Lok Sabha polls 2024; 17 ಕ್ಷೇತ್ರಗಳಿಗೆ ಇಂದು ಕಾಂಗ್ರೆಸ್‌ ಪಟ್ಟಿ ಬಿಡುಗಡೆ?

ದಿಲ್ಲಿಯಲ್ಲಿ ಕಾಂಗ್ರೆಸ್‌ ಚುನಾವಣ ಸಮಿತಿಯಿಂದ ಮ್ಯಾರಥಾನ್‌ ಸಭೆ

Team Udayavani, Mar 21, 2024, 7:05 AM IST

Lok Sabha polls 2024; 17 ಕ್ಷೇತ್ರಗಳಿಗೆ ಇಂದು ಕಾಂಗ್ರೆಸ್‌ ಪಟ್ಟಿ ಬಿಡುಗಡೆ?

ಬೆಂಗಳೂರು: ಹಲವು ಬಾರಿ ಮುಂದೂಡಿಕೆಯಾದ ಬಳಿಕ ಕೊನೆಗೂ ದಿಲ್ಲಿಯಲ್ಲಿ ಕಾಂಗ್ರೆಸ್‌ ಚುನಾವಣ ಸಮಿತಿ (ಸಿಇಸಿ) ಸಭೆ ಬುಧವಾರ ನಡೆದಿದೆ. ರಾಜ್ಯದ ಬಾಕಿ ಇರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಪೂರ್ಣಗೊಳಿಸುವಲ್ಲಿ ರಾಷ್ಟ್ರೀಯ ನಾಯಕರು ಬಹುತೇಕ ಯಶಸ್ವಿಯಾಗಿದ್ದು, ಪಟ್ಟಿ ಬಿಡುಗಡೆ ಮಾತ್ರ ಬಾಕಿ ಇದೆ.

ಮೊದಲ ಪಟ್ಟಿ ಬಿಡುಗಡೆಗೊಂಡು 12 ದಿನಗಳ ಬಳಿಕ ಬಾಕಿ ಇರುವ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಎಐಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಿತು. ತೀವ್ರ ಕಗ್ಗಂಟಾಗಿರುವ ಮೂರ್‍ನಾಲ್ಕು ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದೆಲ್ಲವುಗಳಿಗೂ ಉಮೇದ್ವಾರರನ್ನು ಅಂತಿಮಗೊಳಿಸಲಾಗಿದೆ. ಎರಡನೇ ಪಟ್ಟಿ ಸಿದ್ಧಗೊಂಡಿದ್ದು, ಗುರುವಾರ ಅಧಿಕೃತವಾಗಿ ಬಿಡುಗಡೆಗೊಳ್ಳಬಹುದು ಎಂದು ಮೂಲಗಳು ಹೇಳಿವೆ.

ಕರ್ನಾಟಕ, ತೆಲಂಗಾಣ, ಪಶ್ಚಿಮ ಬಂಗಾಲ, ಚಂಡೀಗಢ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ತಡರಾತ್ರಿವರೆಗೂ ನಡೆದ ಸಭೆಯಲ್ಲಿ, ರಾಜ್ಯದ 17 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಅಂತಿಮಗೊಳಿಸಲಾಗಿದೆ. ಜಾತಿ ಲೆಕ್ಕಾಚಾರ, ನಾಯಕರ ಪ್ರಭಾವ, ಹಣ ಬಲ ಮತ್ತಿತರ ಅಂಶಗಳನ್ನು ಅಳೆದು ತೂಗಿ ಪಟ್ಟಿ ಅಖೈರುಗೊಳಿಸಲಾಗಿದೆ. ಮೂಲ ಗಳ ಪ್ರಕಾರ ಒಕ್ಕಲಿಗ ಮತ್ತು ವೀರಶೈವ ಲಿಂಗಾ ಯತ ಸಮುದಾಯದ ಆಕಾಂಕ್ಷಿಗಳಿಗೆ ನಿರೀಕ್ಷೆಯಂತೆ ಹೆಚ್ಚು ಸ್ಥಾನಗಳು ಸಿಗಲಿವೆ.

ಹೊಸಮುಖ, ಮಹಿಳೆಯರಿಗೆ ಆದ್ಯತೆ
ಈ ಬಾರಿ ಹೊಸಮುಖಗಳು, ಯುವಕರಿಗೆ ಹಾಗೂ ಮಹಿಳೆಯರಿಗೂ ಅವಕಾಶ ಕಲ್ಪಿಸ ಲಾಗಿದೆ. ಕಣಕ್ಕಿಳಿಯುವ ಅಭ್ಯರ್ಥಿಗಳು ಹೊಸಮುಖಗಳಾಗಿದ್ದರೂ ಅವರ ಬೆನ್ನಿಗೆ ಇರುವವರು ಪ್ರಭಾವಿಗಳೇ ಆಗಿದ್ದಾರೆ. ಸಂಭಾವ್ಯರ ಪಟ್ಟಿ ಪ್ರಕಾರ ಬೆಂಗಳೂರು ದಕ್ಷಿಣದಿಂದ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ, ಬಾಗಲಕೋಟೆಯಲ್ಲಿ ಸಚಿವ ಶಿವಾನಂದ ಪಾಟೀಲ್‌ ಪುತ್ರಿ ಸಂಯುಕ್ತಾ, ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಮೃಣಾಲ್‌, ಚಿಕ್ಕೋಡಿಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ, ದಾವಣಗೆರೆಯಲ್ಲಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ಪತ್ನಿ ಪ್ರಭಾ ಮಲ್ಲಿಕಾರ್ಜುನ, ಚಿಕ್ಕಬಳ್ಳಾಪುರಕ್ಕೆ ಮಾಜಿ ಶಾಸಕ ಎಂ.ಆರ್‌.ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯ ಅವರು ಅಭ್ಯರ್ಥಿಗಳಾಗುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.

ಇದಕ್ಕೆ ಪೂರಕವಾಗಿ ದಿಲ್ಲಿಯ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, “ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದೆ. ಯಾವುದೇ ಕ್ಷಣದಲ್ಲಾದರೂ ಬಿಡುಗಡೆ ಆಗಬಹುದು ಎಂದು ಹೇಳಿದರು.

ಮೂರ್‍ನಾಲ್ಕು ಕ್ಷೇತ್ರಗಳು ಕಗ್ಗಂಟು?
ಹಲವು ಸುತ್ತಿನ ಮಾತುಕತೆ, ಮನವೊಲಿಕೆ ಬಳಿಕವೂ ಮೂರ್‍ನಾಲ್ಕು ಕ್ಷೇತ್ರಗಳು ಕಗ್ಗಂಟಾಗಿಯೇ ಉಳಿದಿದ್ದು, ಅವುಗಳನ್ನು ಹೈಕಮಾಂಡ್‌ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ. ಈ ಪೈಕಿ ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ಚಾಮರಾಜನಗರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಇನ್ನೂ ಅಂತಿಮಗೊಂಡಿಲ್ಲ. ಎರಡನೇ ಹಂತದ ಪಟ್ಟಿ ಬಿಡುಗಡೆಯಾದ ಬಳಿಕದ ಒಂದೆರಡು ದಿನಗಳಲ್ಲಿ ಬಾಕಿ ಉಳಿದ ಕ್ಷೇತ್ರಗಳಲ್ಲಿ ಹೆಸರು ಅಂತಿಮಗೊಳಿಸುವ ಲೆಕ್ಕಾಚಾರ ಇದೆ ಎನ್ನಲಾಗಿದೆ.

ಯಾವುದೇ ಕ್ಷಣದಲ್ಲೂ ಬಿಡುಗಡೆ
ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದೆ. ಯಾವುದೇ ಕ್ಷಣದಲ್ಲಾದರೂ ಬಿಡುಗಡೆ ಆಗಬಹುದು. ಈ ಬಾರಿ ಯುವಕರು, ವಿದ್ಯಾವಂತರು, ಹೊಸಮುಖ ಗಳಿಗೆ ಮಣೆ ಹಾಕಲಾಗಿದೆ. ಒಟ್ಟಾರೆ ಅಭ್ಯರ್ಥಿಗಳಲ್ಲಿ ಶೇ. 50ರಷ್ಟು 40-45 ವಯಸ್ಸಿನ ಒಳಗಿನವರೇ ಇರಲಿದ್ದಾರೆ.
-ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Chikkaballapura: Walk in Chikkaballapura on World Peace Day

Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.