Blast at Chemical Factory: ಕಂಪನಿಯ ನಿರ್ದೇಶಕ ಸೇರಿ 5ಮಂದಿ ಮೃತ್ಯು, ಹಲವರ ಸ್ಥಿತಿ ಗಂಭೀರ
Team Udayavani, Apr 3, 2024, 8:01 PM IST
ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್ ಸ್ಫೋಟಗೊಂಡು ಕಂಪೆನಿಯ ನಿರ್ದೇಶಕ ಸೇರಿದಂತೆ ಐವರು ಮೃತಪಟ್ಟಿದ್ದು ಹಲವಾರು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ಘಟನೆಯಲ್ಲಿ ಫ್ಯಾಕ್ಟರಿ ಒಳಗೆ ಇನ್ನೂ ಎಂಟರಿಂದ 10 ಮಂದಿ ಸಿಲುಕಿದ್ದಾರೆ ಎನ್ನಲಾಗಿದ್ದು ಅರವನ್ನು ರಕ್ಷಿಸುವ ಕೆಲಸ ರಕ್ಷಣಾ ತಂಡ ನಡೆಸುತ್ತಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಫೋಟದ ವೇಳೆ ಕಟ್ಟಡದಲ್ಲಿ ಸುಮಾರು 50 ಮಂದಿ ಇದ್ದರು ಎಂದು ಸ್ಥಳೀಯ ವರದಿಗಳು ತಿಳಿಸಿವೆ.
ಅವಘಡದಲ್ಲಿ ಮೃತಪಟ್ಟವರನ್ನು ಕಂಪನಿಯ ನಿರ್ದೇಶಕ ರವಿ ಶರ್ಮಾ, ಪ್ರೊಡಕ್ಷನ್ ಇನ್ಚಾರ್ಜ್ಗಳಾದ ಸುಬ್ರಹ್ಮಣ್ಯಂ, ದಯಾನಂದ್ ಮತ್ತು ನಿರ್ವಹಣಾ ಉಸ್ತುವಾರಿ ಸುರೇಶ್ ಪಾಲ್ ಎಂದು ಗುರುತಿಸಲಾಗಿದೆ.
ಪೊಲೀಸರು, ಅಗ್ನಿಶಾಮಕ ಸಿಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಗಾಯಾಳುಗಳನ್ನು ಸಂಗಾರೆಡ್ಡಿಯಲ್ಲಿರುವ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಪೋಟದ ತೀವ್ರತೆಗೆ ಮೃತ ದೇಹಗಳು ಕೆಲ ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದೆ ಎನ್ನಲಾಗಿದ್ದು, ರಿಯಾಕ್ಟರ್ ಸ್ಫೋಟದಿಂದಾಗಿ ಮೂರು ಕಟ್ಟಡಗಳು ಕುಸಿದಿವೆ ಅಲ್ಲದೆ ಕಾರ್ಖಾನೆಯಲ್ಲಿದ್ದ ಮತ್ತೊಂದು ರಿಯಾಕ್ಟರ್ಗೂ ಬೆಂಕಿ ವ್ಯಾಪಿಸಿದೆ. ಇದರೊಂದಿಗೆ ಮತ್ತೊಂದು ರಿಯಾಕ್ಟರ್ ಸ್ಫೋಟಗೊಳ್ಳುವ ಸಾಧ್ಯತೆ ಇದ್ದು, ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಪೊಲೀಸರು ಕಾರ್ಖಾನೆಯ ಸುತ್ತಮುತ್ತಲಿನ ಜನರನ್ನು ಸ್ಥಳಾಂತರಿಸುತ್ತಿದ್ದಾರೆ.
ಇದನ್ನೂ ಓದಿ: Vijayapura: ಜಮೀನಿನಲ್ಲಿ ಆಡಲು ಹೋಗಿ ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಮಗು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
Karnataka Govt.,; ಡ್ರಗ್ ಪೆಡ್ಲರ್ಗಳಿಗೆ ಇನ್ನು ಆಜೀವ ಜೈಲು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.