Election Boycott; ಕಟ್ಟಿಂಗೇರಿ: ಮತದಾರರ ಚುನಾವಣೆ ಬಹಿಷ್ಕಾರ ಸಭೆ
Team Udayavani, Apr 2, 2024, 7:25 PM IST
ಶಿರ್ವ: ಬೆಳ್ಳೆ ಗ್ರಾ.ಪಂ. ವ್ಯಾಪ್ತಿಯ ಕಟ್ಟಿಂಗೇರಿ ಗ್ರಾಮದ ರಸ್ತೆ, ನೀರು ಸರಬರಾಜು, ದಾರಿದೀಪದ ಅವ್ಯವಸ್ಥೆ, ಸ್ಥಗಿತಗೊಂಡ ಬಸ್ ಸಂಚಾರ ಮತ್ತಿತರ ಹಲವಾರು ಸಮಸ್ಯೆಗಳಿದ್ದು,ಅಭಿವೃದ್ಧಿಯಲ್ಲಿ ಕಟ್ಟಿಂಗೇರಿ ಗ್ರಾಮವನ್ನು ಕಡೆಗಣಿಸಿದ್ದಕ್ಕಾಗಿ ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವ ಸಲುವಾಗಿ ಕಟ್ಟಿಂಗೇರಿ ವಾರ್ಡ್ 1 ರ ಮತಗಟ್ಟೆ 104ರ ಮತದಾರರ ಚುನಾವಣೆ ಬಹಿಷ್ಕಾರ ಸಭೆಯು ಎ. 2 ರಂದು ಸಂಜೆ ಕಟ್ಟಿಂಗೇರಿ ಅಕ್ಷರ ಕರಾವಳಿ ಅಂಗನವಾಡಿ ಬಳಿ ನಡೆಯಿತು.
ಕಟ್ಟಿಂಗೇರಿ ಗ್ರಾಮದ ಅಕ್ಷರ ಕರಾವಳಿ ರಸ್ತೆಯು ತೀರಾ ದುಸ್ಥಿತಿಯಲ್ಲಿದ್ದು ಸುಮಾರು 10 ವರ್ಷಗಳಿಂದ ಆಯ್ಕೆಯಾದ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಸ್ಪಂದನೆ ಸಿಗಲಿಲ್ಲ. 2 ಕಿ. ಮಿ. ಉದ್ದದ ಕಟ್ಟಿಂಗೇರಿ ಅಕ್ಷರ ಕರಾವಳಿ ರಸ್ತೆ ಹಾಗೂ ಅದರಲ್ಲಿರುವ 2 ಸೇತುವೆಗಳ ದುಸ್ಥಿತಿಯಿಂದ ಕಳೆದ 4 ವರ್ಷಗಳಿಂದ ಬಸ್ ಸಂಚಾರ ಸ್ಥಗಿತಗೊಂಡು ಜನರು ಪರದಾಡುತ್ತಿದ್ದಾರೆ. ಅಲ್ಲದೆ 1 ಕಿ.ಮೀ.ಉದ್ದದ ಕುಮೆರೊಟ್ಟು ರಸ್ತೆ ಹಾಗೂ ಮೂಲಭೂತ ಸೌಕರ್ಯಗಳಾದ ನೀರು,ದಾರಿದೀಪ ಮತ್ತಿತರ ಸಮಸ್ಯೆಗಳು ಮತದಾನ ಬಹಿಷ್ಕಾರಕ್ಕೆ ಕಾರಣವಾಗಿದೆ.ಈ ಬಗ್ಗೆ ಜಿಲ್ಲಾಡಳಿತ,ಜಿಲ್ಲಾ ಚುನಾವಣಾಧಿಕಾರಿ, ತಾಲೂಕು ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಬೆಳ್ಳೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ರಂಜಿನಿ ಹೆಗ್ಡೆ, ಬೆಳ್ಳೆ ಸಿಎ ಬ್ಯಾಂಕ್ನ ಅಧ್ಯಕ್ಷ ಬೆಳ್ಳೆ ಶಿವಾಜಿ ಎಸ್. ಸುವರ್ಣ, ಮಾಜಿ ತಾ.ಪಂ. ಅಧ್ಯಕ್ಷ ಕಟ್ಟಿಂಗೇರಿ ದೇವದಾಸ ಹೆಬ್ಟಾರ್ ಮತ್ತು ವಾರ್ಡ್ ನಿವಾಸಿ,ಪುಣೆಯ ಉದ್ಯಮಿ ಮಹೇಶ್ ಹೆಗ್ಡೆ ಕಟ್ಟಿಂಗೇರಿ ಗ್ರಾಮದ ಸಮಸ್ಯೆಗಳ ಬಗ್ಗೆ ಮಾತನಾಡಿದರು.
ಗ್ರಾಮದ ಸಮಸ್ಯೆಗಳು ಪರಿಹಾರವಾಗಿ ಬಸ್ ಸಂಚಾರ ಪ್ರಾರಂಭಗೊಳ್ಳದೆ ಕಟ್ಟಿಂಗೇರಿ ವಾರ್ಡ್ 1ರ ಗ್ರಾಮಸ್ಥರು ಮುಂದಿನ ಯಾವುದೇ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲ ಎಂದು ಒಂದು ಸಾಲಿನ ನಿರ್ಣಯವನ್ನು ಕೈಗೊಳ್ಳಲಾಯಿತು.
ಮಾಜಿ ತಾಪಂ. ಸದಸ್ಯೆ ಸುಜಾತಾ ಎಸ್. ಸುವರ್ಣ,ಗ್ರಾ.ಪಂ ಸದಸ್ಯ ಸದಾನಂದ ಸಫಳಿಗ, ವಾರ್ಡ್ನ ಸುಮಾರು 150 ಕ್ಕೂ ಹೆಚ್ಚು ಮತದಾರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.