![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 21, 2024, 9:56 PM IST
ಪಾಂಡವಪುರ: ಮಂಡ್ಯ ಲೋಕಸಭಾ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಸ್ಪ ರ್ಧಿಸಲಿದ್ದಾರೆಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸ್ಪಷ್ಟಪಡಿಸಿದರು.
ವೈರಮುಡಿ ಕಿರೀಟ ಪಾಂಡವಪುರಕ್ಕೆ ಆಗಮಿಸಿದ ಸಂದರ್ಭದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಾನೇ ನಿಂತು ಕುಮಾರಸ್ವಾಮಿ ಅವರ ಚುನಾವಣೆ ಮಾಡಲಿದ್ದೇನೆ ಎಂದು ತಿಳಿಸಿದರು.
ಕುಮಾರಸ್ವಾಮಿ ಅವರನ್ನು ಪ್ರಚಂಡ ಮತಗಳಿಂದ ಗೆಲ್ಲಿಸಲಿದ್ದೇವೆ. ಅವರು ನಾಮಪತ್ರ ಸಲ್ಲಿಸಿದರಷ್ಟೇ ಸಾಕು. ಚುನಾವಣೆಯನ್ನು ನಾವು ಮಾಡುತ್ತೇವೆ. ದೇವೇಗೌಡರ ಆಶೀರ್ವಾದ ಹಾಗೂ ಪ್ರಧಾನಿ ಮೋದಿ ಅವರ ಸಹಕಾರದಿಂದ ಅತ್ಯಂತ ಬಹುಮತದಿಂದ ಗೆಲ್ಲಿಸಲಿದ್ದೇವೆ ಎಂದರು.
ಕೋಲಾರ, ಮಂಡ್ಯ, ಹಾಸನ ಸಹಿತ ಮೂರು ಕ್ಷೇತ್ರಗಳಲ್ಲೂ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲಿದ್ದೇವೆ. ಸಣ್ಣಪುಟ್ಟ ವ್ಯತ್ಯಾಸಗಳನ್ನು ಬಗೆಹರಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾ.22ರಂದು ಬಿಜೆಪಿ ವರಿಷ್ಠರ ಸಭೆ ನಡೆಸಲಿದ್ದು, ಜೆಡಿಎಸ್ಗೆ ಯಾವ ಕ್ಷೇತ್ರಗಳು ಎಂದು ತಿಳಿಸಲಿದ್ದಾರೆ ಎಂದರು.
ಎಚ್ಡಿಕೆಗೆ ಸಹಕಾರ ನೀಡುವಂತೆ ಶಾಸಕ ದರ್ಶನ್ಗೆ ಪುಟ್ಟರಾಜು ಮನವಿ:
ಪಾಂಡವಪುರ: ಮಂಡ್ಯ ಲೋಕಸಭೆಯ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ನಿಲ್ಲಿಸ್ತುದ್ದೇವೆ. ನೀವು ಸಹಕಾರ ನೀಡಬೇಕು ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಶಾಸಕ ದರ್ಶನ್ ಪುಟ್ಟಣ್ಣಯ್ಯಗೆ ಮನವಿ ಮಾಡಿದರು.
ವೈರಮುಡಿ ಕಿರೀಟ ಪಾಂಡವಪುರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಲು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಸಿ.ಎಸ್.ಪುಟ್ಟರಾಜು ಒಂದೇ ಸ್ಥಳದಲ್ಲಿ ಜಮಾಯಿಸಿದ್ದರು. ಆ ಸಂದರ್ಭದಲ್ಲಿ ಎದುರು-ಬದುರಾದ ಹಿನ್ನೆಲೆಯಲ್ಲಿ ಇಬ್ಬರು ಹಸ್ತಲಾಘವ ಮಾಡಿಕೊಂಡರು. ಈ ಸಂದರ್ಭದಲ್ಲಿ ಪುಟ್ಟರಾಜು ಅವರು, ನಮ್ಮ ಕುಮಾರಸ್ವಾಮಿ ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಲಿದ್ದಾರೆ. ಆದ್ದರಿಂದ ನೀವು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ “ಆಯ್ತು ನೀವು ಹೇಳಿದಂತೆ ಆಗಲಿ ಸಾರ್’ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.