INDIA alliance: ಸೀಟು ಹಂಚಿಕೆ ಮುನ್ನ ಪಟ್ಟಿ ಪ್ರಕಟ; ಇಂಡಿಯಾ ಒಕ್ಕೂಟದಲ್ಲಿ ಬಿರುಕು
Team Udayavani, Mar 24, 2024, 9:22 AM IST
ಪಟ್ನಾ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದರೂ ವಿಪಕ್ಷಗಳ “ಇಂಡಿಯಾ’ ಒಕ್ಕೂಟದ ನಡುವೆ ಮತ್ತೆ ಮತ್ತೆ ಒಡಕು ಕಾಣಿಸಿಕೊಳ್ಳುತ್ತಿದೆ. ಬಿಹಾರದಲ್ಲಿ “ಇಂಡಿಯಾ’ ಒಕ್ಕೂಟದ ಪಕ್ಷಗಳ ನಡುವೆ ಸೀಟು ಹಂಚಿಕೆ ಅಂತಿಮ ಗೊಳ್ಳುವ ಮುನ್ನವೇ ಆರ್ಜೆಡಿ, ತನ್ನ 12 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಗೊಳಿಸಿದೆ.
ಇದರಿಂದಾಗಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳ ನಡುವೆ ಬಿರುಕು ಮೂಡುವ ಸಾಧ್ಯತೆಗಳು ದಟ್ಟವಾಗಿವೆ. ಸೀಟು ಹಂಚಿಕೆಗೆ ಮೊದಲೇ ಆರ್ಜೆಡಿ ಅಭ್ಯರ್ಥಿಗಳ ಪಟ್ಟಿ ಘೋಷಿರುವುದಕ್ಕೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಹಾರದಲ್ಲಿ ಒಟ್ಟು 40 ಲೋಕಸಭಾ ಕ್ಷೇತ್ರಗಳಿವೆ. ಈ ಪೈಕಿ 12 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳಿಗೆ ಆರ್ಜೆಡಿ ಟಿಕೆಟ್ ನೀಡಿದೆ. ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರ ಪುತ್ರಿಯರಾದ ಡಾ| ರೋಹಿಣಿ ಆಚಾರ್ಯ ಸರಣ್ ಕ್ಷೇತ್ರದಿಂದ ಮತ್ತು ಮಿಸಾ ಭಾರತಿ ಪಾಟಲಿಪುತ್ರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇದೇ ರೀತಿ ಜೆಹನಾಬಾದ್ನಿಂದ ಸುರೇಂದ್ರ ಪ್ರಸಾದ್ ಯಾದವ್, ಬಂಕಾದಿಂದ ಜೈಪ್ರಕಾಶ್ ನಾರಾಯಣ್ ಯಾದವ್, ಮಧುಬನಿಯಿಂದ ಅಲಿ ಅಶ್ರಫ್ ಫಾತ್ಮಿ, ದರ್ಬಾಂಗದಿಂದ ಲಲಿತ್ ಯಾದವ್ ಕಣಕ್ಕಿಳಿಯಲಿದ್ದಾರೆ.
ಬೇಗುಸರಾಯಿ ಕ್ಷೇತ್ರ ಯಾರಿಗೆ?: ಇನ್ನೊಂದಡೆ, ಬೇಗುಸರಾಯಿ ಕ್ಷೇತ್ರದಿಂದ ಮಾಜಿ ಶಾಸಕ ಅವದೇಶ್ ಕುಮಾರ್ ರೈ ಅವರಿಗೆ ಸಿಪಿಐ ಟಿಕೆಟ್ ನೀಡಿದೆ. ಇದನ್ನು ಸ್ವತಃ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಘೋಷಿಸಿದ್ದಾರೆ. ಆದರೆ ಬೇಗುಸರಾಯಿ ಕ್ಷೇತ್ರವನ್ನು ತನಗೆ ಬಿಟ್ಟುಕೊಡಬೇಕು ಎಂದು ಕಾಂಗ್ರೆಸ್ ಪಟ್ಟುಹಿಡಿದಿತ್ತು. ಈ ಕ್ಷೇತ್ರದಲ್ಲಿ ಕನ್ಹಯ್ಯ ಕುಮಾರ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. 2021ರಲ್ಲಿ ಸಿಪಿಐ ತ್ಯಜಿಸಿ ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.