![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 24, 2024, 11:52 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಶನಿವಾರ ಮತ್ತೊಂದು ಪಟ್ಟಿ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶದ ಒಂಬತ್ತು ಸೇರಿ ಒಟ್ಟು 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಪ್ರತಿಷ್ಠಿತ ವಾರಣಸಿ ಕ್ಷೇತ್ರವೂ ಸೇರಿದೆ.
ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುವ ವಾರಣಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಅಜಯ್ ರಾಯ್ ಅವರಿಗೆ ಟಿಕೆಟ್ ನೀಡಿದೆ.
ಅಜಯ್ ರಾಯ್ ಅವರು ಪ್ರಧಾನಿ ಮೋದಿ ವಿರುದ್ಧದ ಸತತ ಮೂರನೇ ಬಾರಿ ಸ್ಪರ್ಧೆ ನಡೆಸುತ್ತಿದ್ದಾರೆ. ಅವರು 2014 ಮತ್ತು 2019 ಲೋಕಸಭಾ ಚುನಾವಣೆಯಲ್ಲಿಯೂ ಮೋದಿ ವಿರುದ್ಧ ಸ್ಪರ್ಧೆ ನಡೆಸಿ ಸೋಲನುಭವಿಸಿದ್ದರು.
2014 ರಲ್ಲಿ ಪ್ರಧಾನಿ ಮೋದಿ 56% ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿದರು, ಅಜಯ್ ರಾಯ್ ಅವರು ಸುಮಾರು 75,000 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಅಂದು ಅದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಅವರು 3.5 ಲಕ್ಷ ಮತಗಳ ಅಂತರದಿಂದ ಎರಡನೇ ಸ್ಥಾನದಲ್ಲಿದ್ದಾರೆ.
2019ರಲ್ಲಿ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಮಾಜವಾದಿ ಪಕ್ಷದ ಶಾಲಿನಿ ಯಾದವ್ ಮತ್ತು ಕಾಂಗ್ರೆಸ್ನ ಅಜಯ್ ರಾಯ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. 63% ಕ್ಕಿಂತ ಹೆಚ್ಚು ಮತ ಹಂಚಿಕೆಯೊಂದಿಗೆ ಪ್ರಧಾನಿ ಮೋದಿ ಮತ್ತೊಮ್ಮೆ ಗೆಲುವು ಸಾಧಿಸಿದ್ದರು. ಯಾದವ್ ಅವರು ಸುಮಾರು 18% ಮತಗಳನ್ನು ಗಳಿಸಿ ಎರಡನೇ ಸ್ಥಾನವನ್ನು ಪಡೆದರು, ಆದರೆ ಕಾಂಗ್ರೆಸ್ ನ ರಾಯ್ ಅವರು ಸುಮಾರು 14% ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.
ವಾರಣಸಿ ಕ್ಷೇತ್ರದಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಬಿಗಿ ಹಿಡಿತ ಹೊಂದಿದೆ. 2004ರಲ್ಲಿ ಹೊರತುಪಡಿಸಿ 1991ರಿಂದ ಇಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದೆ. 2004ರಲ್ಲಿ ಕಾಂಗ್ರೆಸ್ ಪಕ್ಷದ ರಾಜೇಶ್ ಕುಮಾರ್ ಮಿಶ್ರಾ ಗೆಲುವು ಸಾಧಿಸಿದ್ದರು.
ಸ್ಥಳೀಯವಾಗಿ ಪ್ರಬಲ ವ್ಯಕ್ತಿಯಾಗಿದ್ದ ಅಜಯ್ ರಾಯ್ ಅವರು ಬಿಜೆಪಿಯ ವಿದ್ಯಾರ್ಥಿ ಘಟಕದೊಂದಿಗೆ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. 1996 ಮತ್ತು 2007 ರ ನಡುವೆ ಮೂರು ಬಾರಿ ಯುಪಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದರು. ಆದಾಗ್ಯೂ, 2009 ರಲ್ಲಿ, ಅವರಿಗೆ ಬಿಜೆಪಿಯಿಂದ ಲೋಕಸಭೆ ಟಿಕೆಟ್ ನಿರಾಕರಿಸಿದಾಗ, ಅವರು ಸಮಾಜವಾದಿ ಪಕ್ಷಕ್ಕೆ ಸೇರಿದರು. ಆದರೆ ಚುನಾವಣೆಯಲ್ಲಿ ಸೋತಿರು. ಮೂರು ವರ್ಷಗಳ ನಂತರ ಅವರು ಕಾಂಗ್ರೆಸ್ ಸೇರಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.