Saudi Arabia: ಭೀಕರ ಅಪಘಾತದಲ್ಲಿ ಕರಾವಳಿಯ ನಾಲ್ವರು ಮೃತ್ಯು

3 ತಿಂಗಳ ಮಗುವೂ ದಾರುಣ ಅಂತ್ಯ...

Team Udayavani, Mar 21, 2024, 5:21 PM IST

accident

ಮಂಗಳೂರು: ಸೌದಿ ಅರೇಬಿಯಾದ ರಿಯಾದ್‌ನ ಹೊರವಲಯದ ಝಲ್ಫಾ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಹಸುಗೂಸು ಸಹಿತ ಕರ್ನಾಟಕ ಕರಾವಳಿ ಮೂಲದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ಮಂಗಳೂರು ಹೊರವಲಯದ ಹಳೆಯಂಗಡಿ ತೋಕೂರು ಮೂಲದ ಶಮೀಮ್‌ ಮತ್ತು ಝರೀನಾ ದಂಪತಿ ಪುತ್ರಿ ಹಿಬಾ (29), ಆಕೆಯ ಪತಿ ಮುಹಮ್ಮದ್‌ ರಮೀಝ್ (34) ಮಕ್ಕಳಾದ ಆರೂಶ್‌ (3) ಮತ್ತು ರಾಹ (3 ತಿಂಗಳು) ಮೃತಪಟ್ಟವರು.

ಕಾರಿನಲ್ಲಿದ್ದ ಹಿಬಾ ಅವರ ಚಿಕ್ಕಪ್ಪ ಲತೀಫ್‌ ಅವರ ಮಗಳು ಫಾತಿಮಾ (19) ಗಂಭೀರ ಗಾಯಗೊಂಡಿದ್ದು, ರಿಯಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಇನ್ನೋರ್ವ ಸಹೋದರಿ ಲುಬಾ° ಅವರ ಮಗ ಇಸ (4) ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಹಿಬಾ ಅವರ ತಂದೆ ಶಮೀಮ್‌ ಮತ್ತು ತಾಯಿ ಝರೀನಾ ಮತ್ತು ಮೊಮ್ಮಕ್ಕಳು ಇನ್ನೊಂದು ಕಾರಿನಲ್ಲಿದ್ದರು. ಕತಾರ್‌ನಿಂದ ಮದೀನಕ್ಕೆ ಮಂಗಳವಾರ ಉಮ್ರಾ ಯಾತ್ರೆ ಆರಂಭಿಸಿದ್ದರು. ಮಂಗಳವಾರ ರಾತ್ರಿ ರಿಯಾದ್‌ ತಲುಪಿದ್ದ ಅವರು ಅಲ್ಲಿ ಕುಟುಂಬಸ್ಥರ ಮನೆಯಲ್ಲಿ ಉಳಿದುಕೊಂಡಿದ್ದರು. ಬುಧವಾರ ಬೆಳಗ್ಗೆ ಅಲ್ಲಿಂದ ತಾಯೀಫ್‌ನತ್ತ ಯಾತ್ರೆ ಆರಂಭಿಸಿದ್ದರು.

ರಿಯಾದ್‌ನಿಂದ 250 ಕಿ.ಮೀ. ದೂರದ ಝುಲ್ಫಾ ಎಂಬಲ್ಲಿ ಅವಘಡ ಸಂಭವಿಸಿದ್ದು, ರಮೀಝ್ ಅವರು ಕಾರು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಒಂದು ಮಗು ಮತ್ತು ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರ ಗಾಯಗೊಂಡಿದ್ದ ಇನ್ನೊಂದು ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

ಘಟನೆಯ ಹಿನ್ನೆಲೆಯಲ್ಲಿ ತೋಕೂರು ಸರಕಾರಿ ಶಾಲೆಯ ಬಳಿಯ ಅವರ ಕುಟುಂಬದ ಮನೆಯಲ್ಲಿ ನೀರವ ಮೌನ ನೆಲೆಸಿದೆ. ಮೃತರ ಅಂತಿಮ ವಿಧಿವಿಧಾನಗಳು ಕತಾರ್‌ನಲ್ಲಿಯೇ ನಡೆಯಲಿವೆ ಎಂದು ತಿಳಿದು ಬಂದಿದೆ.

ಕತಾರ್‌ನಲ್ಲಿ ನೆಲೆಸಿದ್ದರು
ಮೃತ ಹಿಬಾ ಅವರ ಕುಟುಂಬ ಮತ್ತು ಅವರ ಹೆತ್ತವರು ಹಲವು ವರ್ಷಗಳಿಂದ ಕತಾರ್‌ನಲ್ಲಿ ನೆಲೆಸಿದ್ದರು. ಹಿಬಾ ಅವರ ಪತಿ ಮುಹಮ್ಮದ್‌ ರಮೀಝ್ ಮುಂಬಯಿ ಮೂಲದವರು. ತಂದೆ ಮತ್ತು ಪತಿ ಇಬ್ಬರೂ ಕತಾರ್‌ನಲ್ಲಿ ಕಂಪೆನಿಯಲ್ಲಿ ಉದ್ಯೋಗಿಗಳಾಗಿದ್ದರು ಎಂದು ತಿಳಿದು ಬಂದಿದೆ. ಅಪಘಾತವಾದ ರಭಸಕ್ಕೆ ಕಾರು ರಸ್ತೆಯಿಂದ ಹಲವು ಮೀಟರ್‌ಗಳಷ್ಟು ಹೊರ ಪ್ರದೇಶಕ್ಕೆ ಹೋಗಿ ಬಿದ್ದಿದೆ. ಇದರಿಂದಾಗಿ ಶಮೀಮ್‌ ಹಾಗೂ ಮನೆಯ ಇತರರು ಹಿಂದಿನಿಂದ ಇನ್ನೊಂದು ಕಾರಿನಲ್ಲಿ ತೆರಳುತ್ತಿದ್ದರೂ ಅಪಘಾತ ಸಂಭವಿಸಿರುವುದು ಅವರ ಅರಿವಿಗೆ ಬಂದಿರಲಿಲ್ಲ.

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.