Sandalwood: ಭ್ರೂಣ ಹತ್ಯೆಯ ವಿರುದ್ಧ ತಾರಿಣಿ


Team Udayavani, Mar 20, 2024, 10:14 AM IST

Sandalwood: ಭ್ರೂಣ ಹತ್ಯೆಯ ವಿರುದ್ಧ ತಾರಿಣಿ

ಕನ್ನಡ ಚಿತ್ರರಂಗದಲ್ಲಿ ಕೆಲವು ಸಿನಿಮಾಗಳು ತಮ್ಮ ಬಿಗ್‌ ಬಜೆಟ್‌, ಬಿಗ್‌ ಸ್ಟಾರ್‌ ಕಾಸ್ಟಿಂಗ್‌ ಮೂಲಕ ಗಮನ ಸೆಳೆದರೆ, ಇನ್ನು ಕೆಲವು ಸಿನಿಮಾಗಳು ತಮ್ಮ ಕಂಟೆಂಟ್‌ ಮತ್ತು ಮೇಕಿಂಗ್‌ ಮೂಲಕವೇ ಗಮನ ಸೆಳೆಯುತ್ತವೆ. ಇತ್ತೀಚೆಗೆ ಹೀಗೆ ತನ್ನ ಕಂಟೆಂಟ್‌ ಮತ್ತು ಮೇಕಿಂಗ್‌ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ “ತಾರಿಣಿ’.

ಕೆಲ ತಿಂಗಳ ಹಿಂದಷ್ಟೇ ರಾಜ್ಯದ ಅತಿದೊಡ್ಡ ಲಿಂಗಪತ್ತೆ, ಭ್ರೂಣಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು ಅನೇಕರಿಗೆ ಗೊತ್ತಿರಬಹುದು. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಲಿಂಗಪತ್ತೆ, ಭ್ರೂಣಹತ್ಯೆ ಮಾಫಿಯಾ ರಾಜಕೀಯ ಮತ್ತು ಸಾಮಾಜಿಕವಾಗಿ ದೊಡ್ಡ ಸುದ್ದಿಯಾಗಿತ್ತು. ಇದೇ ಲಿಂಗಪತ್ತೆ, ಭ್ರೂಣಹತ್ಯೆ ವಿಷಯವನ್ನು ಇಟ್ಟುಕೊಂಡು ತಯಾರಾ ಗಿರುವ “ತಾರಿಣಿ’ ಸಿನಿಮಾ ಇದೇ ಮಾರ್ಚ್‌ 29ರಂದು ಥಿಯೇಟರಿಗೆ ಬರುತ್ತಿದೆ.

ಈಗಾಗಲೇ ಅನೇಕ ಸದ್ದಿಲ್ಲದೆ ಹತ್ತಾರು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿರುವ, “ತಾರಿಣಿ’ ವಿವಿಧ ವಿಭಾಗಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ತನ್ನದಾಗಿಸಿ ಕೊಂಡಿದೆ. ಈ ಸಿನಿಮಾದ ಇನ್ನೊಂದು ವಿಶೇಷವೆಂದರೆ, ಮೊದಲ ಬಾರಿಗೆ ನಟಿ ಮಮತಾ ರಾಹುತ್‌ ನಿಜ ಜೀವನದಲ್ಲಿ ತಾನು ಗರ್ಭಿಣಿಯಾಗಿದ್ದಾಗಲೇ, ತೆರೆಮೇಲೆ ಕೂಡ “ತಾರಿಣಿ’ ಸಿನಿಮಾದಲ್ಲಿ ಗರ್ಭಿಣಿ ಪಾತ್ರದಲ್ಲೇ ಕಾಣಿಸಿಕೊಂಡಿರುವುದು.

ಈ ಹಿಂದೆ “ಕೃಷ್ಣ ಗಾರ್ಮೆಂಟ್ಸ್‌’, “ದಾರಿ ಯಾವುದಯ್ಯ ವೈಕುಂಠಕ್ಕೆ’, “ಬ್ರಹ್ಮಕಮಲ’ ಮೊದಲಾದ ಸದಭಿರುಚಿ ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿ ಕೊಂಡಿ ರುವ ಸಿದ್ದು ಪೂರ್ಣಚಂದ್ರ ನೈಜ ಘಟನೆ ಪ್ರೇರಿತ “ತಾರಿಣಿ’ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ.

ಮೂಲತಃ ವೃತ್ತಿಯಲ್ಲಿ ವೈದ್ಯರಾಗಿರುವ ಮಮತಾ ರಾಹುತ್‌ ಪತಿ ಡಾ. ಸುರೇಶ್‌ ಕೋಟ್ಯಾನ್‌ ಚಿತ್ರಾಪು “ಶ್ರೀಗಜನಿ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ “ತಾರಿಣಿ’ ಸಿನಿಮಾ ವನ್ನು ನಿರ್ಮಿಸಿದ್ದಾರೆ. “ನಮ್ಮ ಸುತ್ತಮುತ್ತ ನೋಡಿದ ವಿಷಯಗಳು ಮತ್ತು ನನ್ನ ವೈದ್ಯಕೀಯ ವೃತ್ತಿ ಈ ಸಿನಿಮಾ ಮಾಡಲು ಕಾರಣ.

ಒಂದಷ್ಟು ಆದರ್ಶವನ್ನು ಇಟ್ಟುಕೊಂಡು, ಶಿಸ್ತುಬದ್ಧವಾಗಿ, ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡು ಈ ಸಿನಿಮಾ ಮಾಡಿದ್ದೇವೆ. ಹಾಗಂತ ಈ ಸಿನಿಮಾದಲ್ಲಿ ಯಾವುದೇ ಉಪದೇಶವಿಲ್ಲ. “ತಾರಿಣಿ’ ಭಾವನಾತ್ಮಕವಾಗಿ ನೋಡುಗರಿಗೆ ಕನೆಕ್ಟ್ ಆಗುತ್ತದೆ. ನಮಗೇ ಗೊತ್ತಿಲ್ಲದಂತೆ, ನಮ್ಮನ್ನು ಆವರಿಸಿಕೊಂಡು ಭ್ರೂಣ ಹತ್ಯೆಯ ಪಾಪಪ್ರಜ್ಞೆ ಕಾಡುವಂತೆ ಮಾಡುತ್ತದೆ’ ಎನ್ನುವುದು “ತಾರಿಣಿ’ ಬಗ್ಗೆ ನಿರ್ಮಾಪಕ ಡಾ. ಸುರೇಶ್‌ ಕೋಟ್ಯಾನ್‌ ಮಾತು.

ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಎಂಬ ಸಾಮಾಜಿಕ ಸಂದೇಶವಿರುವ “ತಾರಿಣಿ’ ಸಿನಿಮಾದಲ್ಲಿ ಮಮತಾ ರಾಹುತ್‌ ಜೊತೆಗೆ ರೋಹಿತ್‌, ಭವಾನಿ ಪ್ರಕಾಶ್‌, ಸುಧಾ ಪ್ರಸನ್ನ, ಬೇಬಿ ನಿಶಿತಾ, ಬೇಬಿ ರಿಧಿ, ಪ್ರಿನ್ಸ್‌ ಜಿತಿನ್‌ ಕೋಟ್ಯಾನ್‌ ಅಭಿನಯಿಸಿದ್ದಾರೆ

ಟಾಪ್ ನ್ಯೂಸ್

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

Cheluvaray-swamy

Janatha Darshana: ಯಾರಿಗೂ ಇಲ್ಲದ ನಿರ್ಬಂಧ ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.