Punjalkatte: ಉಪ್ಪಿರ; ಬೆಂಕಿ ತಗಲಿ ಮನೆ ಭಸ್ಮ
Team Udayavani, Mar 30, 2024, 6:42 PM IST
ಪುಂಜಾಲಕಟ್ಟೆ: ಕುಕ್ಕಿಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲಿಯನಡುಗೋಡು ಗ್ರಾಮದ ಉಪ್ಪಿರದ ಕೂಲಿ ಕಾರ್ಮಿಕರಾದ ಮೋನಮ್ಮ ಅವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಸಂಪೂರ್ಣ ಭಸ್ಮವಾದ ಘಟನೆ ಶುಕ್ರವಾರ ಸಂಭವಿಸಿದೆ.
ಮೋನಮ್ಮ ಅವರ ಪತಿ ತೀರಿಕೊಂಡಿದ್ದು ಉಪ್ಪಿರದಲ್ಲಿ ಶೀಟ್ ಅಳವಡಿಸಿದ ಚಿಕ್ಕ ಗುಡಿಸಲಿನಲ್ಲಿ ಇಬ್ಬರು ಹೆಣ್ಣು ಮಕ್ಕಳ ಜತೆ ವಾಸವಾಗಿದ್ದರು. ಶುಕ್ರವಾರ ಸಂಜೆ ಸ್ಥಳೀಯ ಪೂಂಜ ದೇವಸ್ಥಾನದಲ್ಲಿ ನಡೆಯುತ್ತಿದ್ದ ವಾರ್ಷಿಕ ಜಾತ್ರೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಸ್ಥಳೀಯರು ಗಮನಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಅದಾಗಲೇ ಬಟ್ಟೆ ಬರೆ, ದವಸ ಧಾನ್ಯ, ಪಾತ್ರೆ, ಹೊಲಿಗೆ ಯಂತ್ರ, ಸ್ವಲ್ಪ ಹಣ ಎಲ್ಲವೂ ಸುಟ್ಟು ಕರಕಲಾಗಿವೆ.
ಮೋನಮ್ಮ ಬಡ ಕುಟುಂಬದ ಮಹಿಳೆಯಾಗಿದ್ದು, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಇಬ್ಬರು ಪುತ್ರಿಯರಲ್ಲಿ ಓರ್ವಳು ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಇನ್ನೊಬ್ಬಳು ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ. ಕಾಲೇಜು ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.
ಉಟ್ಟ ಬಟ್ಟೆಯಷ್ಟೇ ಬಾಕಿ: ಘಟನೆಯಿಂದ ಮೋನಮ್ಮ ಅವರ ಕುಟುಂಬ ಕಂಗಲಾಗಿದೆ. ಉಟ್ಟ ಬಟ್ಟೆಯಟ್ಟೇ ಉಳಿದಿದ್ದು, ತಾತ್ಕಾಲಿಕವಾಗಿ ಸಮೀಪದ ಮನೆಯೊಂದರಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರು, ಸದಸ್ಯರಾದ ಯೋಗೀಶ್ ಆಚಾರ್ಯ, ಶೋಭಾ, ಪಿಡಿಒ ಪದ್ಮಾ ನಾಯ್ಕ, ಗ್ರಾಮಕರಣಿಕ ಪ್ರಕಾಶ್ ಅವರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.