ಕೆರೆ, ಬಾವಿ, ಬೋರ್‌ವೆಲ್‌ಗ‌ಳಲ್ಲೂ ನೀರಿಲ್ಲ; ಬತ್ತಿದ ಕೃಷ್ಣೆ; ನೀರಿಗಾಗಿ ಹಾಹಾಕಾರ

ಕೃಷ್ಣಾ ನದಿ ನೀರು ಬತ್ತುತ್ತಿದ್ದಂತೆ ಲಕ್ಷಾಂತರ ಮೀನುಗಳು ಮೃತಪಟ್ಟಿವೆ

Team Udayavani, Apr 2, 2024, 6:07 PM IST

ಕೆರೆ, ಬಾವಿ, ಬೋರ್‌ವೆಲ್‌ಗ‌ಳಲ್ಲೂ ನೀರಿಲ್ಲ; ಬತ್ತಿದ ಕೃಷ್ಣೆ; ನೀರಿಗಾಗಿ ಹಾಹಾಕಾರ

ಉದಯವಾಣಿ ಸಮಾಚಾರ
ಅಡಹಳ್ಳಿ: ಮಳೆ ಕೊರತೆ ಹಾಗೂ ಬಿಸಿಲಿನ ಹೊಡೆತಕ್ಕೆ ಹಿಪ್ಪರಗಿ ಅಣೆಕಟ್ಟೆ ಕೆಳಭಾಗದ ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ ಸಂಪೂರ್ಣ ಬರಿದಾಗಿದ್ದು, ನೀರಿಲ್ಲದೇ ರಾಶಿ, ರಾಶಿ ಮೀನುಗಳ ಮಾರಣ ಹೋಮವಾಗಿದೆ.

ಅಥಣಿ ತಾಲೂಕಿನ ಕೃಷ್ಣಾ ನದಿ ತೀರದ ಸವದಿ, ಶಿರಹಟ್ಟಿ, ಬಳವಾಡ, ಝುಂಜರವಾಡ ಸೇರಿದಂತೆ ತಾಲೂಕಿನ ಪೂರ್ವ ಭಾಗದ ಹಲವಾರು ಗ್ರಾಮಗಳಲ್ಲಿ ನೀರಿನ ಹಾಹಾಕಾರ ಆರಂಭವಾಗಿದೆ. ಮಳೆಗಾಲ ಆರಂಭವಾಗಲು ಎರಡೂವರೆ ತಿಂಗಳು ಬಾಕಿ ಇದ್ದು, ಈಗಲೇ ನೀರಿನ ಸಮಸ್ಯೆ ಶುರುವಾಗಿದೆ. ಜನ-ಜಾನುವಾರುಗಳ ಗತಿ ಏನು ಎಂಬುದರ ಚಿಂತೆ ಹೆಚ್ಚಾಗಿದೆ.

ತಾಲೂಕಿನಲ್ಲಿರುವ ಜಲಮೂಲಗಳಾದ ಕೆರೆ, ಕೊಳವೆಬಾವಿ, ಬಾವಿ, ಬೋರ್‌ವೆಲ್‌ಗ‌ಳು ಕೂಡ ಬತ್ತಿವೆ. ಈಗ ಝುಂಜರವಾಡ, ಶಿರಹಟ್ಟಿ ಗ್ರಾಮದಲ್ಲಿರುವ ಕೃಷ್ಣಾ ನದಿ ನೀರು ಬತ್ತುತ್ತಿದ್ದಂತೆ ಲಕ್ಷಾಂತರ ಮೀನುಗಳು ಮೃತಪಟ್ಟಿವೆ.

ದುರ್ವಾಸನೆಯಿಂದ ಗ್ರಾಮಸ್ಥರಿಗೆ ಸಾಕಾಗಿ ಹೋಗಿದೆ. ಒಟ್ಟು 6 ಟಿಎಂಸಿ ಸಾಮರ್ಥ್ಯ ಹೊಂದಿರುವ ಹಿಪ್ಪರಗಿ ಜಲಾಶಯದಲ್ಲಿ ಸದ್ಯ 1ಟಿಎಂಸಿ ನೀರು ಮಾತ್ರ ಸಂಗ್ರಹವಿದ್ದು. ಅಧಿ ಕಾರಿಗಳ ಮಾಹಿತಿ ಪ್ರಕಾರ ಒಂದು ತಿಂಗಳು ಮಟ್ಟಿಗೆ ಸಾಕಾಗುತ್ತದೆ. ಅಥಣಿ ತಾಲೂಕಿನಲ್ಲಿ ಬರದ ಛಾಯೆ ಆವರಿಸಿದ್ದು. ತಾಲೂಕಾಡಳಿತ ಬರ ಎದುರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ತಾಲೂಕಾಡಳಿತ ಹೊಸ ಕೊಳವೆ ಬಾವಿ ಕೊರೆಯಿಸುವುದರ ಜತೆಗೆ ಇತರ ಸಂಪನ್ಮೂಲ ಬಳಸಿ ನೀರಿನ ವ್ಯವಸ್ಥೆ ಮಾಡಲಿದೆಯೇ ಎಂಬುದನ್ನು ಕಾದು ನೋಡಬೇಕು.

ಬರ ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಸಭೆ ನಡೆಸಿದ್ದು, ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆಯೋ ಅಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುವುದು. ಈಗಾಗಲೇ ನೀರಿನ ಸಮಸ್ಯೆ ಇರುವ ಗ್ರಾಮ, ತೋಟದ ವಸತಿಗಳಿಗೆ 13 ಗ್ರಾಪಂನಿಂದ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಇನ್ನು ಮತ್ಯಾವ ಕಡೆ ಸಮಸ್ಯೆ ಇದ್ದರೂ ಅದರ ಮಾಹಿತಿ ಪಡೆದು ಅಲ್ಲಿಯ ಜನ-ಜಾನುವಾರುಗಳಿಗೂ ಟ್ಯಾಂಕರ್‌ ಮೂಲಕ ನೀರು ಪೂರೈಸಿ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಲಾಗುವುದು.
ವಾಣಿ ಯು., ತಹಶೀಲ್ದಾರ್‌, ಅಥಣಿ.

ಕೃಷ್ಣಾ ನದಿ ನೀರು ಸಂಪೂರ್ಣ ಬತ್ತಿ ಹೋಗಿದ್ದರಿಂದ ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ಹೆಚ್ಚಾಗಿದೆ. ತಾಲೂಕಾಡಳಿತ, ಜನಪ್ರತಿನಿಧಿ ಗಳು ಮಹಾರಾಷ್ಟ್ರದ ಕೋಯ್ನಾ-ರಾಜಾಪೂರ ಜಲಾಶಯದಿಂದ ನೀರು ತರಿಸಿ ಅಥಣಿ ತಾಲೂಕಿನ ಜನ-ಜಾನುವಾರುಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು.
*ಹಣಮಂತ ಗೌಳಿ, ಸವದಿ ಗ್ರಾಮದ ನಿವಾಸಿ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.