![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Mar 29, 2024, 10:12 PM IST
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಚಿಕ್ಕಬಳ್ಳಾಪುರ ಸೇರಿದಂತೆ ಕರ್ನಾಟಕದ ಮೂರೂ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಬಹಿರಂಗಗೊಳಿಸಲಾಗಿದೆ.
ಇಂದು ಬಿಡುಗಡೆಗೊಳಿಸಿದ ಪಟ್ಟಿಯಲ್ಲಿ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು ಅದರಲ್ಲಿ ಕರ್ನಾಟಕದ ಮೂರೂ ಕ್ಷೇತ್ರ ಹಾಗೂ ರಾಜಸ್ಥಾನದ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.
ಕರ್ನಾಟಕದ ಮೂರೂ ಕ್ಷೇತ್ರಗಳಲ್ಲಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು ಕೋಲಾರ ಕ್ಷೆತ್ರದ ಟಿಕೆಟ್ ಮಾತ್ರ ಬಾಕಿ ಉಳಿದಿದೆ.
ಅದರಂತೆ ಬಳ್ಳಾರಿಯಲ್ಲಿ ಇ ತುಕರಾಂ, ಚಾಮರಾಜನಗರದಲ್ಲಿ ಸಚಿವ ಎಚ್ಸಿ ಮಹಾದೇವಪ್ಪ ಅವರ ಪುತ್ರ ಸುನೀಲ್ ಬೋಸ್ಗೆ ಟಿಕೆಟ್ ನೀಡಲಾಗಿದ್ದು ಜೊತೆಗೆ ಚಿಕ್ಕಬಳ್ಳಾಪುರದಲ್ಲಿ ಎಂ.ಎಸ್.ರಾಮಯ್ಯನವರ ಮೊಮ್ಮಗ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.
ಇದರೊಂದಿಗೆ ಕಾಂಗ್ರೆಸ್ ನ ಒಟ್ಟು 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಕೋಲಾರ ಒಂದು ಕ್ಷೇತ್ರವನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.