ಮುಂಡಗೋಡ:ಗ್ರಾಮೀಣ ಪ್ರದೇಶಗಳಿಗೆ ಖಾಸಗಿ ಕೊಳವೆಬಾವಿ ನೀರು ಪೂರೈಕೆ


Team Udayavani, Mar 26, 2024, 6:09 PM IST

ಮುಂಡಗೋಡ:ಗ್ರಾಮೀಣ ಪ್ರದೇಶಗಳಿಗೆ ಖಾಸಗಿ ಕೊಳವೆಬಾವಿ ನೀರು ಪೂರೈಕೆ

ಉದಯವಾಣಿ ಸಮಾಚಾರ
ಮುಂಡಗೋಡ: ತಾಲೂಕಿನಲ್ಲಿ ಹಂತ ಹಂತವಾಗಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಮುಂದಿನ ದಿನದಲ್ಲಿ ಗ್ರಾಮಾಂತರ ಪ್ರದೇಶದ ಕೆಲಭಾಗಗಳಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣಗೊಳ್ಳುವ ಸಾಧ್ಯತೆ ಇದೆ.

ತಾಲೂಕಿನಾದ್ಯಂತ ರೈತರು, ಜನಸಾಮಾನ್ಯರು, ಪ್ರಾಣಿ, ಪಕ್ಷಿಜೀವ ಸಂಕುಲಗಳ ಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಬಿಸಿಲಿನ
ತಾಪಮಾನದಿಂದ ಡ್ಯಾಂ, ಹಳ್ಳಗಳ ನೀರಿನ ಮೂಲಗಳು ಬತ್ತಿ ಬರಿದಾಗಿವೆ. ಇದರಿಂದ ಅಡಕೆ, ಬಾಳೆ, ಸೇರಿದಂತೆ ಇತರೆ ಬೆಳೆಗಳ ಮೇಲೆ ತೀವ್ರ ಪರಿಣಾಮ ಬೀರಿದ್ದು, ಇದೀಗ ಬೆಳೆಗಳ ರಕ್ಷಣೆ ಸವಾಲಾಗಿ ಪರಿಣಮಿಸಿದೆ.

ಮಳೆಯ ಅಭಾವ, ಬೊರ್‌ವೆಲ್‌ ಕೊರೆತ, ಕಾಡುಗಳ ನಾಶ, ನೀರಿನ ದುರ್ಬಳಕೆ ಹೀಗೆ ಹತ್ತು ಹಲವಾರು ಕಾರಣಗಳಿಂದ ಅಂತರ್ಜಲ ಕುಸಿದಿದೆ ಎನ್ನಬಹುದಾಗಿದೆ.

ಖಾಸಗಿ ಕೊಳವಿಬಾವಿಗಳಿಂದ ನೀರು ಪೂರೈಕೆ:
ತಾಲೂಕಿನ ಮೈನಳ್ಳಿ, ಕ್ಯಾತ್ನಳ್ಳಿ, ಇಂದೂರ, ಕೊಪ್ಪ, ಅಂದಲಗಿ, ಚವಡಳ್ಳಿ, ಮಲವಳ್ಳಿ, ಹುಲಿಹೊಂಡ, ಗುಂಜಾವತಿ, ಉಗ್ನಿಕೇರಿ, ಚವಡಳ್ಳಿ ಪ್ಲಾಟ್‌, ಮಲವಳ್ಳಿ ಪ್ಲಾಟ್‌, ಕೆಂದಲಗೇರಿ, ರಾಮಾಪುರ, ಶಿವಾಜಿನಗರ ಸೇರಿದಂತೆ ತಾಲೂಕಿನ 18 ಹಳ್ಳಿಗಳಲ್ಲಿ ಖಾಸಗಿ ಬೋರ್‌ವೆಲ್‌ಗ‌ಳನ್ನು ಬಾಡಿಗೆ ಆಧಾರದಲ್ಲಿ ಪಡೆದು ಕುಡಿಯುವ ನೀರು ಪೂರೈಸಲಾಗುತ್ತಿದೆ.

ಮೈನಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದ್ದಿದ್ದು, ಅಲ್ಲಲ್ಲಿ ಟ್ಯಾಂಕರ್‌ ಮೂಲಕ ನೀರನ್ನು ಪೂರೈಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಟ್ಯಾಂಕರ್‌ ನೀರು ಪೂರೈಸುವುದು ಸಹ ಅಷ್ಟು ಸುಲಭವಲ್ಲ ಎನ್ನಲಾಗುತ್ತಿದೆ. ಕೆಲಭಾಗಗಳಲ್ಲಿ ಒಬ್ಬರಿಗೆ ಇಂತಿಷ್ಟು ಕೊಡ ನೀರು ಎಂದು ಪೂರೈಸುವ ಸಂಭವವಿದೆ.

ಪಟ್ಟಣದಲ್ಲಿ ಈಗಾಗಲೇ ಮೂರು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿತ್ತು. ಮೇ ಕೊನೆವರಿಗೆ ನೀರಿನ ಸಮಸ್ಯೆಯಿಲ್ಲ. ನೀರಿನ ಅಭಾವದಿಂದಾಗಿ ಇದೀಗ ನಿಯಮಿತವಾಗಿ ನೀರು ಪೂರೈಸುವ ಲಕ್ಷಣಗಳು ಕಂಡು ಬರುತ್ತಿದೆ.

ಮುಂದಿನ ದಿನಗಳಲ್ಲಿ 40 ಗ್ರಾಮ: ತಾಲೂಕಿನ 16 ಗ್ರಾಪಂದವರು ಈಗಾಗಲೆ ಕುಡಿಯುವ ನೀರಿನ ಸಮಸ್ಯೆ ಮುಂದಿನ ಏಪ್ರೀಲ್‌ ತಿಂಗಳು ಯಾವ ಯಾವ ಗ್ರಾಮಗಳಲ್ಲಿ ಎದುರಾಗಲಿದೆ ಎಂಬ ಮಾಹಿತಿಯನ್ನು ಸಂಗ್ರಹಿಸಿ ಇಟ್ಟಿದ್ದಾರೆ. ಏಪ್ರೀಲ್‌ನಲ್ಲಿ ಹೊಸದಾಗಿ 40 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು, ಈ ಗ್ರಾಮಗಳಲ್ಲಿಯೂ ಖಾಸಗಿ ಬೋರ್‌ವೆಲ್‌ ಗಳನ್ನು ಗುರುತಿಸಿ ಇಡಲಾಗಿದೆ ಎಂಬ ಮಾಹಿತಿ ಗ್ರಾಪಂಗಳಿಂದ ತಿಳಿದು ಬಂದಿದೆ.

ಸದ್ಯ ತಾಲೂಕಿನಲ್ಲಿ ಪ್ರಮುಖ ಜಲಾಶಯ ಹಾಗೂ ದೊಡ್ಡ ಕೆರೆಗಳನ್ನು ಹೊರತು ಪಡಿಸಿದರೆ. ಶೇ.95 ರಷ್ಟು ಕೆರೆ, ಕಟ್ಟೆಗಳು ಬರಿದಾಗಿ ನಿಂತಿವೆ. ಇದರಿಂದ ದನ-ಕರುಗಳು ಹಾಗೂ ಅರಣ್ಯದಲ್ಲಿನ ಕಾಡು ಪ್ರಾಣಿಗಳು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.