Lok sabha polls: ಟಿಕೆಟ್‌ ಕಗ್ಗಂಟು; ಘೋಷಣೆ ಬಳಿಕ ಬಂಡಾಯ ಉಂಟು!


Team Udayavani, Mar 23, 2024, 2:37 PM IST

Lok sabha polls: ಟಿಕೆಟ್‌ ಕಗ್ಗಂಟು; ಘೋಷಣೆ ಬಳಿಕ ಬಂಡಾಯ ಉಂಟು!

ಚಿಕ್ಕಬಳ್ಳಾಪುರ: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆ ಟಿಕೆಟ್‌ ಕದನ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕ್ಷೇತ್ರದ ಮಟ್ಟಿಗೆ ತೀವ್ರ ಕಗ್ಗಂಟಾಗಿ ಪರಿಣಮಿಸಿದ್ದು, ಟಿಕೆಟ್‌ ಘೋಷಣೆಯಾದರೂ ರಾಜಕೀಯ ಪಕ್ಷಗಳಿಗೆ ಬಂಡಾಯದ ಬೇಗುದಿ ತಗಲುವ ಸಾಧ್ಯತೆ ಎದ್ದು ಕಾಣುತ್ತಿದೆ.

ರಾಜ್ಯದ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್‌, ಬಿಜೆಪಿ ತನ್ನ ಅಭ್ಯರ್ಥಿ ಗಳನ್ನು ಘೋಷಿಸಿದರೂ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಮಾತ್ರ ಇನ್ನೂ ಅಂತಿಮ ಅಭ್ಯರ್ಥಿ ಘೋಷಿ ಸುವಲ್ಲಿ ಕಾಂಗ್ರೆಸ್‌, ಬಿಜೆಪಿ- ಜೆಡಿಎಸ್‌ ಮೈತ್ರಿ ಪಕ್ಷಗಳು ಹಿಂದೆ ಬಿದ್ದಿವೆ. ದಿನಕ್ಕೊಬ್ಬರ ಹೆಸರುಗಳು ಅಖಾಡದಲ್ಲಿ ತೇಲಿ ಬರುತ್ತಿವೆ.

ಪಕ್ಷಗಳಿಗೆ ಬಂಡಾಯ ಖಚಿತ:  ಅಭ್ಯರ್ಥಿಗಳ ಆಯ್ಕೆಗೆ ಕಳೆದೊಂದು ತಿಂಗಳಿಂದ ರಾಜಕೀಯ ಪಕ್ಷಗಳಲ್ಲಿ ತೀವ್ರ ಕರಸತ್ತು ನಡೆಸುತ್ತಿರುವಾಗಲೇ ಕ್ಷೇತ್ರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳ ಟಿಕೆಟ್‌ ಆಕಾಂಕ್ಷಿಗಳ ನಡುವೆ ಒಬ್ಬರ ಮುಖ ಒಬ್ಬರು ನೋಡಿಕೊಳ್ಳಲಾಗದಷ್ಟು ಅಂತರ ಸೃಷ್ಟಿಯಾಗಿದೆ. ಆದರಲ್ಲೂ ಬಣ ರಾಜಕೀಯದ ಗುಂಪುಗಾರಿಕೆ ಅಂತೂ ಎರಡು ಪಕ್ಷಗಳಲ್ಲಿ ತಾರಕಕ್ಕೇರಿದೆ. ಯಾರಿಗೆ ಟಿಕೆಟ್‌ ಘೋಷಿಸಿದರೂ ಚುನಾವಣಾ ಅಖಾಡದಲ್ಲಿ ಎದುರಾಳಿ ಟಿಕೆಟ್‌ ಆಕಾಂಕ್ಷಿ ಟಿಕೆಟ್‌ ಪಡೆದವರ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡುವುದು ಅನುಮಾನವಾಗಿದೆ. ಕಾಂಗ್ರೆಸ್‌, ಬಿಜೆಪಿ ಎರಡು ಪಕ್ಷಗಳು ಚುನಾವಣೆಯಲ್ಲಿ ಬಂಡಾಯ ಎದುರಿಸುವ ಪರಿಸ್ಥಿತಿಯನ್ನು ಟಿಕೆಟ್‌ ಕಸರತ್ತು ಸೃಷ್ಟಿಸಿದೆ.

ಸುಧಾಕರ್‌, ವಿಶ್ವನಾಥ ನಡುವೆ ವಾರ್‌: ಬಿಜೆಪಿ ಪಕ್ಷದಲ್ಲಿ ಇದವರೆಗೂ ತನ್ನ ಪುತ್ರ ಆಲೋಕ್‌ ಕುಮಾರ್‌ಗೆ ಟಿಕೆಟ್‌ ಕೇಳುತ್ತಿದ್ದ ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಇದೀಗ ಸ್ವತಃ ತನಗೆ ಟಿಕೆಟ್‌ ಕೊಡಿಯೆಂದು ಪಕ್ಷದ ವರಿಷ್ಠರಿಗೆ ಮನವಿ ಮಾಡುವ ಮೂಲಕ, ಯಾವುದೇ ಕಾರಣಕ್ಕೂ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ಗೆ ಟಿಕೆಟ್‌ ಕೊಡಬಾರದೆಂದು ಹಠ ಹಿಡಿದು ಕೂತಿರುವುದು ನೋಡಿದರೆ ಬಿಜೆಪಿಗೆ ಚುನಾವಣೆಯಲ್ಲಿ ಬಂಡಾಯದ ಬಿಸಿ ತಟ್ಟುವುದರಲ್ಲಿ ಯಾವುದೇ ಅನುಮಾನವಿಲ್ಲ. ಸುಧಾಕರ್‌ಗೆ ಟಿಕೆಟ್‌ ಸಿಕ್ಕರೂ ವಿಶ್ವನಾಥ್‌ ಪಕ್ಷದ ವಿರುದ್ಧ ಬಂಡಾಯ ಸಾರುವ ಸಾಧ್ಯತೆಯನ್ನು ಸದ್ಯದ ರಾಜಕೀಯ ಪರಿಸ್ಥಿತಿಯನ್ನು ನೋಡಿದರೆ ತಳ್ಳಿ ಹಾಕುವಂತಿಲ್ಲ. ಇತ್ತ ವಿಶ್ವನಾಥ್‌ ಕುಟುಂಬಕ್ಕೆ ಬಿಜೆಪಿ ಟಿಕೆಟ್‌ ಸಿಕ್ಕರೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅದರಲ್ಲೂ ಸುಧಾಕರ್‌ ಬೆಂಬಲಿಗರು ಬಂಡಾಯ ಸಾರುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನೂ ಟಿಕೆಟ್‌ ಅಂತಿಮಗೊಳ್ಳದೇ ಇದ್ದರೂ ವಿಶ್ವನಾಥ್‌ ಸುಧಾಕರ್‌ ವಿರುದ್ಧ ಪದೇ ಪದೇ ಟೀಕಾ ಪ್ರಹಾರ ನಡೆಸುತ್ತಿರುವುದು ಎದ್ದು ಕಾಣುತ್ತಿದೆ.

ಜಾತಿ ಗೌಣವಾಗಿದ್ದ ಕ್ಷೇತ್ರದಲ್ಲೀಗ ಜಾತಿ ಪ್ರಧಾನ! :

ವಿಪರ್ಯಾಸದ ಸಂಗತಿಯೆಂದರೆ ಒಂದು ಕಾಲಕ್ಕೆ ಜಾತಿ ಗೌಣವಾಗಿದ್ದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಈಗ ಅಭ್ಯರ್ಥಿ ಆಯ್ಕೆಗೆ ಜಾತಿಯೆ ಪ್ರಧಾನ ಮಾನದಂಡವಾಗಿರುವುದು ಎದ್ದು ಕಾಣುತ್ತಿದೆ. ಬ್ರಾಹ್ಮಣರು, ದೇವಾಡಿಗರು, ಈಡಿಗರು ಸುಲಭವಾಗಿ ಇಲ್ಲಿ ಟಿಕೆಟ್‌ ಪಡೆದು ಒಂದಲ್ಲ, ಎರಡಲ್ಲ, ಹ್ಯಾಟ್ರಿಕ್‌ ಗೆಲುವು ಸಾಧಿಸಿರುವ ನಿರ್ದೇಶನಗಳು ಇವೆ. ಆದರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಳೆದ ಚುನಾವಣೆಗಳಗಿಂತ ಹೆಚ್ಚು ಅಭ್ಯರ್ಥಿ ಆಯ್ಕೆಗೆ ಜಾತಿ ಲೆಕ್ಕಾಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಒಕ್ಕಲಿಗರು, ಬಲಿಜಿಗರು ಟಿಕೆಟ್‌ಗೆ ಹೆಚ್ಚು ತಮ್ಮ ಹಕ್ಕೋತ್ತಾಯ ಮಾಡುತ್ತಿದ್ದಾರೆ. ಉಳಿದ ಜಾತಿಗಳು ಇಲ್ಲಿ ಗೌಣವಾಗಿ ತೊಡಗಿವೆ.

ಕೈನಲ್ಲೂ ಮುಂದುವರಿದ ಟಿಕೆಟ್‌ ಕದನ :

ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಲ್ಲೂ ಈಗಾಗಲೇ ಟಿಕೆಟ್‌ಗಾಗಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಬಣ, ರಕ್ಷಾ ರಾಮಯ್ಯ ಬಣ ಹಾಗೂ ಗೌರಿಬಿದನೂರು ಮಾಜಿ ಸಚಿವ ಎನ್‌.ಎಚ್‌.ಶಿವಶಂಕರರೆಡ್ಡಿ ಬಣಗಳು ಸೃಷ್ಠಿಯಾಗಿವೆ. ಟಿಕೆಟ್‌ಗಾಗಿ ನಡೆಯುತ್ತಿರುವ ಹೋರಾಟ ಕೈ ಪಾಳೆಯದ ಮುಖಂಡರಲ್ಲಿ ಗುಂಪುಗಾರಿಕೆಗೆ ಇನ್ನಷ್ಟು ತುಪ್ಪ ಸವರಿದಂತಾಗಿದೆ. ಯಾರೇ ಟಿಕೆಟ್‌ ಪಡೆದರೂ ಉಳಿದವರು ಅವರ ಪರ ಕೆಲಸ ಮಾಡುತ್ತಾರೆಂಬ ನಂಬಿಕೆ, ವಿಶ್ವಾಸ ಉಳಿದವರಲ್ಲಿ, ಹೀಗಾಗಿ ಕಾಂಗ್ರೆಸ್‌ನಲ್ಲೂ ಬಂಡಾಯ ಬಾವುಟ ಹಾರಿಸಿದರೂ ಯಾರು ಅಚ್ಚರಿ ಪಡಬೇಕಿಲ್ಲ. ಈಗಾಗಲೇ ಮಾಜಿ ಸಚಿವ ಎನ್‌.ಎಚ್‌.ಶಿವಶಂಕರರೆಡ್ಡಿ ಬಿಜೆಪಿ ಸೇರುವ ವದಂತಿ ಕ್ಷೇತ್ರದಲ್ಲಿ ದಟ್ಟವಾಗಿತ್ತು.

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.