![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 27, 2024, 6:11 PM IST
ಉಡುಪಿ: ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಬುಧವಾರ ವಿವಿಧೆಡೆ ದಾಳಿ ನಡೆಸಿದ್ದಾರೆ. ಎರಡು ವರ್ಷಗಳಿಂದ ಉಡುಪಿಯಲ್ಲಿ ಅಬಕಾರಿ ಇಲಾಖೆಯ ಉಪಆಯುಕ್ತೆಯಾಗಿದ್ದು, ಪ್ರಸ್ತುತ ಕಾರವಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರೂಪಾ ಅವರ ಬೆಂಗಳೂರಿನಲ್ಲಿರುವ ಎರಡು ಮನೆಗಳು, ಶಿವಮೊಗ್ಗದಲ್ಲಿರುವ ಒಂದು ತೋಟದ ಮನೆ, ಕಾರವಾರದಲ್ಲಿರುವ ಮನೆ ಹಾಗೂ ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಈ ವೇಳೆ ಅಪಾರ ಪ್ರಮಾಣದಲ್ಲಿ ಆಸ್ತಿ ಗಳಿಕೆ ಮಾಡಿರುವ ವಿಚಾರ ಲಭಿಸಿದ್ದು, ಮತ್ತಷ್ಟು ಮಾಹಿತಿ ಕಲೆ ಹಾಕಲಾಗುತ್ತಿದೆ.
ದ.ಕ. ಲೋಕಾಯುಕ್ತ ಎಸ್ಪಿ (ಪ್ರಭಾರ) ಮಲ್ಲಿಕ್ ಸಿ. ನೇತೃತ್ವದಲ್ಲಿ ಉಡುಪಿ ಡಿವೈಎಸ್ಪಿ. ಪಿ.ಪ್ರಕಾಶ್, ಇನ್ಸ್ಪೆಕ್ಟರ್ಗಳಾದ ಮಂಜುನಾಥ್, ರಫಿಕ್ ಅವರನ್ನೊಳಗೊಂಡ 3 ತಂಡಗಳನ್ನು ರಚಿಸಲಾಗಿತ್ತು. ಸ್ಥಳೀಯ ಲೋಕಾಯುಕ್ತ ಪೊಲೀಸರು ಸಹಕರಿಸಿದರು.
You seem to have an Ad Blocker on.
To continue reading, please turn it off or whitelist Udayavani.