Bidar Lok Sabha constituency; 18 ಸಲ ಚುನಾವಣೆಯಾದರೂ ಸಂಸದರಾಗಿದ್ದು ಆರೇ ಮಂದಿ

: 11 ಸಲ ಕಾಂಗ್ರೆಸ್‌ಗೆ ಗೆಲುವು, 7 ಬಾರಿ ಬಿಜೆಪಿಗೆ ಜಯ

Team Udayavani, Mar 21, 2024, 7:15 AM IST

Bidar Lok Sabha constituency; 18 ಸಲ ಚುನಾವಣೆಯಾದರೂ ಸಂಸದರಾಗಿದ್ದು ಆರೇ ಮಂದಿ

ಬೀದರ್‌: ಕರ್ನಾಟಕದ ಮುಕುಟ ಬೀದರ ಲೋಕಸಭೆ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಸಮಾನ ನೆಲೆ ಒದಗಿಸಿದ ಕ್ಷೇತ್ರ. ಸತತ ಐದು ಬಾರಿ, ಹ್ಯಾಟ್ರಿಕ್‌ ಗೆಲುವು ಮತ್ತು ಮಾಜಿ ಸಿಎಂ ಸೇರಿ ಘಟಾನುಘಟಿಗಳ ಸ್ಪರ್ಧೆಯಿಂದ ರಾಜಕಾರಣದ ಗಮನ ಸೆಳೆದಿರುವ ಈ ಕ್ಷೇತ್ರ ಈವರೆಗೆ 18 ಚುನಾವಣೆಗಳನ್ನು ಎದುರಿಸಿದ್ದು, ಆಯ್ಕೆಯಾದದ್ದು ಕೇವಲ 6 ಜನರಷ್ಟೇ. ಈ ಸಲ ಎರಡೂ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಂದ ಅಖಾಡಕ್ಕೆ ಯಾರು ಇಳಿಯುತ್ತಾರೆ ಎಂಬುದು ಕುತೂಹಲ ಇದೆ.

ಕಲಬುರ್ಗಿ ಜಿಲ್ಲೆಯ ಎರಡು ಕ್ಷೇತ್ರ ಸೇರಿ ಒಟ್ಟು 8 ಕ್ಷೇತ್ರಗಳನ್ನು ಒಳಗೊಂಡಿರುವ ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಐವರು ಬಿಜೆಪಿ ಮತ್ತು ಮೂವರು ಕಾಂಗ್ರೆಸ್‌ ಶಾಸಕರಿದ್ದಾರೆ. 2019ರಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ತಲಾ ಒಂದು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರಿದ್ದರು.

ಐವತ್ತು ವರ್ಷಗಳ ಕಾಲ ಮೀಸಲು ಕ್ಷೇತ್ರವಾಗಿದ್ದ ಬೀದರ್‌ ಲೋಕಸಭೆ ಭಾರತೀಯ ಸಂಸತ್ತಿನಲ್ಲಿ ಹಲವು ದಾಖಲೆಗಳಿಂದ ಗುರುತಿಸಿಕೊಂಡಿದೆ. ಸಂವಿಧಾನ ರಚನೆ ಅನಂತರದ 1952ರ ಮೊದಲ ಚುನಾವಣೆಯಲ್ಲಿ ಜವಾಹರಲಾಲ್‌ ನೆಹರೂ ಅವರ ಆಪ್ತ ಗೆಳೆಯ ಶೌಕತುಲ್ಲಾ ಶಾ ಅನ್ಸಾರಿ ಗೆದ್ದಿದ್ದರು. ಎರಡು ಗಡಿ ರಾಜ್ಯಗಳನ್ನು ಹಂಚಿಕೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 18 ಚುನಾವಣೆಗಳಲ್ಲಿ 11 ಬಾರಿ ಕಾಂಗ್ರೆಸ್‌, 7 ಬಾರಿ ಬಿಜೆಪಿ ಗೆಲುವು ಸಾಧಿಸಿದೆ.

ಸತತ 10 ಬಾರಿ ಗೆದ್ದು ಕಾಂಗ್ರೆಸ್‌ ಭದ್ರಕೋಟೆ ಎನಿಸಿಕೊಂಡಿದ್ದ ಕ್ಷೇತ್ರದಲ್ಲಿ ಅನಂತರ ದಿ| ರಾಮಚಂದ್ರ ವೀರಪ್ಪ ಸತತ ಐದು ಬಾರಿ ಕಮಲ ಅರಳಿಸಿದ್ದರು. ಬಳಿಕ ಕಾಂಗ್ರೆಸ್‌ ಮತ್ತು ಬಿಜೆಪಿ ತಲಾ ಎರಡು ಬಾರಿ ಕ್ಷೇತ್ರದಲ್ಲಿ ಹಿಡಿತ ಸಾಧಿ ಸಿವೆ. ಸದ್ಯ ಕೇಂದ್ರದಲ್ಲಿ ಸಚಿವರಾಗಿರುವ ಭಗವಂತ ಖೂಬಾ ಕ್ಷೇತ್ರದ ಸಂಸದರಾಗಿದ್ದಾರೆ. ಶೌಕತುಲ್ಲಾ ಅನ್ಸಾರಿ (ಒಂದು ಬಾರಿ), ಶಂಕರದೇವ (ಮೂರು), ರಾಮಚಂದ್ರಪ್ಪ ವೀರಪ್ಪ (7 ಬಾರಿ), ನರಸಿಂಗರಾವ್‌ ಹುಲ್ಲಾ (ನಾಲ್ಕು ಬಾರಿ), ಧರಂಸಿಂಗ್‌ (ಒಂದು ಬಾರಿ) ಮತ್ತು ಭಗವಂತ ಖೂಬಾ ಎರಡು ಬಾರಿ ಗೆದಿದ್ದಾರೆ.

ಬಿಜೆಪಿ ಪಕ್ಷ ಜೆಡಿಎಸ್‌ನ ಬೆಂಬಲದೊಂದಿಗೆ ಮತ್ತೆ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳುವ ಉತ್ಸಾಹದಲ್ಲಿದ್ದರೆ, ಕಾಂಗ್ರೆಸ್‌ ತನ್ನ ಹಿಡಿತ ಸಾಧಿಸಲು ತಂತ್ರ ರೂಪಿಸುತ್ತಿದೆ.

ಜಾತಿ ಲೆಕ್ಕಾಚಾರ ಹೇಗಿದೆ?
ಪ್ರಮುಖ ಎಲ್ಲ ಧರ್ಮಿಯರಿಗೆ ಸಂಸತ್‌ ಪ್ರವೇಶಿಸಲು ಕ್ಷೇತ್ರ ಅವಕಾಶ ನೀಡಿದೆ. ಕ್ಷೇತ್ರದಲ್ಲಿ ಅಧಿ ಕ ಸಂಖ್ಯೆಯಲ್ಲಿ ಇರುವ ಲಿಂಗಾಯತ, ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೆಚ್ಚು ಪ್ರಾಬಲ್ಯ ಹೊಂದಿದ್ದಾರೆ. ಈ ಎರಡು ಸಮುದಾಯ ಯಾವ ಪಕ್ಷದ ಕಡೆಗೆ ಒಲವು ತೋರಿಸುತ್ತದೆಯೋ ಅವರಿಗೆ ಗೆಲುವು ಖಚಿತ. ಈ ಬಾರಿ ಎರಡೂ ಪಕ್ಷಗಳಿಂದ ಲಿಂಗಾಯತ ಅಭ್ಯರ್ಥಿಗಳೇ ಮುಖಾಮುಖೀಯಾಗುವುದಂತು ನಿಶ್ಚಿತ.

-ಶಶಿಕಾಂತ ಬಂಬುಳಗೆ

 

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.