![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 21, 2024, 1:00 AM IST
ಬೆಂಗಳೂರು: ಸಾಲಬಾಧೆ ಹಾಗೂ ಆರೋಗ್ಯ ಸಮಸ್ಯೆಯಿಂದ ಉಡುಪಿ ಮೂಲದ ತಾಯಿ ಹಾಗೂ ಅವಳಿ ಮಕ್ಕಳು ಪೆಟ್ರೋಲ್ ಸುರಿದುಕೊಂಡು ಸಜೀವ ದಹನವಾಗಿರುವ ದಾರುಣ ಘಟನೆ ಜೆ.ಪಿ. ನಗರದಲ್ಲಿ ನಡೆದಿದೆ.
ಜೆ.ಪಿ. ನಗರದ 3ನೇ ಹಂತದ ನಿವಾಸಿಗಳಾದ ಸುಕನ್ಯಾ (48), ಅವರ ಪುತ್ರರಾದ ನಿಖೀಲ್ (27) ಮತ್ತು ನಿಶ್ಚಿತ್(27) ಮೃತರು. ಜೆ.ಪಿ.ನಗರದ 3ನೇ ಹಂತದಲ್ಲಿ ಬುಧವಾರ ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದೆ. ಸುಕನ್ಯಾ ಪತಿ ಜಯಾನಂದ್ ಅವರು ನೀಡಿದ ದೂರಿನ ಮೇರೆಗೆ ಜೆ.ಪಿ. ನಗರ ಠಾಣೆ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಉಡುಪಿಯ ಅಂಬಲಪಾಡಿ ಮೂಲದ ಜಯಾನಂದ್ ಕುಟುಂಬ ಹತ್ತಾರು ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ನಗರದಲ್ಲಿ ವಾಸವಾಗಿದೆ. ಜಯಾನಂದ್, ಜೆ.ಪಿ. ನಗರದಲ್ಲೇ ವುಡನ್ ಡೈ ಮೇಕಿಂಗ್ ಮಳಿಗೆ ನಡೆಸುತ್ತಿದ್ದರು. ಪುತ್ರರ ಪೈಕಿ ನಿಖೀಲ್ ಎಂಸಿಎ ವ್ಯಾಸಂಗ ಮಾಡಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ನಿಶ್ಚಿತ್ ಕೂಡ ಅನಿಮೇಷನ್ ಸಂಬಂಧಿತ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. ಸುಕನ್ಯಾ ಮನೆಯಲ್ಲೇ ಮಕ್ಕಳಿಗೆ ಪಾಠ ಮಾಡುತ್ತಿದ್ದರು.
ವ್ಯಾಪಾರದಲ್ಲಿ ನಷ್ಟ, 15 ಲಕ್ಷ ರೂ. ಸಾಲ
ಈ ಮೊದಲು ವುಡನ್ ಡೈ ಮೇಕಿಂಗ್ ವ್ಯಾಪಾರದಲ್ಲಿ ಉತ್ತಮ ಲಾಭ ಬರುತ್ತಿತ್ತು. ಆದರೆ, 2020ರ ಕೊರೊನಾ ಸಂದರ್ಭ ಭಾರೀ ನಷ್ಟ ಉಂಟಾಗಿತ್ತು. ಜತೆಗೆ ಕೆಲ ಆರೋಗ್ಯ ಸಮಸ್ಯೆಯಿಂದ ಜಯಾನಂದ್ ಹಾಗೂ ಕುಟುಂಬ ಸದಸ್ಯರು ಬಳಲುತ್ತಿದ್ದರು. ಹೀಗಾಗಿ ಅಂದಾಜು 15 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಪ್ರತಿ ತಿಂಗಳು ಲಕ್ಷಾಂತರ ರೂ.ಗೆ ಬಡ್ಡಿ ಕಟ್ಟುತ್ತಿದ್ದರು. ಜತೆಗೆ ಸುಕನ್ಯಾ ಕೂಡ ಸ್ಥಳೀಯವಾಗಿ ಕೆಲವರ ಬಳಿ ಸಾವಿರಾರು ರೂ. ಸಾಲ ಮಾಡಿದ್ದರು. ಈ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ಘಟನೆಯ ಸಂದರ್ಭ ಪತಿಯೂ ಮನೆಯಲ್ಲಿದ್ದು, ಕೋಣೆಯ ಹೊರಗಡೆ ಇದ್ದರು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.