Lok Sabha polls: ಗೆಲುವಿನ ಸರದಾರನಿಗೆ ಲೋಕಸಭೆ ಪ್ರವೇಶ ಸಾಧ್ಯವಾಗಲೇ ಇಲ್ಲ


Team Udayavani, Apr 1, 2024, 2:25 PM IST

Lok Sabha polls: ಗೆಲುವಿನ ಸರದಾರನಿಗೆ ಲೋಕಸಭೆ ಪ್ರವೇಶ ಸಾಧ್ಯವಾಗಲೇ ಇಲ್ಲ

ಚಿಕ್ಕಬಳ್ಳಾಪುರ: ಜಿಲ್ಲೆಯ ರೇಷ್ಮೆ ನಗರಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಬರೋಬ್ಬರಿ 6 ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವಿನ ಸರದಾರ ಎನಿಸಿಕೊಂಡಿದ್ದ ಕೈ  ಧುರೀಣರಾದ ವಿ.ಮುನಿಯಪ್ಪಗೆ ಲೋಕ ಸಭಾ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗದೇ ಅಲ್ಪ ಮತಗಳ ಅಂತರದಿಂದ ಸಂಸತ್ತು ಪ್ರವೇಶ ಕೈ ತಪ್ಪಿತು.

ಹೌದು, ಮೊದಲ ಬಾರಿಗೆ 1983ಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಯತ್ನದಲ್ಲಿಯೆ ವಿಧಾನಸಭೆ ಪ್ರವೇಶಿಸಿದ ಹೆಗ್ಗಳಿಕೆ ವಿ.ಮುನಿಯಪ್ಪ ಅವರದು, ನಂತರ ಶಿಡ್ಲಘಟ್ಟ ಕ್ಷೇತ್ರದಿಂದ ಸತತವಾಗಿ 1989, 1994 ರಲ್ಲಿ ಹಾಗೂ 1999 ರ ಚುನಾವಣೆಯಲ್ಲಿ ವಿ.ಮುನಿಯಪ್ಪ ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿದ್ದು ಅಲ್ಲದೇ 6 ಬಾರಿ ಕ್ಷೇತ್ರದಿಂದ ಶಾಸಕರಾಗಿದ್ದು ಈಗ ಇತಿಹಾಸ.

ಲೋಕಸಭೆಯಲ್ಲಿ ಸೋಲು: ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್‌ನಲ್ಲಿ ಅತ್ಯಂತ ಹಿರಿಯ ನಾಯಕರಾಗಿರುವ ವಿ.ಮುನಿಯಪ್ಪ 1985 ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪ್ರತಿ ಸ್ಪರ್ಧಿ ಜನತಾ ಪಕ್ಷದ ಎಸ್‌.ಮುನಿಶಾಮಪ್ಪ ವಿರುದ್ಧ ಸೋಲುತ್ತಾರೆ. ಚುನಾವಣೆಯಲ್ಲಿ ಆಗ ಮುನಿಶಾಮಪ್ಪ 44,199 ಮತ ಪಡೆದರೆ ವಿ.ಮುನಿಯಪ್ಪ ಕಾಂಗ್ರೆಸ್‌ನಿಂದ ಸ್ಪರ್ಧಿಸಿ 33,998 ಮತಗಳನ್ನು ಪಡೆದು ಮುನಿಶಾಮಪ್ಪ ವಿರುದ್ಧ  10,201 ಮತಗಳ ಅಂತರದಿಂದ ಸೋಲುತ್ತಾರೆ. ಆದರೆ 1996 ರಲ್ಲಿ ಲೋಕಸಭಾ ಚುನಾವಣೆ ಎದುರಾದಾಗ ಆಗ ಮೊದಲ ಬಾರಿಗೆ ಜನತಾ ದಳದಿಂದ ಚುನಾವಣೆಗೆ ನಿಲ್ಲುವ ಆರ್‌.ಎಲ್‌.ಜಾಲಪ್ಪ ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಾಲಪ್ಪ ಎದುರು ವಿ.ಮುನಿಯಪ್ಪ ಸೋಲು ಅನುಭವಿಸುತ್ತಾರೆ. ಜಾಲಪ್ಪ ಜನತಾ ದಳದಿಂದ ಸ್ಪರ್ಧಿಸಿ ಬರೋಬ್ಬರಿ 3,37,542 ಮತಗಳು ಪಡೆದರೆ ವಿ.ಮುನಿಯಪ್ಪಗೆ ಲೋಕಸಭೆಗೆ ಸಿಕ್ಕಿದ್ದು 3,20,728 ಮತಗಳು, 16,814 ಮತಗಳ ಅಂತರದಿಂದ ವಿ.ಮುನಿಯಪ್ಪ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತಾರೆ. ಹಿಂದಿನ ಚುನಾವಣೆಗಳ ಫ‌ಲಿತಾಂಶ ಅವಲೋಕಿಸಿದರೆ ಅತಿ ಕಡಿಮೆ ಮತಗಳ ಅಂತರ ದಿಂದ ವಿ.ಮುನಿಯಪ್ಪ ಲೋಕಸಭಾ ಚುನಾವಣೆಯ ಲ್ಲಿ ಸೋಲು ಕಾಣುತ್ತಾರೆ. ವಿ.ಮುನಿಯಪ್ಪ ಬಳಿಕ ಎಂ.ವೀರಪ್ಪ ಮೊಯಿಲಿ ವಿರುದ್ಧ 2019 ರಲ್ಲಿ ಬಿಜೆಪಿ ಯಿಂದ ಸ್ಪರ್ಧಿಸಿದ್ದ ಬಿ.ಎನ್‌.ಬಚ್ಚೇಗೌಡ ಕೇವಲ 9,520 ಮತಗಳ ಅಂತರದಿಂದ ಸೋಲುತ್ತಾರೆ.

ವಿ.ಮುನಿಯಪ್ಪ ರಾಜಕೀಯ ನಿವೃತ್ತಿ ಘೋಷಣೆ :

ಸದ್ಯ ವಿ.ಮುನಿಯಪ್ಪ 2023ರ ವಿಧಾನಸಭಾ ಚುನಾವಣೆಗೂ ಮೊದಲೇ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದರು. ಎಸ್‌.ಎಂ.ಕೃಷ್ಣ ಸರ್ಕಾರದಲ್ಲಿ ಅವಿಭಜಿತ ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ವಿ.ಮುನಿಯಪ್ಪ, ಮಹತ್ವದ ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿದ್ದರು. ಇದಕ್ಕೂ ಮೊದಲು ರೇಷ್ಮೆ ಹಾಗೂ ಇಂಧನ ಸಚಿವರಾಗಿಯು ಬಂಗಾರಪ್ಪ ಹಾಗೂ ವೀರಪ್ಪ ಮೊಯಿಲಿ ಸರ್ಕಾರದಲ್ಲಿ ಸಚಿವರಾಗಿದ್ದರು.

 -ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

ಅತ್ಯಾಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

1-asaas

Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

1-aaaa

Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

1-PE-a1

Pradeep Eshwar; ರಾಜಕಾರಣದಲ್ಲಿ ತುಂಬಾ ಜನರನ್ನ ಡ್ಯಾನ್ಸ್ ಮಾಡಿಸಿದ್ದೀನಿ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.