![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Mar 20, 2024, 12:43 AM IST
ಕಾಸರಗೋಡು: ಪೆರಿಯ ಚಾಲಿಂಗಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸೊಂದು ಮಗುಚಿ ಬಿದ್ದು ಚಾಲಕ ಸಾವಿಗೀಡಾಗಿ, ವಿದ್ಯಾರ್ಥಿಗಳು ಸಹಿತ 20 ಮಂದಿ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಚಾಲಕ ಮನ್ನಿಪ್ಪಾಡಿ ಧೂಮಾವತಿ ರಸ್ತೆ ನಿವಾಸಿ ಚೇತನ್ ಕುಮಾರ್ (37) ಸಾವಿಗೀಡಾದರು.
ಮಂಗಳೂರಿನಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದಾಗ ಪುಲ್ಲೂರು-ಪೆರಿಯ ಪಂಚಾಯತ್ ಕಚೇರಿ ಸಮೀಪದಲ್ಲಿ ಮಗುಚಿ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಅಂಗವಾಗಿ ಟೋಲ್ ಬೂತ್ ಸ್ಥಾಪಿಸುವ ಅಂಗವಾಗಿ ಚಾಲಿಂಗಾಲ್ ಮೊಟ್ಟದಲ್ಲಿ ರಸ್ತೆ ತಿರುವು ನೀಡಲಾಗಿತ್ತು. ಇಲ್ಲಿನ ತಿರುವಿನಲ್ಲಿ ಬಸ್ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದು, ಬಸ್ಸಿನಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದವರನ್ನು ಅಗ್ನಿಶಾಮಕ ದಳ, ಪೊಲೀಸರು ಹಾಗು ಸ್ಥಳೀಯರು ಸೇರಿ ಮೇಲೆಕ್ಕೆತ್ತಿದ್ದರು. ಸಣ್ಣ ಪುಟ್ಟ ಗಾಯಗೊಂಡ ವಿದ್ಯಾರ್ಥಿಗಳ ಸಹಿತ 20 ಮಂದಿ ಪ್ರಯಾಣಿಕರನ್ನು ಕಾಂಞಂಗಾಡ್ನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.