Lok Sabha Elections: ಕಾಂಗ್ರೆಸ್‌ ಪರ ಬೇರೆ ಕ್ಷೇತ್ರದಲ್ಲೂ ಪ್ರಚಾರ; ಶಿವರಾಜ್‌ ಕುಮಾರ್‌


Team Udayavani, Mar 21, 2024, 8:22 PM IST

Lok Sabha Elections: ಕಾಂಗ್ರೆಸ್‌ ಪರ ಬೇರೆ ಕ್ಷೇತ್ರದಲ್ಲೂ ಪ್ರಚಾರ; ಶಿವರಾಜ್‌ ಕುಮಾರ್‌

ಕುಂದಾಪುರ: ಶಿವಮೊಗ್ಗದಲ್ಲಿ ಗೀತಾ ಪರ ನಾನು ಈ ಬಾರಿ ಸಂಪೂರ್ಣ ಜತೆಗಿರುತ್ತೇನೆ. ಕಾಂಗ್ರೆಸ್‌ ಪರ ಶಿವಮೊಗ್ಗದೊಂದಿಗೆ ಬೇರೆ ಕ್ಷೇತ್ರದಲ್ಲೂ ಈ ಬಾರಿ ಪ್ರಚಾರ ಮಾಡುತ್ತೇನೆ. ಸ್ವಲ್ಪ ಶೂಟಿಂಗ್‌ ಇದೆ. ಅದು ಮುಗಿಸಿಕೊಂಡು ಮತ್ತೆ ಬರುತ್ತೇನೆ. ಗೀತಾ ಪರ ಪ್ರಚಾರಕ್ಕೆ ಚಿತ್ರರಂಗದವರೂ ಬರುತ್ತಾರೆ. ಫೀಲಂ ಚೇಂಬರ್‌ನವರು, ನಿರ್ಮಾಪಕರು, ನಿರ್ದೇಶಕರು ಬರುತ್ತಾರೆ. ಕಲಾವಿದರು ಯಾರೆಲ್ಲ ಬರುತ್ತಾರೆ ಗೊತ್ತಿಲ್ಲ, ಕರೆದರೆ ಖಂಡಿತ ಬರುತ್ತಾರೆ ಎಂದು ನಟ ಶಿವರಾಜ್‌ ಕುಮಾರ್‌ ಹೇಳಿದರು.

ಗುರುವಾರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರ ವಿಶೇಷ ಪೂಜೆ ಸಲ್ಲಿಸಿ, ಬಳಿಕ ವಂಡ್ಸೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

ಎಲ್ಲ ಪಕ್ಷದಲ್ಲೂ ನನ್ನ ಅಭಿಮಾನಿಗಳಿದ್ದಾರೆ. ಎಲ್ಲರಿಗೂ ಅವರದ್ದೇ ನಿರ್ಧಾರ ಕೈಗೊಳ್ಳುವ ಹಕ್ಕಿದೆ. ನಾವು ಹೇಳುವ ಮಾತುಗಳು ಅವರಿಗೆ ಮನವರಿಕೆ ಆದರೆ ನಮ್ಮ ಜತೆ ಬರ್ತಾರೆ. ಯಾರನ್ನೂ ಒತ್ತಡ ಹಾಕಿ, ಎಳೆದುಕೊಂಡು ಬರಲು ಆಗಲ್ಲ. ಮನಸಾರೆ ನಾನು ಅಭಿಮಾನಿಗಳ ಜತೆಗೆ ಇರುತ್ತೇನೆ ಎಂದವರು ತಿಳಿಸಿದರು.

ಅಪ್ಪಾಜಿ ಬಿಟ್ಟರೆ ಕರಾವಳಿಯಲ್ಲಿ ಅತೀ ಹೆಚ್ಚು ಶೂಟಿಂಗ್‌ನಲ್ಲಿ ಪಾಲ್ಗೊಂಡಿರುವುದು ನಾನೇ. ಇಲ್ಲಿನ ಜನ ತುಂಬಾ ಇಷ್ಟ. ಕಾಣೆ, ಅಂಜಲ್‌, ಬೂತಾಯಿ ಎಲ್ಲವೂ ಇಷ್ಟ ಎಂದ ಅವರು, ಬೈಂದೂರು ಕ್ಷೇತ್ರದ ಎಲ್ಲ ಕಡೆಗೂ ಈ ಸಲ ಹೋಗುತ್ತೇನೆ ಎಂದವರು ಹೇಳಿದರು.

ಗೀತಾ ಖಂಡಿತ ಒಳ್ಳೆಯ ಕೆಲಸ ಮಾಡುವ ವಿಶ್ವಾಸವಿದೆ. ಗೆದ್ದರೆ ಜನರಿಗೆ ಸುಲಭವಾಗಿ ಸಿಗುತ್ತಾರೆ. ಇದಕ್ಕೆ ನಾನು ಗ್ಯಾರಂಟಿ. ಶಕ್ತಿಧಾಮವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಸಮಾಜದ ಬಗ್ಗೆಯೂ ಆಕೆಗೆ ಒಳ್ಳೆಯ ಕಾಳಜಿಯಿದೆ. ಹೆಣ್ಣು ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು. ಇಂದಿರಾ ಗಾಂಧಿಯವರಿಗಿಂತ ದೊಡ್ಡ ಉದಾಹರಣೆ ಬೇಕಾ? ಹಿಂದೆ ಗೀತಾ ಜೆಡಿಎಸ್‌ನಿಂದ ಸೋತಿರಬಹುದು. ಆದರೆ ಈ 10 ವರ್ಷದಲ್ಲಿ ಹೊಸ ಮತದಾರರು ಬಂದಿದ್ದಾರೆ. ಹೊಸ ಐಡಿಯಾಗಳು ಬಂದಿವೆ. ಮತದಾರರು ಪ್ರಾಯೋಗಿಕವಾಗಿ ನೋಡುತ್ತಾರೆ. ಜನ ಕಾಂಗ್ರೆಸ್‌ ಬಗ್ಗೆ ಒಲವು ತೋರುತ್ತಿದ್ದಾರೆ ಎಂದರು.

ಶಿವಮೊಗ್ಗ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌, ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ್‌ ಶೆಟ್ಟಿ ಮತ್ತಿತರರಿದ್ದರು.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.