Lok Sabha Polls: ಪ್ರಚಾರಕ್ಕೆ ಸರಕಾರಿ ವಾಹನಗಳ ಬಳಕೆ ಸಂಪೂರ್ಣ ನಿಷೇಧ

ಅಧ್ಯಕ್ಷರು-ಅಧಿಕಾರಿಗಳು ಮನೆಯಿಂದ ಕಚೇರಿಗೆ ಬರಲು ಬಳಸಬಹುದು; ಬಳಕೆಗೆ ಮಾರ್ಗಸೂಚಿ ಹೊರಡಿಸಿದ ಡಿಪಿಎಆರ್‌

Team Udayavani, Mar 19, 2024, 11:32 PM IST

Lok Sabha Polls: ಪ್ರಚಾರಕ್ಕೆ ಸರಕಾರಿ ವಾಹನಗಳ ಬಳಕೆ ಸಂಪೂರ್ಣ ನಿಷೇಧ

ಬೆಂಗಳೂರು: ಚುನಾವಣ ಪ್ರಚಾರ, ಚುನಾವಣ ಕೆಲಸ ಮತ್ತು ಚುನಾವಣ ಪ್ರಚಾರ ಸಂಬಂಧಿತ ಎಲ್ಲ ಚಟುವಟಿಕೆಗಳಲ್ಲಿ ಸರಕಾರಿ ವಾಹನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುತ್ತಿರುವಂತೆಯೇ ಚುನಾವಣ ಆಯೋಗದ ಸೂಚನೆಯಂತೆ ಆದೇಶ ಹೊರಡಿಸಿರುವ ಇಲಾಖೆಯ ಕಾರ್ಯದರ್ಶಿ ರಣದೀಪ್‌ ಡಿ. ಅವರು ಸರಕಾರಿ, ಸಾರ್ವಜನಿಕ ಸ್ವಾಮ್ಯದ, ಸಾರ್ವಜನಿಕ ಅಧೀನದ, ಸ್ಥಳೀಯ ಸಂಸ್ಥೆಗಳ, ಸಹಕಾರಿ ಸಂಘ ಸೇರಿ ಸಾರ್ವಜನಿಕ ನಿಧಿ ಬಳಸುವ ಸಂಸ್ಥೆಗಳ ಕಾರು, ಜೀಪುಗಳು, ಹೆಲಿಕಾಪ್ಟರ್‌, ವಿಮಾನ, ಸರಕು ಸಾಗಣೆ ವಾಹನಗಳು, ಇ-ವಾಹನ, ಇ-ರಿಕ್ಷಾ, ದ್ವಿಚಕ್ರ ವಾಹನ, ಬೋಟ್‌ ಇತ್ಯಾದಿಗಳನ್ನು ಬಳಸುವಂತಿಲ್ಲ.

ಆದರೆ ಸ್ವಾಯತ್ತ ಸಂಸ್ಥೆಗಳ ಮುಖ್ಯಸ್ಥರು, ಉಪಮುಖ್ಯಸ್ಥರು, ಅಧ್ಯಕ್ಷರು, ಉಪಾಧ್ಯಕ್ಷರು, ಆಯುಕ್ತರು ಮಂತಾದವರು ರಾಜ್ಯ ಸರಕಾರ ನೀಡಿರುವ ವಾಹನವನ್ನು ತಮ್ಮ ಮನೆಯಿಂದ ಕಚೇರಿಗೆ ಬಂದು ಹೋಗಲು ಮಾತ್ರ ಬಳಸಬಹುದು ಎಂಬ ವಿನಾಯಿತಿ ನೀಡಲಾಗಿದೆ.

ಸರಕಾರಿ ವಾಹನಗಳನ್ನು ಚುನಾವಣ ಪ್ರಕ್ರಿಯೆಯಲ್ಲಿ ಬಳಸಬಾರದೆಂಬ ನಿಯಮ ಲೋಕಸಭಾ ಚುನಾವಣೆಯ ಸಂದರ್ಭ ಲೋಕಸಭಾ ಸ್ಪೀಕರ್‌, ಉಪಸ್ಪೀಕರ್‌ ಮತ್ತು ರಾಜ್ಯಸಭೆಯ ಉಪಸ್ಪೀಕರ್‌ಗೂ ಅನ್ವಯವಾಗಲಿದೆ ಎಂದು ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.

ಜಿಲ್ಲಾಡಳಿತ ಸರಕಾರಿ ವಾಹನಗಳನ್ನು ಚುನಾವಣ ಉದ್ದೇಶಕ್ಕೆ ಬಳಸಲಾಗುತ್ತಿ ದೆಯೇ ಎಂದು ಕಣ್ಣಿಡಬೇಕು. ಒಂದು ವೇಳೆ ಚುನಾವಣ ಉದ್ದೇಶಕ್ಕೆ ದುರುಪ ಯೋಗಪಡಿಸಿಕೊಂಡರೆ ಅಂತಹ ವಾಹನಗಳನ್ನು ತತ್‌ಕ್ಷಣವೇ ವಶಕ್ಕೆ ಪಡೆದುಕೊಳ್ಳ ಬೇಕು. ಚುನಾವಣ ಪ್ರಕ್ರಿಯೆ ಪೂರ್ಣ ಗೊಳ್ಳುವ ತನಕ ಆ ವಾಹನವನ್ನು ವಶದಲ್ಲಿಟ್ಟುಕೊಳ್ಳಬೇಕು ಎಂದು ಮಾರ್ಗಸೂಚಿ ಯಲ್ಲಿ ನಿಯಮಗಳನ್ನು ಉಲ್ಲೇಖಿಸಲಾಗಿದೆ.
ಪ್ರಧಾನಮಂತ್ರಿ, ಭಯೋತ್ಪಾದಕ ಹಾಗೂ ಉಗ್ರಗಾಮಿಗಳಿಂದ ಜೀವ ಬೆದರಿಕೆ ಎದುರಿಸುತ್ತಿರುವ ರಾಜಕೀಯ ವ್ಯಕ್ತಿಗಳಿಗೆ ಮಾತ್ರ ಈ ವಾಹನ ನಿಷೇಧದಿಂದ ವಿನಾಯಿತಿ ನೀಡಲಾಗಿದೆ.

ಹಾಗೆಯೇ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಮತ್ತು ಅವರ ಪಕ್ಷದ ನಾಯಕರು ಬಳಸುವ ವಾಹನಗಳ ಮೇಲೆ ನಿಗಾ ಇಡಬೇಕು. ಇಂತಹ ವಾಹನಗಳನ್ನು ಮತದಾರರಿಗೆ ಬೆದರಿಕೆ ಒಡ್ಡಲು, ಆಮಿಷವೊಡ್ಡಲು, ಕಾನೂನು ಬಾಹಿರವಾಗಿ ಆಯುಧ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಸಲಾಗುತ್ತಿದೆಯೇ ಎಂಬುದರ ಮೇಲೆ ಕಣ್ಣಿಡಬೇಕು ಎಂದು ಸೂಚಿಸಲಾಗಿದೆ.

ಮಾಹಿತಿ ನೀಡಬೇಕು
ಭದ್ರತಾ ವಾಹನಗಳನ್ನು ಹೊರತುಪಡಿಸಿದ ಹತ್ತು ವಾಹನಗಳಿಗಿಂತ ಹೆಚ್ಚು ವಾಹನಗಳನ್ನು ಬೆಂಗಾವಲಾಗಿ ಬಳಸುವಂತಿಲ್ಲ. ವೀಡಿಯೋ ವಾಹನಗಳ ಬಳಕೆಗೆ ಚುನಾವಣ ಆಯೋಗದ ಅನುಮತಿ ಕಡ್ಡಾಯ. ಚುನಾವಣ ಪ್ರಚಾರ ಆರಂಭಕ್ಕೆ ಮುಂಚಿತವಾಗಿ ಪ್ರಚಾರಕ್ಕೆ ಬಳಸುವ ವಾಹನಗಳ ಮಾಹಿತಿಯನ್ನು ಜಿಲ್ಲಾ ಚುನಾವಣ ಅಧಿಕಾರಿಗೆ ನೀಡಬೇಕು. ಚುನಾವಣ ಪ್ರಚಾರಕ್ಕೆ ನೋಂದಾಯಿಸದ ವಾಹನ ಪ್ರಚಾರದಲ್ಲಿ ಪಾಲ್ಗೊಂಡರೆ ಅದನ್ನು ಅನಧಿಕೃತ ಪ್ರಚಾರ ಎಂದು ಪರಿಗಣಿಸಬೇಕು. ಸೈಕಲ್‌ ರಿಕ್ಷಾವನ್ನು ಸಹ ವಾಹನವೆಂದೇ ಪರಿಗಣಿಸಲಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಪ್ರಧಾನ ಮಂತ್ರಿಗಳಿಗೆ ಮಾತ್ರ ಸರಕಾರಿ ಏರ್‌ಕ್ರಾಫ್ಟ್ ಬಳಕೆಗೆ ಅವಕಾಶವಿದೆ. ಮುಖ್ಯಮಂತ್ರಿ ಸೇರಿ ಇತರರು ಸರಕಾರಿ ವಿಮಾನ ಬಳಸಬಹುದು. ಖಾಸಗಿ ವಿಮಾನ, ಹೆಲಿಕಾಫ್ಟರ್‌ ಬಳಕೆಯ ಬಗ್ಗೆ ಮೂರು ದಿನಗಳ ಮೊದಲೇ ಸಂಪೂರ್ಣ ಮಾಹಿತಿ ನೀಡಬೇಕು. ಚುಣಾವಣೆಯ ದಿನದಂದು ಸರ್ವೇಕ್ಷಣೆಗೆ ವಿಮಾನ ಬಳಸುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.