ಇಂದಿನಿಂದ ಮತ್ತೆ 3 ದಿನ ಸಿಎಂ ಮೈಸೂರು ಪ್ರವಾಸ
Team Udayavani, Apr 1, 2024, 6:25 AM IST
ಮೈಸೂರು: ಚಾಮರಾಜನಗರ, ಮೈಸೂರು-ಕೊಡಗು ಕ್ಷೇತ್ರವನ್ನು ಶತಾಯ ಗತಾಯ ಗೆಲ್ಲಲೇ ಬೇಕು ಎನ್ನುವ ಹಠ ತೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎ.1ರಿಂದ ಮೂರು ದಿನಗಳ ಕಾಲ ಮೈಸೂರಿನಲ್ಲಿ ಬೀಡುಬಿಟ್ಟು ಪ್ರಚಾರ ಕೈಗೊಳ್ಳಲಿದ್ದಾರೆ.
ಎ.1ರಂದು ಬೆಳಗ್ಗೆ 10.40ಕ್ಕೆ ಮೈಸೂರು ವಿಮಾನ ನಿಲ್ದಾ ಣಕ್ಕೆ ಆಗಮಿಸುವ ಸಿದ್ದರಾಮಯ್ಯ, ವರುಣಾ ಕ್ಷೇತ್ರದ ಬಿಳಿಗೆರೆ ಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿಂದ ತಿ.ನರಸೀಪುರಕ್ಕೆ ಹೋಗಿ 3 ಗಂಟೆಗೆ ಪ್ರಚಾರ ಭಾಷಣ ಮಾಡಲಿ ದ್ದಾರೆ. ಬಳಿಕ ಸಂಜೆ ಮೈಸೂರಿಗೆ ಆಗಮಿಸಿ ಕ್ರೈಸ್ತರ ಧರ್ಮಗುರು ಡಾ| ಬರ್ನಾಡ್ ಮೊರೆಸ್ ಅವರನ್ನು ಭೇಟಿ ಮಾಡಲಿದ್ದಾರೆ. ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಎ.2ರಂದು ಬೆಳಗ್ಗೆ 10ಕ್ಕೆ ಶಂಕರಮಠಕ್ಕೆ ಭೇಟಿ ನೀಡಲಿದ್ದು, ಬಳಿಕ 11ಕ್ಕೆ ಚಾಮರಾಜ ಕ್ಷೇತ್ರದಲ್ಲಿ ಚುನಾವಣ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4ಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಜತೆ ಸಭೆ ನಡೆಸಲಿದ್ದಾರೆ. ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡುವರು. ಎ.3ರಂದು 9.30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ. 10.15ಕ್ಕೆ ಹೆಲಿಕಾಪ್ಟರ್ ಮೂಲಕ ಚಾಮರಾಜನಗರಕ್ಕೆ ತಲುಪಿ, ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮೈಸೂರಿಗೆ ಆಗಮಿಸಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.