Bantwal; 4.65 ಲಕ್ಷ ರೂ. ಕಳೆದುಕೊಂಡ ಆಟೋ ಚಾಲಕ
Team Udayavani, Mar 23, 2024, 12:48 AM IST
ಬಂಟ್ವಾಳ: ಹೆಚ್ಚಿನ ಲಾಭ ಗಳಿಸುವ ಉದ್ದೇಶದಿಂದ ಆ್ಯಪ್ ಬಳಸಿ ವಿವಿಧ ಖಾತೆಗಳಿಗೆ ಹಣ ಹೂಡಿಕೆ ಮಾಡಿ ಆಟೋ ಚಾಲಕನೋರ್ವ 4.65 ಲಕ್ಷ ರೂ.ಗಳನ್ನು ಕಳೆದುಕೊಂಡ ಘಟನೆ ಸರಪಾಡಿ ಗ್ರಾಮದಲ್ಲಿ ನಡೆದಿದೆ.
ಆಟೋ ರಿಕ್ಷಾ ಚಾಲಕ ಹರೀಶ್ಕುಮಾರ್ ಹಣ ಕಳೆದುಕೊಂಡವರು. ಅವರ ಮೊಬೈಲ್ಗೆ ಕಳೆದ ಡಿ. 20ರಂದು ಸೂಚನೆಯೊಂದು ಬಂದಿದ್ದು, ಅದರಂತೆ ಅವರು ನಮ್ಜೀನಿಯಸ್ ಎ1 ಆ್ಯಪ್ ಡೌನ್ಲೋಡ್ ಮಾಡಿದ್ದರು. ಬಳಿಕ ಆ್ಯಪ್ ಮೂಲಕ ಹಣ ಹೂಡಿಕೆ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಅಪರಿಚಿತರು ವಾಟ್ಸ್ಆಪ್ನಲ್ಲಿ ಸೂಚಿಸಿದ ವಿವಿಧ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 5,85,200 ರೂ.ಗಳನ್ನು ವರ್ಗಾಯಿಸಿದ್ದರು.
ಅದರಲ್ಲಿ ಹರೀಶ್ ಅವರಿಗೆ 1,20,175 ರೂ.ಗಳನ್ನು ಹಿಂದಿರುಗಿಸಲಾಗಿದ್ದು, ಉಳಿದ ಬಾಕಿ ಮೊತ್ತ 4,65,025 ರೂ.ಗಳನ್ನು ಹಿಂದಿರುಗಿಸದೇ ಮೋಸ ಮಾಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.