Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ


Team Udayavani, Mar 21, 2024, 3:45 PM IST

14-editorial

“ತಮಿಳುನಾಡಿನಿಂದ ಬಂದವರು ಬೆಂಗಳೂರಲ್ಲಿ ಬಾಂಬ್‌ ಇಡುತ್ತಾರೆ’ ಎಂದು ಹೇಳಿಕೆ ನೀಡಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣ ಆಯೋಗವು, ರಾಜ್ಯ ಮುಖ್ಯ ಚುನಾವಣಧಿಕಾರಿಗೆ ಸೂಚಿಸಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಹಿನ್ನೆಲೆಯಲ್ಲಿ ಆಯೋಗವು ಕ್ರಮುಕ್ಕೆ ಮುಂದಾಗಿರುವುದು ಸಮಂಜಸವಾಗಿದೆ. ಚುನಾವಣೆ ಎಂದ ಮೇಲೆ “ಪ್ರಚಾರ’ ಇರಲೇಬೇಕು. ಆದರೆ ಅದು “ಅಪಪ್ರಚಾರ’ವಾಗಬಾರದು.

ಸ್ವತಂತ್ರ ಭಾರತದ ಈ 75 ವರ್ಷಗಳಲ್ಲಿ ಈಗ ನಡೆಯುತ್ತಿರುವುದು 18ನೇ ಲೋಕಸಭೆ ಚುನಾವಣೆ. ಇಲ್ಲಿವರೆಗಿನ ಎಲ್ಲ ಚುನಾವಣೆಗಳು ಪ್ರಚಂಡ ಪ್ರಚಾರ ವೈಖರಿಗಳನ್ನು ಕಂಡಿವೆ. ಚುನಾವಣೆ ಎಂದ ಮೇಲೆ ವಾಕ್ಸಮರ, ಟೀಕೆ- ಟಿಪ್ಪಣೆಗಳು, ಮೊನಚಾದ ಮಾತು, ವ್ಯಂಗ್ಯ ನುಡಿಗಳು ಸಹಜ. ಚುನಾವಣೆಗೆ ಪ್ರಚಾರವೇ ಜೀವಾಳ. ದಿಗ್ಗಜ ನಾಯಕರ ವಾಗ್ಯುದ್ಧಗಳನ್ನು ಈ ದೇಶದ ಮತದಾರರು ಕಂಡಿದ್ದಾರೆ. ಜವಾಹರಲಾಲ್‌ ನೆಹರೂ, ರಾಮ ಮನೋಹರ ಲೋಹಿಯಾರಿಂದ ಹಿಡಿದು ಅಟಲ್‌ ಬಿಹಾರ ವಾಜಪೇಯಿವರೆಗೆ ಅದ್ಭುತ ಚುನಾವಣ ಪ್ರಚಾರಕರು ನಮ್ಮನ್ನು ಪ್ರಭಾವಿಸಿದ್ದಾರೆ. ವಾಜಪೇಯಿ ಅವರ ಚುನಾವಣ ಭಾಷಣ ಕೇಳುವುದಕ್ಕಾಗಿಯೇ ಲಕ್ಷಾಂತರ ಜನರು ಸೇರುತ್ತಿದ್ದರು! ಮೇರು ನಾಯಕರ ಮಾತುಗಳಲ್ಲಿ ಮೊನಚು ಇರುತ್ತಿತ್ತೇ ಹೊರತು, ನಂಜಿರುತ್ತಿರಲಿಲ್ಲ.

ಇತ್ತೀಚಿನ ಚುನಾವಣೆಗಳಲ್ಲಿ ಪ್ರಚಾರ ಎಂದರೆ “ದ್ವೇಷ ಭಾಷಣ’ಗಳು ಎಂಬಂತಾಗಿವೆ. ವೈಯಕ್ತಿಕ ನಿಂದನೆ, ತೇಜೋವಧೆ, ಭಾಷೆಯಾಧಾರಿತ ಮತ್ತು ಸಮುದಾಯಗಳ ವಿರುದ್ಧ ನಿಂದನೆಗಳು ಹೆಚ್ಚುತ್ತಲೇ ಇವೆ. ಇತ್ತೀಚಿಗೆ ಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪ್ರಧಾನಿ ಮೋದಿಯನ್ನು ವ್ಯಂಗ್ಯವಾಡುವ ಭರದಲ್ಲಿ “ಪನೌತಿ’ (ಅಪಶಕುನ) ಎಂಬ ಹೇಳಿಕೆ ನೀಡಿ ಚುನಾವಣ ಆಯೋಗದಿಂದ ಛೀಮಾರಿ ಹಾಕಿಸಿಕೊಂಡಿದ್ದರು. 2019ರಲ್ಲಿ ಮೋದಿಯನ್ನು ಟೀಕಿಸಲು ಹೋಗಿ ಲೋಕಸಭಾ ಸದಸ್ಯತ್ವಕ್ಕೇ ಕುತ್ತು ತಂದುಕೊಂಡಿದ್ದರು. ರಾಹುಲ್‌ ಎಂದೇನಲ್ಲ, ಅನೇಕ ರಾಜಕಾರಣಿಗಳು ಹದ್ದು ಮೀರಿ ಮಾತನಾಡಿದ್ದಿದೆ. ಇದೀಗ ಶೋಭಾ ಕರಂದ್ಲಾಜೆ ಸರದಿ.

ಈ ದ್ವೇಷ ಭಾಷಣ ಎಂಬುದು ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ಧ್ರುವೀಕರಣ ಮಾಡುವ ಮೂಲಕ ಮತಗಳನ್ನು ಸೆಳೆಯಲು ದ್ವೇಷ ಭಾಷಣಕ್ಕೆ ರಾಜ ಕೀಯ ನಾಯಕರು ಜೋತು ಬೀಳುತ್ತಿರುವುದು ಕಟುವಾಸ್ತವ. ಆ ಕಾರಣ ಕ್ಕಾಗಿಯೇ ಪ್ರಸಕ್ತ ಚುನಾವಣೆಯಲ್ಲಿ ದ್ವೇಷ ಭಾಷಣ ಕಡಿವಾಣ ಹಾಕಲು ಕೇಂದ್ರ ಚುನಾವಣ ಆಯೋಗವು ಎಲ್ಲ ರಾಜಕೀಯ ಪಕ್ಷಗಳಿಗೆ ಖಡಕ್ಕಾದ ಎಚ್ಚರಿಕೆ ನೀಡಿತ್ತು. ಇಷ್ಟಾಗಿಯೂ ರಾಜಕಾರಣಿಗಳು ಎಚ್ಚೆತ್ತುಕೊಳ್ಳುದಿರುವುದು ನಮ್ಮ ಚುನಾ ವಣ ಪ್ರಚಾರದ ಕೀಳು ಮಟ್ಟವನ್ನು ಅದು ತೋರಿಸುತ್ತದೆ. ಇದು ಹೀಗೆಯೇ ಮುಂದುವರಿದರೆ, ಪ್ರಜಾಪ್ರಭುತ್ವ ಮೌಲ್ಯಗಳಿಗೆ ಕಳಂಕ ತಟ್ಟದೇ ಇರದು.

ದ್ವೇಷ ಭಾಷಣಗಳಿಗೆ ಕಡಿವಾಣಕ್ಕೆ ಕಾನೂನು ಮೂಲಕ ಕ್ರಮ ಕೈಗೊಳ್ಳುವುದು ಒಂದು ಪರಿಹಾರ ಮಾರ್ಗವಾದರೆ, ಮತ್ತೂಂದು ಸ್ವಯಂ ನಿಯಂತ್ರಣ ಹಾಕಿಕೊಳ್ಳುವುದು. ಚುನಾವಣ ಪ್ರಚಾರ ಮಾತ್ರವಲ್ಲ, ಸಾರ್ವಜನಿಕ ಜೀವನ ದಲ್ಲಿರುವವರು ಎಲ್ಲ ಸಮಯದಲ್ಲೂ ಮಾತಿನ ಮೇಲೆ ಹಿಡಿತ ಹೊಂದುವುದು ಅಗತ್ಯ. ಅವರ ಮಾತುಗಳು ಸಭ್ಯತೆಯನ್ನು ಮೀರಬಾರದು. “ನುಡಿದರೆ ಲಿಂಗ ಮೆಚ್ಚಿ ಅಹುದನೆಬೇಕು’ ಎಂಬ ಬಸವಣ್ಣನವರ ಮಾತನ್ನು ಪಾಲಿಸಿದರೆ, ಬಹುಶಃ ದ್ವೇಷಾಸೂಯೆಗಳಿಗೆ ಪ್ರಚಾರದಲ್ಲಿ ಜಾಗವೇ ಇರುವುದಿಲ್ಲ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.