![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 29, 2024, 9:05 PM IST
ಮಂಗಳೂರು: ಹಣ ಮತ್ತು ಚಿನ್ನ ಕಳವು ಮಾಡಿದ ಕಾರ್ಮಿಕನಿಗೆ ಮನೆಮಂದಿ ಹಲ್ಲೆ ನಡೆಸುವ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ಕುಳದ ಮನೆಯೊಂದರಲ್ಲಿ ಕೆಲಸಕ್ಕಿದ್ದ ಬಿಹಾರ ಮೂಲದ ಇಬ್ಬರು ಯುವಕರ ಪೈಕಿ ಓರ್ವ ಅದೇ ಮನೆಯಿಂದ ಒಂದೂವರೆ ಲಕ್ಷ ರೂ. ನಗದು ಮತ್ತು ಚಿನ್ನಾಭರಣ ಕಳವು ಮಾಡಿದ್ದನೆನ್ನಲಾಗಿದೆ. ಇದರ ಬಗ್ಗೆ ಮನೆಯವರು ಆತನನ್ನು ಪ್ರಶ್ನಿಸಿ ಬಾಯಿ ಬಿಡಿಸಲು ಯತ್ನಿಸಿ ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದ್ದು ವೈರಲ್ ಆಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ವೀಡಿಯೋ ಗಮನಿಸಿ ಕೂಡಲೇ ವಿಚಾರಣೆ ನಡೆಸಿದ್ದೇವೆ. ಬಿಹಾರ ಮೂಲದ ಯುವಕ ಅರ್ಕುಳದ ಮನೆಯೊಂದರಲ್ಲಿ ಕೆಲಸಕ್ಕಿದ್ದ. ಆತ ನಗದು ಮತ್ತು ಚಿನ್ನ ಕಳವು ಮಾಡಿದ್ದ. ಅದನ್ನು ವಾಪಸ್ ನೀಡುವಂತೆ ಹೇಳಿ ಮನೆಯವರು ಹಲ್ಲೆ ನಡೆಸಿರುವುದು ಗೊತ್ತಾಗಿದೆ. ಬಳಿಕ ಆತ ಚಿನ್ನ, ನಗದು ವಾಪಸ್ ನೀಡಿದ್ದಾನೆ. ಎರಡೂ ಕಡೆಯವರು ಕೂಡ ದೂರು ನೀಡದೆ ರಾಜಿಯಲ್ಲೇ ಇತ್ಯರ್ಥ ಮಾಡಿಕೊಂಡಿದ್ದಾರೆ. ಯುವಕ ತನ್ನ ಊರಿಗೆ ವಾಪಸಾಗಿದ್ದಾನೆ ಎಂದು ತಿಳಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.