Politics : ಸಿಎಂ ಸಿದ್ದು ಧ್ವನಿ ಇಲ್ಲದಂತೆ ಇದ್ದಾರೆ: ಡಾ| ಅಶ್ವತ್ಥ ವ್ಯಂಗ್ಯ
Team Udayavani, Mar 21, 2024, 8:10 PM IST
ಮೈಸೂರು: ರಾಜ್ಯದಲ್ಲಿರುವುದು ದುರ್ಬಲ ಸಿಎಂ ಹಾಗೂ ದುರ್ಬಲ ಪಾರ್ಟಿಯಾಗಿದ್ದು, ಸಿದ್ದರಾಮಯ್ಯ ಧ್ವನಿ ಇಲ್ಲದಂತಿದ್ದಾರೆ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವ್ಯಂಗ್ಯವಾಡಿದ್ದಾರೆ.
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಗುರುವಾರ ಭೇಡಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ “ನಾನು ಸ್ಟ್ರಾಂಗ್ ಸಿಎಂ’ ಎಂಬ ಸಿದ್ದರಾಮಯ್ಯ ಹೇಳಿ ಕೆಗೆ ಪ್ರತಿಕ್ರಿಯಿಸಿ, ಬರೀ ಭ್ರಷ್ಟಾಚಾರ, ಲೂಟಿಯಷ್ಟೇ ಆ ಪಕ್ಷದಲ್ಲಿ ನಡೆಯುತ್ತಿದೆ. ಅವರ ಪಕ್ಷದವರೇ ನಾನು ಸಿಎಂ ಆಗುತ್ತೇನೆ, ಮಂತ್ರಿಯಾಗುತ್ತೇನೆ ಎಂಬ ಹೇಳಿಕೆ ಕೊಡುತ್ತಿದ್ದು, ಸಿದ್ದರಾಮಯ್ಯ ಅವರಿಗೆ ನಿಯಂತ್ರಣ ಇಲ್ಲದಂತಾಗಿದೆ ಎಂದು ಲೇವಡಿ ಮಾಡಿದರು.
ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಯಲಿದ್ದು, ಪಕ್ಷದ ತೀರ್ಮಾನಕ್ಕೆ ತಾವು ಬದ್ಧ ಎಂದು ಸುಮಲತಾ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಒಗ್ಗಟ್ಟಿನ ಮಾತು ಹೇಳಿದ್ದು, 2-3 ಕ್ಷೇತ್ರದಲ್ಲಿ ಟಿಕೆಟ್ ಗೊಂದಲವಿದೆ. ಟಿಕೆಟ್ ಸಿಗದಿದ್ದಾಗ ನೋವು, ಬೇಸರವಾಗುವುದು ಸಹಜ, ಹಾಗೆಂದ ಮಾತ್ರಕ್ಕೆ ದುಡುಕಬಾರದು, ಪಕ್ಷ ತಾಯಿ ಇದ್ದಂತೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!
BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ
ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.