ಮಂಗಳೂರು: ಕಾಮಗಾರಿ ಆದರೂ ಉದ್ಘಾಟನೆಗೆ “ನೀತಿ ಸಂಹಿತೆ’ ಬಿಸಿ!


Team Udayavani, Apr 1, 2024, 3:29 PM IST

ಮಂಗಳೂರು: ಕಾಮಗಾರಿ ಆದರೂ ಉದ್ಘಾಟನೆಗೆ “ನೀತಿ ಸಂಹಿತೆ’ ಬಿಸಿ!

ಮಹಾನಗರ: ಕೆಲವೇ ವಾರದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ನಗರದೆಲ್ಲೆಡೆ ಚುನಾವಣೆ ನೀತಿ ಸಂಹಿತಿ ಜಾರಿಯಲ್ಲಿದೆ. ಇದೇ ಕಾರಣಕ್ಕೆ ನಗರದಲ್ಲಿ ಈಗಾಗಲೇ ಕೆಲವೊಂದು ಮಹತ್ವದ ಕಾಮಗಾರಿಗಳು ಪೂರ್ಣ ಗೊಂಡಿದ್ದರೂ ಉದ್ಘಾಟನೆಗೆ ನೀತಿ ಸಂಹಿತೆಯ ಬಿಸಿ ತಟ್ಟಿದೆ.

ಕಳೆದ ವಿಧಾನಸಭಾ ಚುನಾವಣೆ ವೇಳೆಗೆ ಕಾಮಗಾರಿ ಪೂರ್ಣಗೊಂಡಿದ್ದ ಕದ್ರಿ ಮಾರುಕಟ್ಟೆ ಸಂಕೀರ್ಣದ ಉದ್ಘಾಟನೆ ಇನ್ನೂ ನಡೆದಿಲ್ಲ. ಇಲ್ಲಿ 12.30 ಕೋ.ರೂ. ವೆಚ್ಚದಲ್ಲಿ ಸುಸಜ್ಜಿತ ನೂತನ ಮಾರುಕಟ್ಟೆ ಸಂಕೀರ್ಣವನ್ನು ನಿರ್ಮಿಸಲಾಗಿದೆ.

ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತೀಚೆಗೆ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಈಗಾಗಲೇ ಪಕ್ಕದಲ್ಲಿರುವ ತಾತ್ಕಾ
ಲಿಕ ಮಾರುಕಟ್ಟೆಯಲ್ಲಿ ವ್ಯಾಪಾರ ನಡೆಸುತ್ತಿರುವವರನ್ನು ನೂತನ ಮಾರುಕಟ್ಟೆಗೆ ಸ್ಥಳಾಂತರಿಸುವ ಕುರಿತು ಮಾತುಕತೆ ನಡೆಸ
ಲಾಗಿದೆ. ಸದ್ಯದಲ್ಲೇ ಉದ್ಘಾಟನೆಯ ಮಾತುಕತೆ ನಡೆಸಲಾಗಿತ್ತಾದರೂ ಇನ್ನೂ ಆರಂಭಗೊಂಡಿಲ್ಲ.

ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ನೀಡಲು ಲಾಲ್‌ಬಾಗ್‌ ಬಳಿ ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ
ಕ್ರೀಡಾ ವಸತಿ ನಿಲಯದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಎರಡು ಮಹಡಿಯ ಈ ವಸತಿ ನಿಲಯದಲ್ಲಿ 50 ಮಕ್ಕಳ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಕೆಲವು ತಿಂಗಳ ಹಿಂದೆ ದಿನಾಂಕ ನಿಗದಿಯಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ
ಅದು ಮೊಟಕುಗೊಂಡಿತ್ತು. ಆದರೆ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಇನ್ನೂ ಕೆಲವು ದಿನಗಳ ಕಾಲ ಉದ್ಘಾಟನೆ ಮಾಡುವಂತಿಲ್ಲ. ಅಲ್ಲೇ ಪಕ್ಕದಲ್ಲಿ ಅಭಿವೃದ್ಧಿಗೊಂಡ ಸ್ಕೇಟಿಂಗ್‌ ರಿಂಕ್‌ ಉದ್ಘಾಟನೆಯೂ ಬಾಕಿ ಉಳಿದಿದೆ.

ನಿರ್ವಹಣೆಯೂ ಇಲ್ಲ, ಉದ್ಘಾಟನೆಯೂ ಇಲ್ಲ
ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ “ಕ್ಲಾಕ್‌ಟವರ್‌’ ಪೂರ್ಣ ಗೊಂಡು ಕೆಲವು ವರ್ಷ ಕಳೆದಿವೆ. ಕ್ಲಾಕ್‌
ಟವರ್‌-ಎ.ಬಿ. ಶೆಟ್ಟಿ ವೃತ್ತ, ಹ್ಯಾಮಿಲ್ಟನ್‌ ವೃತ್ತ, ರಾವ್‌ ಆ್ಯಂಡ್‌ ರಾವ್‌ ವೃತ್ತ ರಸ್ತೆ ಮತ್ತು ಪುರಭವನ ಎದುರಿನ ಪಾರ್ಕ್‌ ಸುಂದ ರ ಗೊಳಿ ಸಿದ ಬಳಿಕ ಕ್ಲಾಕ್‌ಟವರ್‌ಗೂ ಉದ್ಘಾಟನೆ ಮಾಡಲು ಚಿಂತನೆ ನಡೆದಿತ್ತು. ಕೆಲವು ತಿಂಗಳ ಹಿಂದೆ ಪಾರ್ಕ್‌ ಉದ್ಘಾಟನೆಗೊಂಡರೂ ಕ್ಲಾಕ್‌ ಟವರ್‌ಗೆ ಇನ್ನೂ ಅಧಿಕೃತ ಉದ್ಘಾಟನ ಭಾಗ್ಯ ದೊರಕಿಲ್ಲ. ಪಾಲಿಕೆ-ಸ್ಮಾರ್ಟ್ ಸಿಟಿ ಸಮನ್ವಯದ ಕೊರತೆಯಿಂದ‌ ದುಬಾರಿ ಕ್ಲಾಕ್‌ಟವರ್‌ಗೆ ಸದ್ಯ ನಿರ್ವಹಣೆ ಇಲ್ಲದಂತಾಗಿದೆ.

ಹೊಸ ಕಾಮಗಾರಿಗೂ ಹಿನ್ನಡೆ
ನೀತಿ ಸಂಹಿತೆಯ ಕಾರಣ ನಗರದಲ್ಲಿ ಅತ್ಯಗತ್ಯದ ಕಾಮಗಾರಿ ಮಾಡಬಹುದೇ ವಿನಾ ಯಾವುದೇ ಹೊಸ ಕಾಮಗಾರಿ
ಆರಂಭಿಸುವಂತಿಲ್ಲ. ಇದರಿಂದಾಗಿ ಮಂಗಳೂರು ಸ್ಮಾರ್ಟ್‌ ಸಿಟಿಯ ಕೆಲವು ಕಾಮಗಾರಿಗೆ ಹಿನ್ನಡೆ ಉಂಟಾದಂತಾಗಿದೆ.
ನಿಗದಿಯಂತೆ 3 ತಿಂಗಳಲ್ಲಿ ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆ ಪೂರ್ಣಗೊಳ್ಳಲಿದೆ. ಆದರೆ ಕೆಲವೊಂದು ಯೋಜನೆಯ
ಟೆಂಡರ್‌ ಇನ್ನೂ ಬಾಕಿ ಉಳಿಸಿಕೊಂಡಿದೆ. ಪಂಪ್‌ವೆಲ್‌ನಲ್ಲಿ ನಿರ್ಮಾಣಕ್ಕೆ ಉದ್ದೇಶಿತ ಪಂಪ್‌ವೆಲ್‌ ಇಂಟಿಗ್ರೇಟೆಡ್‌ ಟರ್ಮಿನಲ್‌
ಮತ್ತು ವಾಣಿಜ್ಯ ಸಂಕೀರ್ಣಕ್ಕೆ ಪರಿಷ್ಕೃತ ದರದಲ್ಲಿ ಇನ್ನು ಟೆಂಡರ್‌ ಕರೆಯಬೇಕು. ಆದರೆ ಇದಕ್ಕೆ ಸದ್ಯ ತಡೆಯುಂಟಾಗಿದೆ.

*ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.