಲ ಸೌಕರ್ಯಗಳ  ಅವ್ಯವಸ್ಥೆಯ ಬಗ್ಗೆ ವಿಧ್ಯಾರ್ಥಿಗಳು ಪ್ರಶ್ನಿಸಿದರೆ ಪ್ರಶ್ನಿಸಿದ ವಿಧ್ಯಾರ್ಥಿಯನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಜಾತೀಯವಾಗಿ ಹಾಗೂ ಅಶ್ಲೀಲವಾಗಿ ನಿಂದಿಸುತ್ತಿದ್ದಾರೆ. ಸಮಾಜ ವಿಜ್ಞಾನ ಹಾಗೂ ವಿಜ್ಞಾನ ಸರಿಯಾಗಿ ಪಾಠ ಮಾಡುವುದಿಲ್ಲ. ವಿಜ್ಞಾನ ಪ್ರಯೋಗಾಲಯ ಸರಿಯಾಗಿಲ್ಲ. ಸಮಾಜ ವಿಜ್ಞಾನ ಶಿಕ್ಷಕನಿಗೆ ಪಾಠ ಮಾಡಲು ಬರುವುದಿಲ್ಲ. ಸುಮ್ಮನೇ ಓದಿ ಹೋಗ್ತಾರೆ. ಕನ್ನಡ ಶಿಕ್ಷಕರೊಬ್ಬರು ತರಗತಿ ಕೊಠಡಿಯಲ್ಲಿ ವಿಮಲ್ ಗುಟ್ಕಾ ಹಾಕುತ್ತಾರೆಂದು ವಿಧ್ಯಾರ್ಥಿಗಳು ಗಂಭೀರವಾಗಿ ಆಕ್ಷೇಪಿಸಿದರು.

ಖರ್ಚು ಉಳಿಸಲು ಕಡಿಮೆ ಗುಣಮಟ್ಟದ ಪಾಮ್ ಎಣ್ಣೆಯನ್ನು ಅಡುಗೆಗೆ ಬಳಸುತ್ತಿದ್ದು, ಅಡುಗೆ ರುಚಿಸುವುದಿಲ್ಲ. ಅಡುಗೆ ರುಚಿ ಇಲ್ಲ ಎಂದು ಹೇಳುವುದು ತಪ್ಪಾಗಿದೆ. ಈ ಅವ್ಯವಸ್ಥೆಗಳೇನೆ ಇದ್ದರೂ, ಪ್ರಾಂಶುಪಾಲೆಯ ಪತಿ ಸರ್ಕಾರಿ ನೌಕರನಾಗಿದ್ದರೂ ಹಸ್ತಕ್ಷೇಪ ಮಾಡುತ್ತಿದ್ದಾರೆ. ಪ್ರಾಂಶುಪಾಲೆಯ ಗಂಡ ವಸತಿ ಶಾಲೆಗೆ ಸಂಬಂಧಿಸಿಲ್ಲ. ಆದರೂ ಪ್ರಶ್ನಿಸಿದ ವಿದ್ಯಾರ್ಥಿಗೆ ಚಪ್ಪಲಿಯಿಂದ ಹೊಡೆಯುವುದಾಗಿ ಬೆದರಿಸಿದ್ದಾನೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿಧ್ಯಾರ್ಥಿಗಳಿಗೆ ತರಗತಿಯಲ್ಲಿ ತಿಳಿಯದ ಗೊಂದಲಗಳಿಗೆ ವಿಷಯಗಳ ಪರಿಹಾರಕ್ಕಾಗಿ ವಿಷಯ ಶಿಕ್ಷಕರ ಭೇಟಿಗೆ ಅವಕಾಶ ನೀಡದೆ ನಿರ್ಬಂಧಿಸಿದ್ದಾರೆಂದು ಆರೋಪಿಸಿದ್ದರು.

ಈ ಪ್ರಾಂಶುಪಾಲೆ ಅಧಿಕಾರ ವಹಿಸಿಕೊಂಡಾಗಿನಿಂದ ಸಮಸ್ಯೆ ಉಲ್ಬಣಿಸಿದ್ದು ಯಾರಾದ್ರೂ ಮೇಲಾಧಿಕಾರಿಗಳು ಭೇಟಿ ನೀಡಿದರೆ ಶಾಲೆಯಲ್ಲಿ ಏನು ಕೊರತೆ ಇಲ್ಲ. ಎಲ್ಲವೂ ಸರಿಯಾಗಿ ಇದೆ ಎಂದು  ಹೇಳಿಸುತ್ತಿದ್ದಾರೆ.

ಮೊರಾರ್ಜಿ ವಸತಿ ನಿಲಯ ಅವ್ಯವಸ್ಥೆಗೆ ವಿಧ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ಪಾಲಕರು ಸಹ ಸಾಥ್ ನೀಡಿದ್ದರಿಂದ ಪ್ರತಿಭಟನೆ ತೀವ್ರವಾಗಿದೆ. ಸಂಬಂಧಿಸಿದ ಅಧಿಕಾರಿ, ಜಿಲ್ಲಾಧಿಕಾರಿ ಬರುವವರೆಗೂ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪ್ರಾಂಶುಪಾಲೆ ಸೌಭಾಗ್ಯ ಪ್ರತಿಕ್ರಿಯಿಸಿ, 30 ವರ್ಷಗಳ ಹಳೆಯ ಶಾಲೆ ಇದು, ಹಾಗಾಗಿ ಸಮಸ್ಯೆಗಳಿವೆ. ಕಳೆದ 8 ತಿಂಗಳಿನಿಂದ ಕರೆಂಟ್ ‌ಬಿಲ್ ಬಿಡುಗಡೆಯಾಗಿಲ್ಲ. ದುರಸ್ಥಿಗೆಗೆ ಅನುದಾನ ಅವಶ್ಯತಕೆ ಇದೆ. ದುರಸ್ಥಿ ವಿಳಂಬವಾಗಿರುವುದಕ್ಕೆ ವಿದ್ಯಾರ್ಥಿಗಳು ನನ್ನ ಮೇಲೆ ಕಳ್ಳನ ಆರೋಪ ಹೊರೆಸಿದ್ದಾರೆ. ಕಳೆದ ಫೆ.24 ರಂದು ನಡೆದ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನದ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ನಮ್ಮ ವಿರುದ್ದ ತಿರುಗಿ ಬೀಳುವಂತೆ ಮಾಡಿದ್ದಾರೆಂದು ಆರೋಪಿಸಿದರು.

ಈ ವಸತಿ ಶಾಲೆಯಲ್ಲಿ 246 ವಿದ್ಯಾರ್ಥಿಗಳಿದ್ದು, ವಾರ್ಡನ್ ಸೇವೆ ಇಲ್ಲ. ಶಿಕ್ಷಕರಿಗೆ ಪ್ರತಿಯೊಬ್ಬರಿಗೆ ಒಂದೊಂದು ದಿನ ಜವಾಬ್ದಾರಿವಹಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.