Bagalkot Ticket ಬದಲಿಸಲು 2 ದಿನ ಗಡುವು ನೀಡಿದ ಕಾಶಪ್ಪನವರ್
Team Udayavani, Mar 22, 2024, 11:36 PM IST
ಬಾಗಲಕೋಟೆ: ವ್ಯಕ್ತಿಗಿಂತ ಪಕ್ಷ ದೊಡ್ಡದು. ಪಕ್ಷದೊಳಗಿನ ಶಿಸ್ತಿನ ಬಗ್ಗೆ ನಾನು ಯಾರಿಂದಲೂ ಕಲಿಯಬೇಕಿಲ್ಲ. ನಮ್ಮ ಪಕ್ಷದ ಹಿರಿಯರ ಮೇಲೆ ನನಗೆ ನಂಬಿಕೆ ಇದೆ. ಐದು ವರ್ಷ ಪಕ್ಷಕ್ಕಾಗಿ ದುಡಿದವರ ಹೆಸರನ್ನೇ ಎಐಸಿಸಿಗೆ ಕಳುಹಿಸಿಲ್ಲ. ಇದು ಕೇವಲ ಬಾಗಲಕೋಟೆ ಕ್ಷೇತ್ರದ ಸ್ವಾಭಿಮಾನಕ್ಕೆ ಧಕ್ಕೆಯಾಗಿಲ್ಲ. 50 ವರ್ಷಗಳಿಂದ ಕಾಂಗ್ರೆಸ್ನಲ್ಲಿರುವ ಕಾಶಪ್ಪನವರ್ ಕುಟುಂಬದ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ. ಹೈಕಮಾಂಡ್ ಎರಡು ದಿನಗಳಲ್ಲಿ ಟಿಕೆಟ್ ಬದಲಿಸಬೇಕು. ಇಲ್ಲದಿದ್ದರೆ ನಾನು ನನ್ನ ನಿರ್ಧಾರವನ್ನು ಪ್ರಕಟಿಸಬೇಕಾಗುತ್ತದೆ ಎಂದು ಹುನಗುಂದ ಶಾಸಕ, ಕರ್ನಾಟಕ ವೀರಶೈವ ಲಿಂಗಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ವೀಣಾ ಕಾಶಪ್ಪನವರ್ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು ಹಾಗೂ ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಇತರ ಶಾಸಕರೇ ಬೆಂಬಲ ಕೊಡುತ್ತಿಲ್ಲ. ಅಂತಹ ವಿರೋಧದ ಮಧ್ಯೆ ಗೆದ್ದು ಬರುವ ತಾಕತ್ತು ಇದೆಯಾ ಎಂದು ವಿಜಯಪುರದವರೊಬ್ಬರು ಪ್ರಶ್ನೆ ಮಾಡಿದ್ದಾರೆ.
ನಮ್ಮ ತಾಕತ್ತು ಏನೆಂಬುದು ನನಗೆ ಗೊತ್ತಿದೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನ ಗೆಲ್ಲಲು ನನ್ನ ಪಾತ್ರವೂ ಇದೆ. 50 ವರ್ಷಗಳಿಂದ ಕಾಂಗ್ರೆಸ್ನಲ್ಲಿ ಯಾರು ಬಂದರು, ಯಾರು ಹೋದರು ಎಲ್ಲವನ್ನೂ ನೋಡಿದ್ದೇನೆ. ನನಗೂ ಇಡೀ ರಾಜ್ಯವನ್ನೇ ಒಂದು ಕೈ ನೋಡೋಣ (ಸಿಎಂ ಆಗುವ ಕನಸು) ಎಂಬ ಆಲೋಚನೆ ಇದೆ ಎಂದರು.
ಪಕ್ಷನಿಷ್ಠೆ ಬಗ್ಗೆ ಮಾತನಾಡುವ ಸಚಿವ ಶಿವಾನಂದ ಪಾಟೀಲ್ ಕುಟುಂಬದವರು ಯಾವ ಯಾವ ಪಕ್ಷದಲ್ಲಿದ್ದಾರೆ. ನೀವು ಯಾವಾಗ ಕಾಂಗ್ರೆಸ್ಗೆ ಬಂದಿದ್ದೀರಿ. ನೀವು ಪಕ್ಷಕ್ಕೆ ಬರುವ ಮೊದಲೇ ನಮ್ಮ ತಂದೆ ಶಾಸಕರು, ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ನಿಮ್ಮಿಂದ ಪಕ್ಷದ ಬಗ್ಗೆ ತಿಳಿದುಕೊಳ್ಳಬೇಕಿಲ್ಲ ಎಂದರು.
ನಮ್ಮ ಪಕ್ಷದ ಹಿರಿಯರ ಮೇಲೆ ನನಗೆ ವಿಶ್ವಾಸವಿದೆ. ಯಾರದೋ ಬೆದರಿಕೆ ಅಥವಾ ಆಮಿಷಕ್ಕೆ ಬಗ್ಗದೆ ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಇಲ್ಲದಿದ್ದರೆ ಎರಡು ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ.
– ವಿಜಯಾನಂದ ಕಾಶಪ್ಪನವರ್, ಕಾಂಗ್ರೆಸ್ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ
MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ
Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ
Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ
Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.