Rakshak bullet:ಮೊದಲ ಚಿತ್ರದಲ್ಲೇ ಮಚ್ಚು ಹಿಡಿಯಲಿರುವ ರಕ್ಷಕ್‌ ಬುಲೆಟ್:‌ಪೋಸ್ಟರ್‌ ರಿಲೀಸ್


Team Udayavani, Apr 3, 2024, 10:38 AM IST

7

ಬೆಂಗಳೂರು:  ಸ್ಯಾಂಡಲ್‌ವುಡ್‌ನಲ್ಲಿ ತನ್ನ ಹಾಸ್ಯದಿಂದಲೇ ಅಪಾರ ಮಂದಿಯ ಮನೆ – ಮನ ಗೆದ್ದ ಬುಲೆಟ್‌ ಪ್ರಕಾಶ್‌ ಅವರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಅವರ ಕಾಮಿಡಿ ಟೈಮಿಂಗ್‌  ಚಂದನವನದಲ್ಲಿ ಅವರನ್ನು ಉತ್ತುಂಗಕ್ಕೇರಿಸಿತ್ತು.

ಇದೀಗ ಬುಲೆಟ್‌ ಪ್ರಕಾಶ್‌ ಅವರ ಮಗ ರಕ್ಷಕ್‌ ಇದೇ ಮೊದಲ ಬಾರಿಗೆ ಸಿನಿಮಾವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರ ಮೊದಲ ಚಿತ್ರ ಶೀಘ್ರದಲ್ಲೇ ಆರಂಭಗೊಳ್ಳಲಿದೆ.

ರಕ್ಷಕ್‌ ಅವರ ಪರಿಚಯ ಕನ್ನಡಿಗರಿಗೆ ಮಾಡಿಕೊಡಬೇಕಿಲ್ಲ. ಯಾಕೆಂದರೆ ಸೋಶಿಯಲ್‌ ಮೀಡಿಯಾದಲ್ಲಿ ತಮ್ಮದೇ ಆದ ಫಾಲೋವರ್ಸ್‌ ಗಳನ್ನು ಸೃಷ್ಟಿಸಿರುವ ಅವರು, ದೊಡ್ಡ ದೊಡ್ಡ ಡೈಲಾಗ್ಸ್‌ ಗಳನ್ನು ಹೇಳಿ ತಮಗೆ ತಾವೇ ಹೈಪ್‌ ಕೊಟ್ಟು ಸಾಗಿ ಬಂದಿದ್ದಾರೆ.

ಹತ್ತು‌ ಮಾಸ್ ಡೈಲಾಗ್  ಬಿಟ್ರೆ ಕರ್ನಾಟಕನೇ ನಂದು.. ಹೀಗೆ ಅನೇಕ ಡೈಲಾಗ್ಸ್‌ ಗಳನ್ನು ಹೇಳಿ ಹೈಪ್‌ ಸೃಷ್ಟಿಸಿಕೊಂಡ ರಕ್ಷಕ್‌ ಸಾಮಾಜಿಕ ಜಾಲತಾಣದಲ್ಲಿ ಹತ್ತಾರು ಬಾರಿ ಟ್ರೋಲ್‌ ಗಳಿಗೆ ಆಹಾರವಾಗಿದ್ದಾರೆ.  ಟ್ರೋಲ್‌ ಗಳಿಂದ ಸುದ್ದಿಯಾದ ಅವರಿಗೆ ಅದೇ ಟ್ರೋಲ್‌ ಗಳಿಂದ ಬಿಗ್‌ ಬಾಸ್‌ ಸೀಸನ್‌ 10 ಗೆ ಹೋಗುವ ಅವಕಾಶ ಒದಗಿಬಂತು. ಬಿಗ್‌ ಬಾಸ್‌ ನಲ್ಲೂ ತನ್ನ ವರ್ತನೆಯಿಂದ ಸದ್ದು ಮಾಡಿದ ರಕ್ಷಕ್‌ ಅಲ್ಲಿಂದ ಹೊರಬಂದ ಬಳಿಕವೂ ಬಿಗ್‌ ಬಾಸ್‌ ಬಗ್ಗೆಯೇ ಸಂದರ್ಶನದಲ್ಲಿ ಕೆಲವೊಂದು ಮಾತುಗಳನ್ನಾಡಿ ಟೀಕೆ ಹಾಗೂ ಟ್ರೋಲ್‌ ಗೆ ಒಳಗಾಗಿದ್ದರು.

ಎಷ್ಟೇ ಟ್ರೋಲ್‌ ಮಾಡಿದರೂ, ತಾನು ಇರೋದೆ ಹೀಗೆ ಎನ್ನುವ ರಕ್ಷಕ್‌ ಬುಲೆಟ್‌ ಇದೀಗ ಚೊಚ್ಚಲ ಬಾರಿಗೆ ಸಿನಿರಂಗಕ್ಕೆ ಕಾಲಿಡಲಿದ್ದಾರೆ. ಆ ಮೂಲಕ ತಂದೆಯ ಹಾದಿಯಲ್ಲಿ ಹೆಜ್ಜೆ ಇಡಲಿದ್ದಾರೆ.

ಯಾವ ಸಿನಿಮಾ ಇದು?:  ಬುಲೆಟ್‌ ಪ್ರಕಾಶ್‌ ಅವರ ಹುಟ್ಟುಹಬ್ಬದಂದು(ಏ.2 ರಂದು) ರಕ್ಷಕ್‌ ತಮ್ಮ ಮೊದಲ ಸಿನಿಮಾದ ಪೋಸ್ಟರ್‌ ನ್ನು ರಿಲೀಸ್‌ ಮಾಡಿದ್ದಾರೆ.

“ಎಲ್ಲಾ ‌ನನ್ನ‌ ಆತ್ಮೀಯರೆ , ಇಂದು‌ ನನ್ನ ಪೂಜ್ಯ ತಂದೆ ದಿವಂಗತ “ಬುಲೆಟ್ ಪ್ರಕಾಶ್” ರವರ 47ನೇ ಜನ್ಮದಿನ. ಇಂದಿನ ವಿಶೇಷವೇನೆಂದರೆ, ನಾನು ನಾಯಕ ನಟನಾಗಿ ನಟಿಸುತ್ತಿರುವ, ನನ್ನ ಚೊಚ್ಚಲ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುತ್ತಿರುವುದು ನಿಜಕ್ಕೂ ನನಗೆ ಸಂತಸ ತಂದಿದೆ. ನನ್ನ ತಂದೆಯ ಆಶೀರ್ವಾದದೊಂದಿಗೆ ನಿಮ್ಮೆಲ್ಲರ ಆಶೀರ್ವಾದ ಕೂಡ ಸದಾ ನನ್ನ ಮೇಲಿರಲಿ ಎಂದು ಬಯಸುತ್ತೇನೆ. ನನಗೂ ಹಾಗೂ ನನ್ನ ಇಡೀ ಚಿತ್ರ ತಂಡಕ್ಕೂ ಹರಸಿ ಹಾರೈಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ” ಎಂದು ರಕ್ಷಕ್‌ ಬರೆದುಕೊಂಡಿದ್ದಾರೆ.

ಮಚ್ಚು ಅಡ್ಡವಿಟ್ಟು ʼಆರ್‌ ಬಿ 01ʼ ಎಂದು ಬರೆಯಲಾಗಿದೆ. ಟೈಟಲ್‌ – ಟೀಸರ್‌ ಶೀಘ್ರದಲ್ಲೇ ರಿಲೀಸ್‌ ಆಗಲಿದೆ. ಪೋಸ್ಟರ್‌ ಕೆಳಗೆ ”ಮಚ್ಚಾ ಏರಿಯಾನಲ್ಲಿ ಕಣ್ಮುಂದೆ ಬೇಜಾನ್ ಗಾಡಿಗಳು ಸೌಂಡ್ ಮಾಡ್ತಾವೆ. ಆದರೆ ಸೌಂಡ್ ಕೇಳ್ತಿದ್ದಂಗೆ ಇದೇ ಗಾಡಿ ಅಂತ ಹೇಳೋದು ಒಂದನ್ನೇ”. ”ಬುಲೆಟ್”, ”ಇನ್ಮುಂದೆ ನಂದೆ ರೌಂಡು.. ನಂದೆ ಸೌಂಡು..” ಎನ್ನುವ ಸಾಲುಗಳನ್ನು ಬರೆಯಲಾಗಿದೆ.

ಈ ಸಿನಿಮಾವನ್ನು ಕ್ರಿಶ್‌ ಎನ್ನುವವರು ನಿರ್ದೇಶನ ಮಾಡಲಿದ್ದಾರೆ.  ಶ್ರೀಹರಿ  ಅವರ ಸಂಗೀತ ನಿರ್ದೇಶನ ಇರಲಿದೆ. ಶಿವು ಅವರ ನೃತ್ಯ ನಿರ್ದೇಶನ , ಮಹೇಶ್ ಗಂಗಾವತಿ ಸಾಹಸ ನಿರ್ದೇಶನ ಚಿತ್ರಕ್ಕಿರಲಿದೆ. ‘ಶ್ರೀಧರ ಕಶ್ಯಪ್’ ಕ್ಯಾಮರಾದಲ್ಲಿ ಸಿನಿಮಾ ಸೆರೆಯಾಗಲಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.