![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 20, 2024, 1:02 AM IST
ಮಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ ವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಮಂಗಳೂರು ಪೂರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಿಜೈಯ ಕಿಶನ್ (30) ಮತ್ತು ಮಲ್ಲಿಕಟ್ಟೆಯ ಹಿತೇಶ್ (29) ಬಂಧಿತರು. ಪಿಎಸ್ಐ ಪ್ರತಿಭಾ ಅವರಿಗೆ ಮಾ. 17ರಂದು ದೊರೆತ ಖಚಿತ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಆರೋಪಿಗಳು ಪಂಪ್ವೆಲ್ನಿಂದ ನಂತೂರು ಕಡೆಗೆ ಹೋಗುವ ರಸ್ತೆಯಲ್ಲಿ ಸ್ಕೂಟರ್ನಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದರು. ಆರೋಪಿಗಳನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ 155 ಗ್ರಾಂ ತೂಕದ ಸುಮಾರು 10,000 ರೂ. ಮೌಲ್ಯದ ಗಾಂಜಾ, ಕೃತ್ಯಕ್ಕೆ ಉಪಯೋಗಿಸಿದ ಡಿಯೋ ಸ್ಕೂಟರ್ ಅನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್ ಮತ್ತು ಬಿ.ಪಿ. ದಿನೇಶ್ ಕುಮಾರ್ ನಿರ್ದೇಶನದಂತೆ ಎಸಿಪಿ ಪ್ರತಾಪ್ಸಿಂಗ್ ತೋರಟ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕ ಸೋಮಶೇಖರ್ ಜೆ.ಸಿ., ಪಿಎಸ್ಐ ಪ್ರತಿಭಾ ಮತ್ತು ಅಪರಾಧ ಪತ್ತೆ ವಿಭಾಗದ ಸಿಬಂದಿ ಪಾಲ್ಗೊಂಡಿದ್ದರು.
ಗಾಂಜಾ ಸೇವನೆ: ಸೆರೆ
ಮಂಗಳೂರು: ಮಂಗಳೂರು ಉತ್ತರ ಠಾಣೆಯ ಪೊಲೀಸರು ಮಾ.16ರಂದು ಬೆಳಗ್ಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ನಗರದ ಮಾಲ್ವೊಂದರ ಬಳಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಕೇರಳ ಕಣ್ಣೂರಿನ ನಿವಾಸಿ ಫೈಸಲ್ ಪಿ. ನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
You seem to have an Ad Blocker on.
To continue reading, please turn it off or whitelist Udayavani.