Wenlock Hospital ವಿಳಂಬವಿಲ್ಲದೆ ಗುಣಮಟ್ಟದ ಚಿಕಿತ್ಸೆ: ಅಧೀಕ್ಷಕರು


Team Udayavani, Mar 20, 2024, 1:24 AM IST

Wenlock Hospital ವಿಳಂಬವಿಲ್ಲದೆ ಗುಣಮಟ್ಟದ ಚಿಕಿತ್ಸೆ: ಅಧೀಕ್ಷಕರು

ಮಂಗಳೂರು: ವೆನ್ಲಾಕ್‌ ಜಿಲ್ಲಾಸ್ಪತ್ರೆಯಲ್ಲಿ ಯಾವುದೇ ವಿಳಂಬ ಮಾಡದೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು ತಿಳಿಸಿದ್ದಾರೆ. ವೆನ್ಲಾಕ್‌ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆಯ ಬಗ್ಗೆ ಸಾರ್ವ ಜನಿಕರೋರ್ವರು ಪೊಲೀಸರಿಗೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಅಧೀಕ್ಷಕರು ಈ ಹೇಳಿಕೆ ನೀಡಿದ್ದಾರೆ.

ಜಿಲ್ಲಾಸ್ಪತ್ರೆ 175 ವರ್ಷಗಳಿಂದ ದಕ್ಷಿಣ ಕನ್ನಡ ಮಾತ್ರವಲ್ಲದೆ ಸುತ್ತಲಿನ ಏಳೆಂಟು ಜಿಲ್ಲೆಗಳು ಮತ್ತು ನೆರೆಯ ಕೇರಳ ರಾಜ್ಯದ ರೋಗಿಗಳಿಗೂ ಸಮರ್ಪಕ ಸೇವೆ ಸಲ್ಲಿಸುತ್ತಿದೆ. ತುರ್ತು ಚಿಕಿತ್ಸೆಗೆ ಮೂಲ ಸೌಕರ್ಯಗಳು ಲಭ್ಯವಿದೆ.

ಮಾ.18ರಂದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯನಿರತ ವೈದ್ಯಾಧಿಕಾರಿ, ಕೆಎಂಸಿ ತಜ್ಞ ವೈದ್ಯರು, ಶುಶ್ರೂಷಾಧಿಕಾರಿಗಳು ಮತ್ತು ಸಿಬಂದಿ ಕರ್ತವ್ಯದಲ್ಲಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ತತ್‌ಕ್ಷಣವೇ ತುರ್ತುಚಿಕಿತ್ಸೆ ನೀಡಲಾಗಿದೆ. ರೋಗಿ ಚೇತರಿಸಿ ಕೊಂಡಿದ್ದಾರೆ. ವೆನ್ಲಾಕ್‌ ನಲ್ಲಿ ಕ್ಯಾಶು ವಲ್ಟಿ ಕ್ರಿಟಿಕಲ್‌ ಕೇರ್‌ ಏರಿಯಾದಲ್ಲಿ 6 ಬೆಡ್‌ಗಳು, ಎಕ್ಸ್‌ಟೆಂಡೆಡ್‌ ಕ್ಯಾಶುವಲ್ಟಿಯಲ್ಲಿ 8 ಬೆಡ್‌ಗಳು ಹಾಗೂ ಕ್ಯಾಶುವಲ್ಟಿ ಎಮರ್ಜೆನ್ಸಿ ಐಸಿ ಯು ನಲ್ಲಿ 12 ಬೆಡ್‌ಗಳಿದ್ದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಬೆಡ್‌ಗಳ ಕೊರತೆ ಇಲ್ಲ ಎಂದವರು ತಿಳಿಸಿದ್ದಾರೆ.

ಕೆಲವೊಮ್ಮೆ ಅಂತರ್ಜಾಲ, ಸರ್ವರ್‌ ತೊಂದರೆಯಿಂದಾಗಿ ಹೊರ ರೋಗಿಗಳಿಗೆ ಚೀಟಿ ನೀಡಲು ವಿಳಂಬವಾಗುತ್ತಿದ್ದು ಮ್ಯಾನುವಲ್‌ ಎಂಟ್ರಿ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ವೆನ್ಲಾಕ್‌ ಜಿಲ್ಲಾಸ್ಪತ್ರೆಯು ಕಸ್ತೂರ್ಬಾ ಮೆಡಿಕಲ್‌ ಕಾಲೇಜಿನೊಂದಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸರಕಾರಿ ತಜ್ಞ ವೈದ್ಯರು, ಕೆಎಂಸಿ ತಜ್ಞ ವೈದ್ಯರು, ಸ್ನಾತಕೋತ್ತರ ವೈದ್ಯರು ಹಾಗೂ ಎಂಬಿಬಿಎಸ್‌ ಗೃಹ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಜಿಲ್ಲಾಸ್ಪತ್ರೆಗೆ ಬರುವ ಹೃದಯ ಸಂಬಂಧಿ ರೋಗಿಗಳಿಗೆ ತುರ್ತು ಚಿಕಿತ್ಸೆಯನ್ನು ನೀಡಿ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾ ಯಿತ ಖಾಸಗಿ ಆಸ್ಪತ್ರೆಗಳಿಗೆ ರೆಫ‌ರ್‌ ಮಾಡ ಲಾಗು ತ್ತಿದೆ. 2024-25ನೇ ಸಾಲಿನಲ್ಲಿ ಕೆಎಂಸಿ ವತಿಯಿಂದ ಕ್ಯಾಥ್‌ಲ್ಯಾಬ್‌ ನಿರ್ಮಿಸಲು ಒಪ್ಪಿಕೊಂಡಿದ್ದು ಹೊಸ ಸರ್ಜಿಕಲ್‌ ನೆಲ ಅಂತಸ್ತಿನಲ್ಲಿ ಕ್ಯಾಥ್‌ಲ್ಯಾಬ್‌ ಸೇವೆ ಆರಂಭಿಸ ಲಾಗುವುದು. ತುರ್ತು ಚಿಕಿತ್ಸಾ ವಿಭಾಗದಲ್ಲಿ ರೋಗಿಗಳ ಚಿಕಿತ್ಸೆಗೆ ಔಷಧ, ವೈದ್ಯಕೀಯ ಉಪಕರಣಗಳು, ಗಾಲಿ ಕುರ್ಚಿಗಳು ಹಾಗೂ ಆಕ್ಸಿಜನ್‌ ಟ್ರಾಲಿಗಳು ಸಾಕಷ್ಟು ಪ್ರಮಾಣದಲ್ಲಿ ಇವೆ. ರೋಗಿಗಳ ಪರಿಚಾರಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆಯೂ ಇದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.