SulyaPadavu: ಚೆಕ್‌ಪೋಸ್ಟ್‌ ತಪ್ಪಿಸಿ ವಾಹನ ಸಂಚಾರ

ಪೊಲೀಸರ ಕಣ್ತಪ್ಪಿಸಿ ಅಕ್ರಮ ವ್ಯವಹಾರ ನಡೆಯುವ ಶಂಕೆ

Team Udayavani, Mar 30, 2024, 10:27 AM IST

4-checkpost

ಸುಳ್ಯಪದವು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ಗಡಿಭಾಗದ ಮೇನಾಲ ಮತ್ತು ಪಾಣಾಜೆ ಚೆಕ್‌ ಪೋಸ್ಟ್‌ಗಳಲ್ಲಿ ವಾಹನ ತಪಾಸಣೆ ಚುರುಕುಗೊಂಡಿದೆ. ಪರಿಣಾಮವಾಗಿ ಗಡಿಭಾಗವಾದ ಸುಳ್ಯ ಪದವಿನಲ್ಲಿ ವಾಹನ ಸಂಚಾರ ಹೆಚ್ಚಳಗೊಂಡಿದೆ. ಕಾರಣ ಇಲ್ಲಿ ಯಾವುದೇ ಚೆಕ್‌ಪೋಸ್ಟ್‌ ಇಲ್ಲ. ಕೊರೊನಾ ಮತ್ತು ವಿಧಾನಸಭಾ ಚುನಾವಣೆ ಸಂದರ್ಭಗಳಲ್ಲಿ ಇಲ್ಲಿ ನಾಕಾಬಂದಿ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಚೆಕ್‌ಪೋಸ್ಟ್‌ ನಿರ್ಮಾಣವಾಗಿಲ್ಲ.

ಮೇನಾಲ ಮತ್ತು ಪಾಣಾಜೆಯಲ್ಲಿ ಕರ್ನಾಟಕದ ಚೆಕ್‌ಪೋಸ್ಟ್‌ಗಳು ಇರುವುದರಿಂದ ಮತ್ತು ಪಲ್ಲತ್ತೂರಿನಲ್ಲಿ ಕೇರಳ ರಾಜ್ಯದ ಚೆಕ್‌ಪೋಸ್ಟ್‌ ನಿರ್ಮಾಣಗೊಂಡು ತಪಾಸಣೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ವಾಹನ ಚಾಲಕರು ಸುಳ್ಯ ಪದವು ರಸ್ತೆಯನ್ನು ಅವಲಂಬಿಸಿದ್ದಾರೆ. ಚುನಾವಣೆ ಘೋಷಣೆಯಾದ ಬಳಿಕ ಇಲ್ಲಿ ವಾಹನ ಸಂಚಾರ ಹೆಚ್ಚಾಗಿರುವುದು ಸಂಶಯಕ್ಕೆ ಕಾರಣವಾಗಿದೆ.

ಅದರಲ್ಲೂ ಸಂಜೆಯ ಬಳಿಕ ಹೆಚ್ಚು ವಾಹನಗಳ ಓಡಾಟ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಚೆಕ್‌ ಪೋಸ್ಟ್‌ ಇಲ್ಲದಿರುವುದರಿಂದ ಜನರು ಇದರ ದುರುಪಯೋಗ ಪಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇಲ್ಲಿಯೂ ಚೆಕ್‌ಪೋಸ್ಟ್‌ ರಚಿಸಿ ತಪಾಸಣೆ ಆರಂಭಿಸು ವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕೇರಳದ ಮಿಂಚಿಪದವು, ವಾಣಿ ನಗರ, ಸ್ವರ್ಗದ ಮೂಲಕ ಕರ್ನಾಟಕವನ್ನು ಸಂಪರ್ಕಿಸಲು ಸುಳ್ಯಪದವು ರಸ್ತೆ ಸಮೀಪದ್ದಾಗಿದೆ. ಜತೆಗೆ ಕೇರಳದ ಏತಡ್ಕ -ಬದಿಯಡ್ಕ -ಸುಳ್ಯಪದವು ಅಂತಾರಾಜ್ಯ ರಸ್ತೆ ಅಭಿವೃದ್ಧಿಗೊಂಡು ಸಂಚಾರಕ್ಕೆ ಯೋಗ್ಯವಾಗಿದೆ.

ಕೇರಳದ ಅಧಿಕಾರಿಗಳಿಗೆ ಕರ್ನಾಟಕದ ಚೆಕ್‌ಪೋಸ್ಟ್‌

ಕೇರಳ -ಕರ್ನಾಟಕದ ಗಡಿಭಾಗವಾದ ಪಲ್ಲತ್ತೂರು ಎಂಬಲ್ಲಿ ಕೇರಳದ ಚುನಾವಣಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ವಾಹನ ತಪಾಸಣೆ ನಡೆಸುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಪಲ್ಲತ್ತೂರಿನಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸ ಲಾಗಿತ್ತು. ಇಲ್ಲಿಂದ ಮೇನಾಲಕ್ಕೆ ಚೆಕ್‌ಪೋಸ್ಟ್‌ ವರ್ಗಾಯಿಸಲಾಯಿತು. ಈಗ ಪಲ್ಲತ್ತೂರಿನ ಚೆಕ್‌ಪೋಸ್ಟನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳದ ಚುನಾವಣಾಧಿಕಾರಿಗಳಿಗೆ ಉಪಯೋಗಕ್ಕೆ ನೀಡಲಾಗಿದೆ. ನೆಟ್ಟಣಿಗೆ ಮುಟ್ನೂರು ಗ್ರಾ.ಪಂ.ನಿಂದ ಮೂಲ ಸೌಕರ್ಯ ಒದಗಿಸಲಾಗಿದೆ.

ಹೊಸಂಗಡಿ: ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ

ಸಿದ್ದಾಪುರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಗಡಿ ಭಾಗವಾದ ಹೊಸಂಗಡಿ ಚೆಕ್‌ ಪೋಸ್ಟ್‌ನಲ್ಲಿ ಅಮಾಸೆಬೈಲು ಪೊಲೀಸ್‌ರಿಂದ ಬಿರುಸಿನ ತಪಾಸಣೆ ನಡೆಯುತ್ತಿದೆ. ಉಡುಪಿ ಜಿಲ್ಲಾ ಗಡಿ ಭಾಗವಾದ ಹೊಸಂಗಡಿ ಚೆಕ್‌ ಪೋಸ್ಟ್‌ ಕಂದಾಯ ಇಲಾಖೆಯದ್ದಾಗಿದ್ದು, ಅಮಾಸೆಬೈಲು ಪೊಲೀಸರು ನಿರ್ವಹಿಸುತ್ತಿದ್ದಾರೆ.

ಚುನಾವಣೆಯ ಹಿನ್ನಲೆಯಲ್ಲಿ ಅಮಾಸೆಬೈಲು ಪೊಲೀಸ್‌ ಠಾಣೆಯ ಪೊಲೀಸ್‌ ಉಪ ನಿರೀಕ್ಷಕರಾದ ಸೌಮ್ಯಾ ಅವರ ನೇತೃತ್ವದಲ್ಲಿ ಮೂರು ಪಾಳಿಗಳಲ್ಲಿ ತಪಾಸಣೆ ನಡೆಯುತ್ತಿದೆ. ಪ್ರತೀ ಹಂತದಲ್ಲಿ ನಾಲ್ಕು ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಬ್ಬರು ಪೊಲೀಸ್‌ ಸಿಬಂದಿ ಮತ್ತು ಇತರ ಇಲಾಖೆಗಳ ತಲಾ ಒಬ್ಬರಂತೆ ಇಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.