![ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ](https://www.udayavani.com/wp-content/uploads/2024/07/swamy-415x229.jpg)
Lok Sabha Election 2024; ಬಂಡಾಯ ಶಮನಕ್ಕೆ ಬಿಜೆಪಿ ಕಾರ್ಯತಂತ್ರ
ಉಸ್ತುವಾರಿ ಜತೆ ಬಿ.ವೈ.ವಿಜಯೇಂದ್ರ ಚರ್ಚೆ; ಖುದ್ದು ಯಡಿಯೂರಪ್ಪ ಸಂಧಾನಕ್ಕೆ ಸೂಚನೆ
Team Udayavani, Mar 22, 2024, 10:24 PM IST
![Lok Sabha Election 2024; ಬಂಡಾಯ ಶಮನಕ್ಕೆ ಬಿಜೆಪಿ ಕಾರ್ಯತಂತ್ರ](https://www.udayavani.com/wp-content/uploads/2024/03/bjp-38-620x439.jpg)
ಬೆಂಗಳೂರು: ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲಾ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಸುದೀರ್ಘ ಸಭೆ ನಡೆಸಿದ್ದು ಬಂಡಾಯ ಶಮನ ಹಾಗೂ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ.
ಬಿಜೆಪಿ ರಾಜ್ಯ ಕಚೇರಿಯಲ್ಲಿ ಈ ಸಭೆ ನಡೆದಿದ್ದು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ.ರಾಜೇಶ್ ಕೂಡ ಜತೆಗಿದ್ದರು. 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾದ ಬಳಿಕ ಸೃಷ್ಟಿಯಾಗಿರುವ ಪರಿಸ್ಥಿತಿ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಿದ್ದು ಬಂಡಾಯ ಶಮನದ ಬಗ್ಗೆ ಕಾರ್ಯತಂತ್ರ ರೂಪಿಸಲಾಗಿದೆ ಎಂದು ತಿಳಿದು ಬಂದಿದೆ.
ಪಕ್ಷದ ಕಡೆಯಿಂದ ಸಾಧ್ಯವಿರುವ ಎಲ್ಲ ಪ್ರಯತ್ನ ನಡೆಸಿ ಬಂಡಾಯ ಇತ್ಯರ್ಥಗೊಳಿಸಬೇಕು. ಪ್ರತಿದಿನವೂ ಟಿಕೆಟ್ ವಂಚಿತರ ಆಕ್ರೋಶದ ನುಡಿಗಳು ಮಾಧ್ಯಮಗಳಲ್ಲಿ ಹೈಲೈಟ್ ಆದರೆ ಎದುರಾಳಿಗಳಿಗೆ ನಾವಾಗಿಯೇ ಆಯುಧ ಕೊಟ್ಟಂತಾಗುತ್ತದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದ್ದು ಎಲ್ಲೆಲ್ಲಿ ಸಾಧ್ಯವಿದೆಯೋ ಆ ಎಲ್ಲ ಕಡೆಗಳಲ್ಲಿ ಖುದ್ದು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರೇ ಸಂಧಾನ ಸಭೆ ನಡೆಸುವಂತೆ ವರಿಷ್ಠರಿಂದ ಬಂದ ಸೂಚನೆಯನ್ನು ರಾಧಾ ಮೋಹನ್ ಅಗರ್ವಾಲಾ ನೀಡಿದ್ದಾರೆಂದು ಗೊತ್ತಾಗಿದೆ.
ಪುತ್ರನಿಗೆ ಟಿಕೆಟ್ ಸಿಗದ ಕಾರಣಕ್ಕೆ ಬಂಡಾಯ ಸ್ಪರ್ಧೆಗೆ ನಿರ್ಧರಿಸಿರುವ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಜತೆಗೆ ರಾಜ್ಯದ ನಾಯಕರು ಸತತ ಸಂಪರ್ಕದಲ್ಲಿದ್ದಾರೆ. ಆದರೆ ಹಿಂದಕ್ಕೆ ಇಡುವ ಯಾವುದೇ ಲಕ್ಷಣವನ್ನು ಅವರು ಇದುವರೆಗೆ ತೋರಿಲ್ಲ. ಹೀಗಾಗಿ ಅಗತ್ಯ ಬಿದ್ದರೆ ಕೇಂದ್ರದ ಪ್ರಮುಖರು ಮಧ್ಯ ಪ್ರವೇಶಿಸುವ ಸನ್ನಿವೇಶ ಸೃಷ್ಟಿಯಾಗಬಹುದು ಎಂದು ಹೇಳಲಾಗುತ್ತಿದೆ. ಆದರೆ ಯಾರು, ಯಾವ ಸಂದರ್ಭದಲ್ಲಿ ಮಾತನಾಡುತ್ತಾರೆಂಬುದು ಬಗೆಹರಿದಿಲ್ಲ.
ಪ್ರವಾಸ :
ಇದರ ಜತೆಗೆ ರಾಷ್ಟ್ರ ಹಾಗೂ ರಾಜ್ಯ ನಾಯಕರ ಪ್ರವಾಸದ ಬಗ್ಗೆಯೂ ಚರ್ಚೆ ನಡೆದಿದೆ. ಕೆಲ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಪ್ರತ್ಯೇಕ ಪ್ರಚಾರ ನಡೆಸುವ ಸಾಧ್ಯತೆಯಿದೆ. ಜತೆಗೆ ಪ್ರಧಾನಿ ಹೊರತುಪಡಿಸಿ ಇತರ ನಾಯಕರ ಜತೆಗೆ ಸ್ಥಳೀಯವಾಗಿ ಯಾರ್ಯಾರು ವೇದಿಕೆ ಹಂಚಿಕೊಳ್ಳಬೇಕೆಂಬ ಬಗ್ಗೆಯೂ ಚರ್ಚೆ ನಡೆದಿದೆ.
ಟಾಪ್ ನ್ಯೂಸ್
![ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ](https://www.udayavani.com/wp-content/uploads/2024/07/swamy-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು](https://www.udayavani.com/wp-content/uploads/2024/07/bison-150x98.jpg)
Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು
![Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ](https://www.udayavani.com/wp-content/uploads/2024/07/annadata-150x103.jpg)
Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ
![Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ](https://www.udayavani.com/wp-content/uploads/2024/07/hdk-150x83.jpg)
Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ
![Transfer of 23 IAS officers including five District Collectors](https://www.udayavani.com/wp-content/uploads/2024/07/IAS-officer-150x83.jpg)
IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ
MUST WATCH
ಹೊಸ ಸೇರ್ಪಡೆ
![ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ](https://www.udayavani.com/wp-content/uploads/2024/07/swamy-150x83.jpg)
Raichur; ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ
![Yaakshagana-Artist](https://www.udayavani.com/wp-content/uploads/2024/07/Yaakshagana-Artist-150x90.jpg)
Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ
![Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!](https://www.udayavani.com/wp-content/uploads/2024/07/BJP-2-150x81.jpg)
Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-150x91.jpg)
ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.