ಅನ್ನಭಾಗ್ಯದ 540 ಕೆಜಿ ಅಕ್ಕಿ ವಶ; ಕರ್ತವ್ಯಕ್ಕೆ ಅಡ್ಡಿ ದೂರು
Team Udayavani, Apr 1, 2024, 12:48 AM IST
ಕೋಟ: ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಪಡೆದು ದಾಸ್ತಾನಿರಿಸಿದ ಶಿರಿಯಾರ ಗ್ರಾಮದ ದೇವ ರೈಸ್ ಇಂಡಸ್ಟ್ರೀಸ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಿಬಂದಿ ಮತ್ತು ತಹಶೀಲ್ದಾರರು ರವಿವಾರ ದಾಳಿ ನಡೆಸಿ 540 ಕೆ.ಜಿ. ಅಕ್ಕಿ ವಶ ಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಉಡುಪಿ ಆಹಾರ ಉಪನಿರೀಕ್ಷಕರಾದ ಜಯಮಾಧವ ಹಾಗೂ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ಕೋಟ ಠಾಣೆ ಉಪನಿರೀಕ್ಷಕ ತೇಜಸ್ವಿ ಜತೆಯಾಗಿ ದಾಳಿ ನಡೆಸಿದರು. ದಾಳಿಯ ಸಂದರ್ಭ ಆಹಾರ ನಿರೀಕ್ಷಕರಾದ ಶಿವರಾಜ್, ಸುರೇಶ್, ಲೀಲಾನಂದ ಹಾಗೂ ಸಿಬಂದಿ ಜತೆಗಿದ್ದರು. ಇಂಡಸ್ಟ್ರೀಸ್ ಮಾಲಕನ ಮೇಲೆ ಪ್ರಕರಣ ದಾಖಲಾಗಿದೆ.
ಕರ್ತವ್ಯಕ್ಕೆ ಅಡ್ಡಿ ದೂರು
ಕೋಟ ಕಂದಾಯ ನಿರೀಕ್ಷಕರಾದ ಮಂಜುನಾಥ ಅವರು ಮೇಲಧಿ ಕಾರಿಯವರ ಸೂಚನೆಯಂತೆ ರೈಸ್ ಇಂಡಸ್ಟ್ರೀಸ್ಗೆ ದಾಳಿ ನಡೆಸಿ ಜಿಪಿಎಸ್ ಫೊಟೋ ತೆಗೆಯಲು ಮುಂದಾದಾಗ ಸ್ಥಳೀಯರಾದ ಪ್ರಭಾಕರ ಅವರು ಮೊಬೈಲ್ ಫೋನನ್ನು ಎಳೆದು ಇಲಾಖಾ ಕರ್ತವ್ಯ ನಿರ್ವಹಿಸಲು ಅಡ್ಡಿ ಪಡಿಸಿದ್ದಾರೆ ಎಂದು ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರತಿದೂರು
ರೈಸ್ಮಿಲ್ ನನ್ನ ಸಂಬಂಧಿಯದು; ಘಟನೆಯ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದಾಗ ಅಧಿಕಾರಿಗಳೇ ನನ್ನ ಮೇಲೆ ಹಲ್ಲೆ ನಡೆಸಿ, ಸುಳ್ಳು ದೂರು ದಾಖಲಿಸಿದ್ದಾರೆ. ಈ ಬಗ್ಗೆ ನಾನು ಕೂಡ ಪೊಲೀಸರಿಗೆ ಪ್ರತಿದೂರು ನೀಡಿದ್ದು, ಕಾನೂನು ಹೋರಾಟ ನಡೆಸುವೆ ಎಂದು ಪ್ರಭಾಕರ ನಾಯಕ್ ಅವರು ಪತ್ರಿಕೆಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.