D.K. ಜಿಲ್ಲೆಯಲ್ಲಿ 1,61,053 ಟನ್‌, ಉಡುಪಿ 2,00431 ಟನ್‌ ಮೇವು ದಾಸ್ತಾನು


, Mar 20, 2024, 8:51 AM IST

Udayavani Kannada Newspaper

ಮಂಗಳೂರು: ಈ ಬಾರಿ ಕರಾವಳಿಯಲ್ಲಿ ಬೇಸಗೆಯ ಬೇಗೆ ಹೆಚ್ಚುತ್ತಿದ್ದರೂ ಜಾನುವಾರುಗಳಿಗೆ ಮೇವಿನ ಕೊರತೆ ಬಾಧಿಸದು. ಸದ್ಯದ ಲೆಕ್ಕದ ಪ್ರಕಾರ ಜೂನ್‌ ವರೆಗೂ ಮೇವು ದಾಸ್ತಾನಿದೆ.

ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿಯಲ್ಲಿ ಅತೀ ಹೆಚ್ಚು ದನ, ಕರು, ಎಮ್ಮೆ, ಕೋಣಗಳಿವೆ. ಇವುಗಳಿಗೆ ಹಸಿ ಹುಲ್ಲು, ಒಣ ಹುಲ್ಲುಗಳ ಅವಶ್ಯಕತೆ ಹೆಚ್ಚಿರುತ್ತದೆ.ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ 1.61 ಲಕ್ಷ ಟನ್‌ ಮೇವು ಲಭ್ಯವಿದ್ದು, ಸುಮಾರು 15 ವಾರಗಳಿಗೆ ಮತ್ತು ಉಡುಪಿಯಲ್ಲಿ ಸಂಗ್ರಹವಿರುವ 2 ಲಕ್ಷ ಟನ್‌ ಮೇವು 19 ವಾರಗಳಿಗೆ ಸಾಕಾಗಲಿದೆ ಎಂಬುದು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಅಧಿಕಾರಿಗಳು.

ಉಡುಪಿ ಜಿಲ್ಲೆಯಲ್ಲಿ 2,57,184 ಜಾನುವಾರುಗಳು ಮತ್ತು 3107 ಕುರಿ- ಮೇಕೆಗಳಿದ್ದು, ವಾರಕ್ಕೆ 10,812 ಟನ್‌ ಮೇವಿನ ಅಗತ್ಯವಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, 52,423 ಜಾನುವಾರುಗಳಿದ್ದು, 32,508 ಕುರಿ ಮತ್ತು ಮೇಕೆಗಳಿವೆ. ಇವುಗಳಿಗೆ ವಾರಕ್ಕೆ ಕನಿಷ್ಠ 10,716 ಟನ್‌ಗಳಷ್ಟು ಮೇವು ಅಗತ್ಯವಿದೆ.

ಮೇವಿನ ಬೀಜದ ಕಿಟ್‌ ವಿತರಣೆ

ಉಡುಪಿ ಜಿಲ್ಲೆಯಲ್ಲಿ ಕೆಎಂಎಫ್‌ ವತಿಯಿಂದ 3,918 ಮಿನಿಕಿಟ್‌ಗಳನ್ನು 1306 ರೈತರಿಗೆ ವಿತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 720 ಮಿನಿ ಕಿಟ್‌ ಗಳನ್ನು ವಿತರಿಸಲಾಗಿದೆ. ಇದರಲ್ಲಿ ಹೈಬ್ರಿಡ್‌ ಮಲ್ಟಿಕಟ್‌ ಫ್ರೇಜ್‌ ಬಾಜ್ರಾ, ಕೌಪೀ, ಸೋರ್ಗಮ್‌, ಎಟಿಎಂ ಬೀಜಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೊçಲದ ಪಶು ಸಂಗೋಪನಾ ಕೇಂದ್ರದಲ್ಲಿಯೂ ಹುಲ್ಲುಗಳನ್ನು ಬೆಳೆಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ವರ್ಷ ಎಪ್ರಿಲ್‌ನಲ್ಲಿ ಒಂದೆರಡು ಸಾಮಾನ್ಯ ಮಳೆಯಾಗುತ್ತದೆ. ಅದೇ ರೀತಿ ಈ ಬಾರಿಯೂ ಮಳೆಯಾದರೆ ಮೇವಿನ ಸಮಸ್ಯೆಯೇ ಇರದು ಎಂಬುದು ಇಲಾಖೆಯ ವಿವರಣೆ.

600 ಟನ್‌ ಮೇವಿಗೆ ಟೆಂಡರ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಬರ ಪೀಡಿತ ತಾಲೂಕುಗಳು ಎಂದು ಘೋಷಣೆಯಾಗಿರುವ ಮೂಡುಬಿದಿರೆ ಮತ್ತು ಮಂಗಳೂರಿಗೆ ಸಂಬಂಧಿಸಿದಂತೆ ಮೇವಿಗೆ ಸಮಸ್ಯೆಯಾಗದಂತೆ ಮುಂಜಾಗ್ರತೆ ಕ್ರಮವಾಗಿ 600 ಟನ್‌ ಮೇವು (ಹುಲ್ಲು) ತರಿಸಿಕೊಳ್ಳಲು ಟೆಂಡರ್‌ ಕರೆಯಲಾಗಿದೆ. ಆದರೆ ಇಂಥ ಯಾವುದೇ ಕ್ರಮ ಸದ್ಯಕ್ಕೆ ಉಡುಪಿ ಜಿಲ್ಲೆಯಲ್ಲಿ ನಡೆದಿಲ್ಲ. ಇದರೊಂದಿಗೆ ಮೇವು ಉತ್ಪಾದನೆ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಜಿಲ್ಲಾ ಮಟ್ಟದ ಮೇವು ಅಭಿವೃದ್ಧಿ ಕಾರ್ಯಪಡೆ ರಚಿಸಲಾಗಿದೆ. ಜಿಲ್ಲಾಧಿಕಾರಿ ಅಧ್ಯಕ್ಷತೆ ಮತ್ತು ಜಿಪಂ ಸಿಇಒ ಅವರ ಸಹ ಅಧ್ಯಕ್ಷತೆಯಲ್ಲಿ ಮೇವು ನಿರ್ವಹಣ ಸಮಿತಿ, ಕೃಷಿ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆಯ ಅಧಿಕಾರಿಗಳು ಸಮಿತಿ ಸದಸ್ಯರಾಗಿರುತ್ತಾರೆ. ನಿರಂತರ ಸಭೆಗಳನ್ನು ನಡೆಸಿ ನಿಗಾ ವಹಿಸುವುದು ಈ ಸಮಿತಿಯ ಕಾರ್ಯ ಉದ್ದೇಶ.

ಒಂದು ವೇಳೆ ಎಪ್ರಿಲ್‌ ನಲ್ಲಿ ಮಳೆ ಬೀಳದಿದ್ದರೆ ಜಾನುವಾರುಗಳಿಗೆ ಕೊರತೆಯಾಗುವುದೇ ಎಂಬ ಪ್ರಶ್ನೆಗೆ ಕಾದು ನೋಡಬೇಕಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸದ್ಯ ಜಾನುವಾರುಗಳ ಮೇವಿಗೆ ಯಾವುದೇ ಕೊರತೆ ಉಂಟಾಗಿಲ್ಲ. ಮುಂದಿನ ಕೆಲವು ವಾರಗಳಿಗೆ ಬೇಕಾದಷ್ಟು ಮೇವು ಸಂಗ್ರಹವಿದೆ. ಜತೆಗೆ ಮೇವಿನ ಬೀಜಗಳಿರುವ ಕಿಟ್‌ ಗಳನ್ನೂ ವಿತರಿಸಲಾಗಿದೆ. ಎಪ್ರಿಲ್‌ ತಿಂಗಳಲ್ಲಿ ಬೇಸಗೆಯ ಒಂದೆರಡು ಮಳೆಯಾದರೆ ಹುಲ್ಲು ಬೆಳೆಯುವುದರಿಂದ ಸಮಸ್ಯೆ ಬಗೆ ಹರಿಯಲಿದೆ. – ಡಾ| ಅರುಣ್‌ ಕುಮಾರ್‌, ಡಾ| ರೆಡ್ಡಪ್ಪ

ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

7-bng

Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್‌

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

6-bng

ನಿಯಮಗಳ ಉಲ್ಲಂಘನೆ, ಹೈಬೀಮ್‌ ಲೈಟ್‌ಗಳ ಬಳಕೆ: 5.79 ಲಕ್ಷ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.