Kerala: ಶಿಕ್ಷಕಿ-ಚಾಲಕ ಸಾವು; ಅಪಘಾತಕ್ಕೆ ಆತ್ಮಹತ್ಯೆಯ ಟ್ವಿಸ್ಟ್? ಏನಿದು ಪ್ರಕರಣ?

ಅನುಜಾ ರವೀಂದ್ರನ್- ಹಾಶಿಮ್ ಘಟನೆಗೆ ಸಂಬಂಧಿಸಿದಂತೆ ಆಘಾತಕಾರಿ ಅಂಶಗಳು ಬೆಳಕಿಗೆ

Team Udayavani, Mar 31, 2024, 12:44 PM IST

Kerala: ಶಿಕ್ಷಕಿ-ಚಾಲಕ ಸಾವು; ಅಪಘಾತಕ್ಕೆ ಆತ್ಮಹತ್ಯೆಯ ಟ್ವಿಸ್ಟ್? ಏನಿದು ಪ್ರಕರಣ?

ಪತ್ತನಂತಿಟ್ಟ: ಕಾರು -ಟ್ರಕ್‌ ನಡುವಿನ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಆಘಾತಕಾರಿ ಅಂಶಗಳು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಗುರುವಾರ ರಾತ್ರಿ ಈ ಅಪಘಾತದಲ್ಲಿ ಅಲಪ್ಪುಳದ ನೂರನಾಡ್‌ನ ಶಿಕ್ಷಕಿ ಅನುಜಾ ರವೀಂದ್ರನ್(37) ಆಕೆಯ ಸ್ನೇಹಿತ ಹಾಶಿಮ್ (31) ಮೃತಪಟ್ಟಿದ್ದಾರೆ.

ಏನಿದು ಘಟನೆ? : ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಅನುಜಾ ಹಾಗೂ ಖಾಸಗಿ ಬಸ್‌ ಚಾಲಕನಾಗಿದ್ದ ಹಾಶಿಮ್‌ ಇಬ್ಬರು ಕೂಡ ಪರಿಚಯಸ್ಥರು. ಗುರುವಾರ ಸಂಜೆ(ಮಾ.29 ರಂದು) ಶಾಲಾ ಪ್ರವಾಸದಿಂದ ವಾಪಾಸ್‌ ಆಗುತ್ತಿದ್ದ ವೇಳೆ ಬಸ್ಸಿಗೆ ತನ್ನ ಕಾರನ್ನು ಅಡ್ಡ ನಿಲ್ಲಿಸಿದ ಹಾಶಿಮ್‌ ಬಸ್‌ ಯೊಳಗೆ ತೆರಳಿ ಅನುಜಾ ಅವರನ್ನು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಅನುಜಾ, ಹಾಶಿಮ್‌ ನನ್ನು ಈತ ನನ್ನ ಸಹೋದರ ಸಂಬಂಧಿ, ಈತನ ಹೆಸರು ವಿಷ್ಣು ಎಂದು ಸಹದ್ಯೋಗಿಗಳಿಗೆ ಪರಿಚಯ ಮಾಡಿಕೊಂಡು ಅಲ್ಲಿಂದ ತೆರಳಿದ್ದಾರೆ.

ಇದಾದ ಬಳಿಕ ಕಾರಿನಲ್ಲಿ ಹಾಶಿಮ್‌ ಹಾಗೂ ಅನುಜಾ ತೆರಳಿದ್ದಾರೆ. ಕೆಲ ಸಮಯದ ಬಳಿಕ ಅನುಜಾರಿಗೆ ಅವರ ಸಹದ್ಯೋಗಿಗಳು ಕರೆ ಮಾಡುತ್ತಾರೆ. ಈ ವೇಳೆ ಅನುಜಾ ಅಳುತ್ತಾ ತಾನು ವಿಷ್ಣು(ಹಾಶಿಮ್)‌ ಜತೆ ಜೀವನವನ್ನು ಅಂತ್ಯಗೊಳಿಸುತ್ತಿದ್ದೇನೆ ಎಂದು ಹೇಳಿ ಪೋನ್‌ ಕಟ್‌ ಮಾಡಿದ್ದಾರೆ.  ಇದನ್ನು ಕೇಳಿ ಸಂಶಯದಿಂದ ಸಹದ್ಯೋಗಿ ಅನುಜಾಳ ಮನೆಗೆ ಹಾಗೂ ಅವರ ಪತಿಗೆ ಮಾಹಿತಿ ನೀಡಿದ್ದಾರೆ.

ಈ ವಿಚಾರವನ್ನು ಪೊಲೀಸರಿಗೆ ಹೇಳಿದಾಗ, ಪೊಲೀಸರು ಅನುಜಾಳ ಮೊಬೈಲ್‌ ಪತ್ತೆ ಹಚ್ಚಲು ಯತ್ನಿಸಿದ್ದಾರೆ. ಆದರೆ ಈ ವೇಳೆಗೆ ಅನುಜಾ – ಹಾಶಿಮ್‌ ತೆರಳುತ್ತಿದ್ದ ಕಾರು – ಟ್ರಕ್‌ ವೊಂದಕ್ಕೆ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತ ಘಟನೆಯಲ್ಲಿ ಅನುಜಾ ಸ್ಥಳದಲ್ಲೇ ಜೀವ ಬಿಡುತ್ತಾರೆ. ಗಂಭೀರ ಗಾಯಗೊಂಡ ಹಾಶಿಮ್‌ ಆಸ್ಪತ್ರೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.

ಅಪಘಾತಕ್ಕೂ ಮುನ್ನ ನಡೆದಿತ್ತಾ ಆತ್ಮಹತ್ಯೆ ಪ್ಲ್ಯಾನ್?‌ : ಮೊದಲಿಗೆ ಇದೊಂದು ಅಪಘಾತ ಪ್ರಕರಣವೆಂದು ದೂರು ದಾಖಲಿಸಿದ ತನಿಖೆ ಆರಂಭಿಸಿದ ಪೊಲೀಸರಿಗೆ ಮುಂದೆ ಸಾಗುತ್ತಿದ್ದಂತೆ ಕೆಲವೊಂದು ವಿಚಾರಗಳು ಬೆಳಕಿಗೆ ಬಂದಿದೆ. ಖುಷಿಯಿಂದಲೇ ಬಸ್ಸಿನಿಂದ ಇಳಿದ ಅನುಜಾ ಇದ್ದಕ್ಕಿದ್ದಂತೆ ಸಾಯುತ್ತೇನೆ ಎನ್ನುವ ಮಾತುಗಳನ್ನು ಆಡಿದ್ದೇಕೆ ಎನ್ನುವ ಪ್ರಶ್ನೆಯೊಂದು ತನಿಖೆ ವೇಳೆ ಬರುತ್ತದೆ. ಇದಲ್ಲದೆ ಕಾರಿನಲ್ಲಿ ಮದ್ಯದ ಬಾಟಲಿ ಕೂಡ ಪತ್ತೆ ಯಾಗಿದೆ.

ಕಾರು ಚಾಲಕ ಬೇಕಂತಲೇ ವೇಗವಾಗಿ ರಾಂಗ್‌ ಸೈಡ್‌ ನಿಂದ ಬಂದು ಟ್ರಕ್‌ ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಹೇಳಿದ್ದಾರೆ.  ಅನುಜಾ ಕುಟುಂಬದಲ್ಲಿ ವಿಷ್ಣು ಎನ್ನುವ ವ್ಯಕ್ತಿಯೇ ಇಲ್ಲ ಎಂದು ಕುಟುಂಬಸ್ಥರು ಪೊಲೀಸರಲ್ಲಿ ಹೇಳಿದ್ದಾರೆ.

ಹಾಶಿಮ್‌ – ಅನುಜಾ ನಡುವೆ ಸಂಬಂಧವಿದ್ದಿರಬಹುದೆಂದು ಶಂಕಿಸಲಾಗಿದೆ. ಸದ್ಯ ಇಬ್ಬರ ಮೊಬೈಲ್‌ ಫೋನ್‌ ಸಂಪೂರ್ಣವಾಗಿ ಹಾನಿಯಾಗಿದ್ದು, ಅದರಲ್ಲಿದ್ದ ಅಂಶ ಬಯಲಿಗೆ ಬಂದ ಬಳಿಕವಷ್ಟೇ ಘಟನೆ ಹಿಂದಿನ ಕಾರಣ ತಿಳಿದು ಬರಬಹುದು ಎನ್ನಲಾಗಿದೆ. ಕಳೆದ ನಾಲ್ಕು ವರ್ಷದಿಂದ ಅನುಜಾ ಹಾಗೂ ಹಾಶಿಮ್‌ ಆತ್ಮೀಯವಾಗಿದ್ದರು ಎನ್ನಲಾಗಿದೆ.

ಬೇಕಂತಲೇ ಟ್ರಕ್‌ ಗೆ ಕಾರು ಢಿಕ್ಕಿ ಹೊಡೆದ ಚಾಲಕ? 

ಈ ಸಂಬಂಧ ಮೋಟಾರು ವಾಹನ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿದ್ದು, ಅಪಘಾತಕ್ಕೀಡಾದ ಕಾರನ್ನು ಪರಿಶೀಲಿಸಿದ್ದಾರೆ. ಕಾರು ಚಲಾಯಿಸುತ್ತಾ, ಟ್ರಕ್‌ ಗೆ ಢಿಕ್ಕಿ ಹೊಡೆಯುವ ವೇಳೆ ಚಾಲಕ ಬ್ರೇಕ್‌ ಹಾಕಿಲ್ಲ. ಇಬ್ಬರು ಸೀಟ್‌ ಬೆಲ್ಟ್‌ ನ್ನು ಕೂಡ ಧರಿಸಿರಲಿಲ್ಲ ಎಂದು ಅಧಿಕಾರಿಗಳು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಅನುಜಾರ ಪತಿ ಉದ್ಯಮಿಯಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ಇನ್ನು ಹಾಶಿಮ್‌ ಮೂರು ವರ್ಷದಿಂದ ಪತ್ನಿಯಿಂದ ದೂರವಾಗಿದ್ದರು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Hindus ಹೇಳಿಕೆ ;ರಾಹುಲ್ ಹೇಳಿಕೆಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

firing

Punjab; ನೀರಿಗಾಗಿ ಗುಂಪುಗಳ ಗುಂಡಿನ ಕಾಳಗ: ನಾಲ್ವರು ಸಾವು

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-weewq

Hindus ಹೇಳಿಕೆ ;ರಾಹುಲ್ ಹೇಳಿಕೆಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.