Kasaragod: ರಿಯಾಸ್‌ ಮೌಲವಿ ಕೊಲೆ ಪ್ರಕರಣ; ಆರೋಪಿಗಳ ಖುಲಾಸೆ


Team Udayavani, Mar 30, 2024, 7:20 PM IST

Kasaragod: ರಿಯಾಸ್‌ ಮೌಲವಿ ಕೊಲೆ ಪ್ರಕರಣ; ಆರೋಪಿಗಳ ಖುಲಾಸೆ

ಕಾಸರಗೋಡು: ಕೋಲಾಹಲ ಸೃಷ್ಟಿಸಿದ ಕಾಸರಗೋಡು ಹಳೇ ಸೂರ್ಲಿನ ಮದ್ರಸಾ ಅಧ್ಯಾಪಕ ಮೂಲತಃ ಕೊಡಗು ನಿವಾಸಿ ಮೊಹಮ್ಮದ್‌ ರಿಯಾಸ್‌ ಮೌಲವಿ (28) ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ಕಾಸರಗೋಡು ಪ್ರಿನ್ಸಿಪಲ್‌ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.

2017ರ ಮಾರ್ಚ್‌ 20ರಂದು ರಾತ್ರಿ ಹಳೇ ಸೂರ್ಲಿನ ಬಳಿಯಿರುವ ಅವರ ಕೊಠಡಿಗೆ ನುಗ್ಗಿ ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದರು. ಕೇಳುಗುಡ್ಡೆ ಪರಿಸರ ನಿವಾಸಿ ನಿತಿನ್‌ (26), ಕೇಳುಗುಡ್ಡೆ ಗಂಗೆ ಕುಟೀರದ ಅಖೀಲೇಶ್‌ ಆಲಿಯಾಸ್‌ ಅಖೀಲ್‌ (32) ಮತ್ತು ಕೇಳುಗುಡ್ಡೆ ಅಯ್ಯಪ್ಪ ಭಜನ ಮಂದಿರ ಸಮೀಪದ ಅಜೇಶ್‌ ಆಲಿಯಾಸ್‌ ಅಪ್ಪು (27) ಆರೋಪಿಗಳಾಗಿದ್ದರು.

ವಿಚಾರಣೆಯ ಸಂದರ್ಭದಲ್ಲಿ ಪ್ರಾಸಿಕ್ಯೂಶನ್‌ ಪರವಾಗಿ 97 ಮಂದಿಯ ಸಾಕ್ಷಿ ಹೇಳಿಕೆಗಳನ್ನು ನ್ಯಾಯಾಲಯ ದಾಖಲಿಸಿತ್ತು. ಬಂಧಿತರಾದ ಮೂವರು ಆರೋಪಿಗಳಿಗೆ ಜಾಮೀನು ಲಭಿಸದೆ ಆರು ವರ್ಷಗಳಿಂದ ಜೈಲಿನಲ್ಲೇ ಕಳೆದಿದ್ದರು. ಜ್ಯುಡೀಷಿಯಲ್‌ ಕಸ್ಟಡಿಯಲ್ಲೇ ಅವರ ವಿಚಾರಣೆ ನಡೆಸಲಾಗಿತ್ತು.

ಅಂದು ಕಣ್ಣೂರು ಕ್ರೈಂ ಬ್ರಾಂಚ್‌ ಎಸ್‌ಪಿಯಾಗಿದ್ದ ಡಾ| ಎ. ಶ್ರೀನಿವಾಸ್‌ ನೇತೃತ್ವದ ವಿಶೇಷ ತನಿಖಾ ತಂಡ ಆರೋಪಿಗಳನ್ನು ಕೃತ್ಯ ನಡೆದ ಮೂರೇ ದಿನಗಳಲ್ಲಿ ಬಂಧಿಸಿತ್ತು. ಬಳಿಕ 88 ದಿನಗಳೊಳಗಾಗಿ ತನಿಖೆಯನ್ನು ಮುಗಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಆರೋಪಿಗಳು ಕೋಮು ಗಲಭೆ ಸೃಷ್ಟಿಸುವ ಉದ್ದೇಶ ಹೊಂದಿದ್ದರೆಂದು ಪೊಲೀಸರು ತಿಳಿಸಿದ್ದರು.

ಪ್ರಾಸಿಕ್ಯೂಷನ್‌ ಪರವಾಗಿ ಮೊದಲು ಸ್ಪೆಷಲ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೋಯಿಕ್ಕೋಡ್‌ನ‌ ಎಂ. ಅಶೋಕನ್‌ ವಾದಿಸಿದ್ದರು. ಆದರೆ ಅವರು ಇತ್ತೀಚೆಗೆ ನಿಧನ ಹೊಂದಿದ್ದ ಕಾರಣ ಅವರ ಸಹಾಯಕ ವಕೀಲ ಕೋಯಿಕ್ಕೋಡ್‌ನ‌ ಟಿ. ಶಿಜಿತ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ವಾದ ಮುಂದುವರಿಸಿದ್ದರು. 2019ರಲ್ಲೇ ಪ್ರಕರಣದ ವಿಚಾರಣೆ ಆರಂಭಗೊಂಡಿದ್ದರೂ ವಿವಿಧ ಕಾರಣಗಳಿಂದಾಗಿ ಪದೇಪದೆ ಮುಂದೂಡಲ್ಪಟ್ಟಿತ್ತು. ಕೊಲೆಗೆ ಬಳಸಲಾದ ಆಯುಧಗಳು ಸಹಿತ 45ರಷ್ಟು ವಸ್ತು ಪುರಾವೆಗಳು ಸೇರಿದಂತೆ ಒಟ್ಟು 215 ಪುರಾವೆಗಳನ್ನು ತನಿಖಾ ತಂಡ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಇದರಲ್ಲಿ ವೈಜ್ಞಾನಿಕ ಹಾಗೂ ಇತರ ಹಲವು ಪುರಾವೆಗಳೂ ಇದ್ದವು.

ಪೊಲೀಸ್‌ ಕಟ್ಟೆಚ್ಚರ:

ಕೊಡಗು ನಿವಾಸಿ ಮೊಹಮ್ಮದ್‌ ರಿಯಾಸ್‌ ಮೌಲವಿ ಕೊಲೆ ಪ್ರಕರಣದ ತೀರ್ಪು ಘೋಷಣೆ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ರಜೆಯಲ್ಲಿರುವ ಎಲ್ಲ ಪೊಲೀಸರನ್ನು ಕರ್ತವ್ಯಕ್ಕೆ ಕರೆಸಿಕೊಳ್ಳಲಾಗಿದೆ. ಎಲ್ಲ ಸೂಕ್ಷ್ಮ ಸಂವೇದಿ ಪ್ರದೇಶಗಳಲ್ಲಿ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Accident-Logo

Kasaragodu: ಸ್ಕೂಟರ್‌ – ಕಾರು ಢಿಕ್ಕಿ: ಯುವಕ ಸಾವು

Z-THARUN

Madikeri: ಶುಂಠಿ ತುಂಬಿದ ಎತ್ತಿನಗಾಡಿ ಬಿದ್ದು ಬಾಲಕ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.