ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ


Team Udayavani, Mar 26, 2024, 5:24 PM IST

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಉದಯವಾಣಿ ಸಮಾಚಾರ
ಅಮೀನಗಡ: ಮಾ. 26ರಂದು ಪಟ್ಟಣದಿಂದ ಶ್ರೀಶೈಲ ಮಲ್ಲಯ್ಯನ ಪಾದಯಾತ್ರೆ ಆರಂಭ ಗೊಳ್ಳಲಿದ್ದು, 111 ಅಡಿ ಉದ್ದದ ಮಲ್ಲಯ್ಯನ ಧ್ವಜ ಅನಾವರಣ ನಡೆಯಲಿದೆ. ಪಟ್ಟಣದ ಶ್ರೀಶೈಲ ಭಕ್ತರು ಹಾಗೂ ಬೆಂಗಳೂರಿನ ಅಮ್ಮಾ ಫೌಂಡೇಶನ್‌ ಪದಾಧಿ ಕಾರಿಗಳು ನಡೆಸುವ ಪಾದಯಾತ್ರೆಯಲ್ಲಿ ಭಕ್ತರು ಅಧ್ಯಾತ್ಮಿಕ ಚಿಂತನೆಯ ಜತೆಗೆ ಲೋಕಸಭೆ ಚುನಾವಣೆ ನಿಮಿತ್ತ ಸಾರ್ವಜನಿಕರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು ನಿರ್ಧರಿಸುವುದು ವಿಶೇಷವಾಗಿದೆ.

ರಸ್ತೆಯುದಕ್ಕೂ 111 ಅಡಿ ಉದ್ದದ ಮಲ್ಲಯ್ಯ ಧ್ವಜ ಕೂಡಾ ತೆಗೆದುಕೊಂಡು ಹೋಗಲು ಹಾಗೂ ಮಲ್ಲಯ್ಯನ ಧ್ವಜಕ್ಕೆ 111 ಕೆಜಿ ಹೂವಿನ ಸುರಿಮಳೆಗೈಯಲು ಭರ್ಜರಿ ಸಿದ್ಧತೆ ನಡೆಸಿದೆ. ಮಲ್ಲಯ್ಯನ ಧ್ವಜವನ್ನು ಖ್ಯಾತ ಕಲಾವಿದ ಅಸ್ಲಂ ಕಲಾದಗಿ ಹಾಗೂ ಅಮೀನಗಡದ ರವಿ ಬಂಡಿ ತಯಾರಿ ಮಾಡುತ್ತಿದ್ದಾರೆ.

ಸಾಮಾಜಿಕ ಕಾರ್ಯ: ಉದ್ಯಮಿ-ಪತ್ರಕರ್ತ ಮಂಜುನಾಥ ಬಂಡಿ ಕಳೆದ 9 ವರ್ಷ ಹಿಂದೆ ಬೆಂಗಳೂರಿನ ಗೆಳೆಯರ ಬಳಗವನ್ನು ಪಟ್ಟಣಕ್ಕೆ ಕರೆದುಕೊಂಡು ಬಂದು ಶ್ರೀಶೈಲ ಪಾದಯಾತ್ರೆ ಆರಂಭಿಸಿದ್ದಾರೆ. ಪಾದಯಾತ್ರೆಯಲ್ಲಿ ಧಾರ್ಮಿಕ ಕಾರ್ಯದ ಜೊತೆಗೆ ಹಲವಾರು ಸಾಮಾಜಿಕ ಕಾರ್ಯ ಮಾಡಿದ್ದಾರೆ. ಈ ಬಾರಿ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪತ್ರಕರ್ತ ಮಂಜುನಾಥ ಬಂಡಿ ನೇತೃತ್ವದ ಪಟ್ಟಣದ ಹಾಗೂ ಬೆಂಗಳೂರಿನ ಅಮ್ಮಾ ಫೌಂಡೇಶನ್‌-ಹೆಲ್ಪ್ ಆ್ಯಂಡ್‌ ಗ್ರೋ ತಂಡವು ಕೊರೊನಾದಂತ ಸಂಕಷ್ಟದ ಸಂದರ್ಭದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆಯಲ್ಲಿ 108 ಅಡಿ ಉದ್ದದ ಮಲ್ಲಯ್ಯನ ಧ್ವಜ ಹಾಗೂ ಅತಿ ದೊಡ್ಡ ಮಾಸ್ಕ್ ಪ್ರದರ್ಶನ ಮಾಡುವುದರ ಮೂಲಕ ಕೊರೊನಾ ಜಾಗೃತಿ ಮಾಡಿ ಸಾಮಾಜಿಕ ಕಳಕಳಿ ಮೆರೆದಿತ್ತು. ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆಯಲ್ಲಿ ಸಾರ್ವಜನಿಕರಿಗೆ ಮತದಾನದ ಮಹತ್ವ ಬಗ್ಗೆ ಜಾಗೃತಿ ಮೂಡಿಸಬೇಕು ಎಂಬ ಉತ್ತಮವಾದ ಉದ್ದೇಶದಿಂದ ಮತದಾನ ಜಾಗೃತಿ ಕಾರ್ಯ ಮಾಡಲಾಗುತ್ತದೆ ಎಂದು ಹೇಳುತ್ತಾರೆ
ಭಕ್ತರು.

ಮತದಾನ ಜಾಗೃತಿ: ಪಾದಯಾತ್ರೆಯಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಭಕ್ತರು ಅತಿದೊಡ್ಡ ಮಲ್ಲಯ್ಯನ ಧ್ವಜ ತೆಗೆದುಕೊಂಡು ಹೋಗುವುದರ ಮೂಲಕ ಮಲ್ಲಯ್ಯನ ಸ್ಮರಣೆ ಮಾಡಿಕೊಂಡು ಹೋಗುವುದರ ಜತೆಗೆ ರಸ್ತೆಯುದ್ದಕ್ಕೂ ಮತದಾನ ನಮ್ಮ ಸಂವಿಧಾನ ಹಕ್ಕು, ಕಡ್ಡಾಯವಾಗಿ ಮತ ಚಲಾಯಿಸುವಂತೆ ಭಿತ್ತಿಪತ್ರ ವಿತರಣೆ ಮೂಲಕ ಮತದಾನ ಜಾಗೃತಿ ಮೂಡಿಸುವ ಯೋಜನೆ ಮಾಡಲಾಗಿದೆ.ಮರಗಾಲು ಕಟ್ಟಿಕೊಂಡು ಪಾದಯಾತ್ರೆ ಮಾಡುವ ಮಲ್ಲಯ್ಯನ ಭಕ್ತರಿಗೆ ಮತ್ತು ಕಂಬಿ ಹೊತ್ತು ಸಾಗುವ ಮಲ್ಲಯ್ಯನ ಭಕ್ತರಿಗೆ ವಿಶೇಷ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಮತ್ತು ಅಮೀನಗಡದಿಂದ ಶ್ರೀಶೈಲವರೆಗೆ ಪಾದಯಾತ್ರೆಯಲ್ಲಿ ದಾರಿಯುದ್ದಕ್ಕೂ ದಾಸೋಹ ಸೇವೆ ಮಾಡುವವರಿಗೆ ಸನ್ಮಾನ ಮಾಡುವ ತೀರ್ಮಾನ ಮಾಡಲಾಗಿದೆ.

ಅಮೀನಗಡದಲ್ಲಿ ಮೂರು ವರ್ಷಗಳಿಂದ ಮಲ್ಲಯ್ಯನ ಭಕ್ತರಿಗೆ ಉಚಿತ ಕಬ್ಬಿನ ರಸ ವಿತರನೆ ಮಾಡುತ್ತಿದ್ದ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಲಾಗುವುದು ಎಂದು ಅಮ್ಮಾ ಫೌಂಡೇಶನ್‌ ಸಂಸ್ಥಾಪಕ ರೋಹಿತ ವಿ.ಕೆ ಮಾಹಿತಿ ನೀಡಿದ್ದಾರೆ ಪಾದಯಾತ್ರೆಯಲ್ಲಿ 5 ವರ್ಷದ ಅಥ್ಲೀಟ್‌, ಪದ್ಮಾವತಿ ಡಿ.ಆರ್‌., ಈ ಬಾರಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಕಿರಿಯ ವಯಸ್ಸಿನ ಪಾದಯಾತ್ರಿಯಾಗಿದ್ದಾರೆ. ಈ ಬಾರಿ ಪಾದಯಾತ್ರೆಯಲ್ಲಿ ಮೈಸೂರಿನ ಸಚ್ಚಿದಾನಂದ, ಅಂತಾರಾಷ್ಟ್ರೀಯ ನೃತ್ಯಪಟು ಗುರು ರೂಪಾ ರವಿಚಂದ್ರನ, ಕಾಮಡಿ ಕಿಲಾಡಿ, ಬಿಗ್‌ಬಾಸ್‌ನ ಲೋಕೇಶನ ಹಲವಾರು ಯುವ ಕಲಾವಿದರು ಭಾಗಿಯಾಗಲಿದ್ದಾರೆ.

*ಎಚ್‌.ಎಚ್‌.ಬೇಪಾರಿ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

festcide

Feticide: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಪತ್ತೆ

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

1-MLP

BJP:ಮಹಾಲಿಂಗಪುರ ಪುರಸಭೆಯ 4 ಸದಸ್ಯರು, 3 ಮುಖಂಡರು ಪಕ್ಷದಿಂದ ಉಚ್ಛಾಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.