ತೆಲಸಂಗ: ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ “ದಾಖಲಾತಿ ಕೊರತೆ’


Team Udayavani, Mar 20, 2024, 12:05 PM IST

ತೆಲಸಂಗ: ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ “ದಾಖಲಾತಿ ಕೊರತೆ’

ಉದಯವಾಣಿ ಸಮಾಚಾರ
ತೆಲಸಂಗ: ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳ ವ್ಯಾಮೋಹದಿಂದ ಜನರನ್ನು ದೂರವಿಡಲು ರಾಜ್ಯ ಸರಕಾರ 2019-20ನೇ ಸಾಲಿನಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿತ್ತು. ಆದರೆ ಆಂಗ್ಲ ಮಾಧ್ಯಮ ಶಿಕ್ಷಕರ ನೇಮಕಾತಿ ಮಾಡದೇ ಇರುವುದರಿಂದ ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳು ಬಂದ್‌ ಆಗುತ್ತಿರುವುದು ಮಾತ್ರವಲ್ಲ,ದಾಖಲಾತಿ ಪಡೆದ ಮಕ್ಕಳ ಭವಿಷ್ಯ
ಕತ್ತಲೆಗೆ ದೂಡಿದಂತಾಗಿದೆ.

ಸರಕಾರ ಅಥಣಿ ತಾಲೂಕಿನ ಬಾಡಗಿ, ಹಾಲಳ್ಳಿ, ಅಡಹಳ್ಳಿ, ಸಿದ್ದೇವಾಡಿ, ಬೇವನೂರ, ಇಂಗಳಗಾಂವ, ಯಂಕಚ್ಚಿ, ರೆಡ್ಡೇರಹಟ್ಟಿ,
ಅರಳಿಹಟ್ಟಿ ಒಟ್ಟು 9 ಗ್ರಾಮಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿತ್ತು. ಹಾಲಳ್ಳಿ, ಅಡಹಳ್ಳಿ, ಬೆವನೂರ, ನದಿ
ಇಂಗಳಗಾಂವ, ಯಕ್ಕಂಚಿ, ಅರಳಿಹಟ್ಟಿ ಒಟ್ಟು ಸರಕಾರಿ 6 ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಒಂದೂ ದಾಖಲಾತಿಯಾಗಿಲ್ಲ. ಇನ್ನೊಂದೆಡೆ ಖಾಸಗಿ ಇಂಗ್ಲಿಷ್‌ ಶಾಲೆಗಳಲ್ಲಿ ಮಕ್ಕಳಿಗೆ ದಾಖಲೆ ಸಿಗುತ್ತಿಲ್ಲ ಎಂಬುದೂ ಅಷ್ಟೇ ಸತ್ಯ.

ರಾಜ್ಯ ಸರ್ಕಾರ ಕನ್ನಡ ಮಾಧ್ಯಮದ ಶಿಕ್ಷಕರಿಗೆ ಇಂಗ್ಲಿಷ್‌ ಮಾಧ್ಯಮ ತರಬೇತಿ ನೀಡಿ ಇಂಗ್ಲಿಷ್‌ ಶಾಲೆಗಳಲ್ಲಿ ಪಾಠ ಮಾಡಲು ಹಚ್ಚುತ್ತಿದೆ. ಕನ್ನಡ ಮಾಧ್ಯಮದ ಶಿಕ್ಷಕ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಬಹುದೇ? ಒಂದು ವೇಳೆ ನೀಡಿದರೂ ಆಂಗ್ಲ ಮಾಧ್ಯಮ ಪಾಠಕ್ಕೆ ನ್ಯಾಯ ದೊರಕಿಸಲು ಸಾಧ್ಯವೇ? ಎಂಬ ಪ್ರಶ್ನೆ ಪಾಲಕರಲ್ಲಿ  ಎದುರಾಗಿದೆ. ರಾಜ್ಯ ಸರಕಾರದ ಇಂಗ್ಲಿಷ್‌ ಮಾಧ್ಯಮ ಶಾಲೆಗಳ ಆರಂಭದಿಂದ ನಮ್ಮ ಮಗುವಿಗೂ ಆಂಗ್ಲ ಮಾಧ್ಯಮ ಶಿಕ್ಷಣ ದೊರೆಯುತ್ತದೆ ಎಂದು ಸಂತಸಪಟ್ಟಿದ್ದ ಬಡ, ಮಧ್ಯಮ ವರ್ಗಗಳ ಕುಟುಂಬಗಳ ಕನಸಿಗೆ ತಣ್ಣೀರೆರಚಿದಂತಾಗಿದೆ.

ಇಂಗ್ಲಿಷ್‌ ಮಾಧ್ಯಮಕ್ಕೆ ಪ್ರತ್ಯೇಕ ಟೀಚರ್‌ ಇಲ್ಲ. ಇದ್ದವರಿಗೆ ಟ್ರೇನಿಂಗ್‌ ಕೊಟ್ಟಿದ್ದೇವೆ. ಇಂಗ್ಲಿಷ್‌ ಶಿಕ್ಷಕರ ನೇಮಕಾತಿ ಸರಕಾರ
ಹಂತದಲ್ಲಿ ನಡೆಯಬೇಕಿದೆ. ಅತಿಥಿ ಶಿಕ್ಷಕರನ್ನು ಕೊಡುತ್ತಿದ್ದೇವೆ. ಸದ್ಯಕ್ಕೆ ಟೀಚರ್‌ ಕೊರತೆ ಇಲ್ಲ.

ಮೋಹನಕುಮಾರ ಹಂಚಾಟೆ, 
ಉಪ ನಿರ್ದೇಶಕರು, ಚಿಕ್ಕೋಡಿ.

ಸರಕಾರ ಕೂಡಲೇ ಇಂತಹ ಅವೈಜ್ಞಾನಿಕ ಕ್ರಮಗಳನ್ನು ಕೈ ಬಿಡಬೇಕು. ಪ್ರತ್ಯೇಕ ಆಂಗ್ಲ ಭಾಷಾ ಶಿಕ್ಷಕರ ನೇಮಕ ಮಾಡಬೇಕು.
ಸೊರಗುತ್ತಿರುವ ಆಂಗ್ಲ ಮಾಧ್ಯಮ ಸರಕಾರಿ ಶಾಲೆಗಳಿಗೆ ಜೀವ ತುಂಬಿ ಮಧ್ಯಮ ವರ್ಗದ ಮಕ್ಕಳಿಗೂ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳಬೇಕು.
ಹಣಮಂತ ಪಡಸಲಗಿ, ಪಾಲಕರು, ಬಾಡಗಿ.

*ಜಗದೀಶ ತೆಲಸಂಗ

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.