ಮೌಲ್ಯಾಂಕನ ಮೌಲ್ಯಮಾಪಕರಿಗಿಲ್ಲ ಸೌಕರ್ಯ!


Team Udayavani, Apr 3, 2024, 6:11 PM IST

ಮೌಲ್ಯಾಂಕನ ಮೌಲ್ಯಮಾಪಕರಿಗಿಲ್ಲ ಸೌಕರ್ಯ!

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಈ ಬಾರಿ ತೀವ್ರ ಚರ್ಚೆ ಹಾಗೂ ಗೊಂದಲಗಳ ಗೂಡಾಗಿ ವಿದ್ಯಾರ್ಥಿ ಪೋಷಕರನ್ನು ತೀವ್ರ ಕಂಗಾಲಾ ಗಿಸಿದ್ದ ಮೌಲ್ಯಾಂಕನ ಪರೀಕ್ಷೆ ಇದೀಗ ಮತ್ತೂಂದು ವಿವಾದಕ್ಕೆ ಕಾರಣವಾಗಿದೆ.

ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನದಲ್ಲಿ ತೊಡಗಿರುವ ಶಿಕ್ಷಕರಿಗೆ ಕನಿಷ್ಠ ಸೌಕರ್ಯ ಕೊಡದೇ ಶಿಕ್ಷಣ ಇಲಾಖೆ ಕೈ ಚೆಲ್ಲಿದ್ದು, ಕೆಲ ಮೌಲ್ಯಮಾಪನ ಕೇಂದ್ರಗಳಲ್ಲಿ ಶಿಕ್ಷ ಕರು ಪ್ರತಿಭಟನೆ ನಡೆಸಿರುವುದು ಮೌಲ್ಯಮಾಪನ ಅವ್ಯವಸ್ಥೆಗೆ ಕಾರಣವಾಗಿದೆ.

ಪದವಿಯಿಂದ ಹಿಡಿದು ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುವ ಮೌಲ್ಯಮಾಪಕರಿಗೆ ಭರಪೂರ ಭತ್ಯೆ ನೀಡುವ ಇಲಾಖೆಗಳು, ಈ ಬಾರಿ 5, 8 ಹಾಗೂ 9ನೇ ತರಗತಿಗಳಿಗೆ ನಡೆಸುತ್ತಿರುವ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪಕನಿಗೆ ಟಿಎ, ಡಿಎ, ದಿನದ ಭತ್ಯೆ ಬಿಡಿ ಕನಿಷ್ಠ ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪಕರಿಗೆ ಕನಿಷ್ಠ ಕುಡಿಯುವ ನೀರು ಸೇರಿದಂತೆ ಯಾವ ಸೌಲಭ್ಯ ಗಳು ಇಲ್ಲದೇ ಇರುವುದು ಮೌಲ್ಯ ಮಾಪಕರ ಆಕ್ರೋಶಕ್ಕೆ ಕಾರಣವಾಗಿದೆ.

ಕುಡಿಯುವ ನೀರು ವ್ಯವಸ್ಥೆ ಮಾಡಿಲ್ಲ: ಈ ಬಾರಿ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದರೂ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಕೋರ್ಟ್‌ ಮೇಟ್ಟಿಲೇರಿದ ಪರಿಣಾಮ ಹಲವಾರು ಬಾರಿ ಪರೀಕ್ಷೆಗಳನ್ನು ಮುಂದೂಡಬೇಕಾಯಿತು. ಆದರೆ ಅಂತೂ ಇಂತೂ ಪರೀಕ್ಷೆ ಸುಗಮವಾಗಿ ನಡೆದು ವಿದ್ಯಾರ್ಥಿ ಪೋಷಕರು ನೆಮ್ಮೆದಿಯ ನಿಟ್ಟುಸಿರು ಬಿಟ್ಟರೂ ಮೌಲ್ಯ ಮಾಪನ ಕಾರ್ಯದಲ್ಲಿ ಭಾಗಿಯಾಗಿರುವ ಶಿಕ್ಷಕರನ್ನು ಇಲಾಖೆ ಕಡೆಗಣಿಸಿರುವುದು ಇದೀಗ ಮೌಲ್ಯಮಾಪಕರ ಆಕ್ರೋಶಕ್ಕೆ ಕಾರಣವಾಗಿದೆ. ಮೌಲ್ಯಮಾಪನ ವಹಿಸಿರು ಕೇಂದ್ರಗಳು ಮೌಲ್ಯಮಾಪಕರಿಗೆ ಕುಡಿಯುವ ನೀರು ವ್ಯವಸ್ಥೆ ಮಾಡಿಲ್ಲ. ಹೋಗಿ ಬರುವ ಶಿಕ್ಷಕರಿಗೆ ಇಲಾಖೆಯಿಂದ ಯಾವುದೇ ಪ್ರಯಾಣ ಭತ್ಯೆ ಕೊಡುತ್ತಿಲ್ಲ. ಮಧ್ಯಾಹ್ನದ ಹೊತ್ತು ಊಟಕ್ಕೂ ಪರದಾಡಬೇಕಿದೆ. ಇಲಾಖೆ ಮೌಲ್ಯಾ ಮಾಪಕರಿಗೆ ಕನಿಷ್ಠ ಭತ್ಯೆ ಕೊಡಬೇಕಿತ್ತು ಎಂಬ ಮಾತು ಕೇಳಿ ಬರುತ್ತಿದೆ. ಪದವಿ, ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪಕರಿಗೆ ಸಾವಿರಾರು ದಿನದ ಭತ್ಯೆಯನ್ನು ಕೊಡುತ್ತಿರುವ ಶಿಕ್ಷಣ ಇಲಾಖೆ, 5, 8 ಹಾಗೂ 9 ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯ ಮಾಪಕರನ್ನು ಕಡೆಗಣಿಸಿರುವುದು ಸಾಕಷ್ಟು ಚರ್ಚೆಗೆ ಹಾಗೂ ಟೀಕೆಗೆ ಗುರಿಯಾಗಿದೆ.

ಪರೀಕ್ಷೆ ಕೆಲಸದ ಜೊತೆಗೆ ಮೌಲ್ಯಾಂಕನ ಹೊರೆ!

5, 8 ಮತ್ತು 9 ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯಲ್ಲಿ ಶಿಕ್ಷಕರು ಕಳೆದ 3-4 ದಿನಗಳ ಕಾಲ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿದ್ದು, ಇದರ ನಡುವೆ ಶಿಕ್ಷಕರು ಅಲ್ಲಿನ ಮೂಲ ಸೌಕರ್ಯಗಳ ಬಗ್ಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮೌಲ್ಯಮಾಪನ ಕೇಂದ್ರದಲ್ಲಿ ಹಲವು ಕುಂದುಕೊರತೆಗಳು ಕಂಡುಬಂದಿದ್ದು, ಪ್ರೌಢ ಶಾಲೆಗಳಿಂದ ಹಲವು ಶಿಕ್ಷಕರು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿ, ನಂತರ ಮೌಲ್ಯಮಾಪನ ಮಾಡುವ ಹೊರೆ ಜಾಸ್ತಿಯಾಗಿದೆ. ಅಲ್ಲಿನ ನೋಡೆಲ್‌ ಅಧಿಕಾರಿಗಳು ಶಿಕ್ಷಣ ಇಲಾಖೆಯ ಬಂದಿರುವ ಅನುದಾನವನ್ನು ಬಳಸದೆ, ಶಿಕ್ಷಕರನ್ನು ಸುಡು ಬಿಸಿಲಿನಲ್ಲಿ ನೀರಿನ ವ್ಯವಸ್ಥೆ ಇಲ್ಲದೇ ಪರಿದಾಡುವ ಪರಿಸ್ಥಿತಿ ಇದೆ ಎಂದು ಅಲ್ಲಿನ ಮೌಲ್ಯಮಾಪಕರೊಬ್ಬರು ತಮ್ಮ ಸಮಸ್ಯೆಗಳನ್ನು ಪತ್ರಿಕೆಯೊಂದಿಗೆ ಹಂಚಿ ಕೊಂಡರು. ಇನ್ನೂ ಮೌಲ್ಯಮಾಪನಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳು ತ್ತಿರು ವುದು ಕಂಡು ಬಂದಿರುವುದು ಚರ್ಚೆಗೆ ಗ್ರಾಸವಾಗಿದೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

ಅತ್ಯಾಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

1-asaas

Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

1-aaaa

Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

1-PE-a1

Pradeep Eshwar; ರಾಜಕಾರಣದಲ್ಲಿ ತುಂಬಾ ಜನರನ್ನ ಡ್ಯಾನ್ಸ್ ಮಾಡಿಸಿದ್ದೀನಿ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.