ನರೇಗಾ ಯೋಜನೆಯಲ್ಲಿ ಕೊರಟಗೆರೆಗೆ ಕೊನೆ ಸ್ಥಾನ… ಪಿಡಿಓಗೆ ಎಚ್ಚರಿಕೆ ನೀಡಿದ ಜಿ.ಪಂ ಸಿಇಓ


Team Udayavani, Apr 3, 2024, 8:27 PM IST

ನರೇಗಾ ಯೋಜನೆಯಲ್ಲಿ ಕೊರಟಗೆರೆಗೆ ಕೊನೆ ಸ್ಥಾನ… ಪಿಡಿಓಗೆ ಎಚ್ಚರಿಕೆ ನೀಡಿದ ಜಿ.ಪಂ ಸಿಇಓ
ಕೊರಟಗೆರೆ: ನರೇಗಾ ಯೋಜನೆ ಅನುಷ್ಠಾನ ತರುವಲ್ಲಿ ತುಮಕೂರು ಜಿಲ್ಲೆಯಲ್ಲಿಯೇ ಕೊರಟಗೆರೆ ಕ್ಷೇತ್ರವು ಕೊನೆಯ ಸ್ಥಾನದಲ್ಲಿದೆ. ನರೇಗಾ ಯೋಜನೆಯ ಬಗ್ಗೆ ನಿರ್ಲಕ್ಷ ವಹಿಸುವ ಪಿಡಿಓ ಮತ್ತು ಇಂಜಿನಿಯರ್‌ಗಳನ್ನು ಮುಲಾಜಿಲ್ಲದೇ ಅಮಾನತು ಮಾಡ್ತೇನೆ ಎಂದು ತುಮಕೂರು ಜಿಪಂ ಸಿಇಓ ಪ್ರಭು.ಜಿ ಖಡಕ್ ಎಚ್ಚರಿಕೆ ನೀಡಿದರು.
ಕೊರಟಗೆರೆ ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ 24 ಗ್ರಾಪಂಗಳ ಪಿಡಿಓ ಮತ್ತು ನರೇಗಾ ಇಂಜಿನಿಯರ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
207 ಸರಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳ ಆಟದ ಮೈದಾನ, ಕೌಪೌಂಡು, ಶೌಚಾಲಯ ಮತ್ತು ಚರಂಡಿ ನಿರ್ಮಾಣದ ಅನುಷ್ಠಾನಕ್ಕೆ ಗ್ರಾಪಂ ಪಿಡಿಓ, ಅಧ್ಯಕ್ಷರು ಮತ್ತು ಇಂಜಿನಿಯರ್ ನಿರ್ಲಕ್ಷ ಮಾಡಿರೋದು ಕಂಡುಬಂದಿದೆ. ಗ್ರಾಮೀಣ ಭಾಗದ ಗುಳೆ ಹೋಗುವುದನ್ನ ತಪ್ಪಿಸೋದೇ ನರೇಗಾ ಯೋಜನೆಯ ಮುಖ್ಯ ಉದ್ದೇಶ ಆಗಿದೆ. ಗ್ರಾಮೀಣ ಜನರಿಗೆ ತಪ್ಪದೇ ನರೇಗಾ ಯೋಜನೆಯಡಿ ಕೆಲಸ ನೀಡಬೇಕಿದೆ ಎಂದು ಆದೇಶ ಮಾಡಿದರು.
ತುಮಕೂರು ಜಿಲ್ಲೆಯ 10 ಕ್ಷೇತ್ರದಲ್ಲಿ ಸುಮಾರು 40 ಸಾವಿರ ಮತ್ತು ಕೊರಟಗೆರೆ ಕ್ಷೇತ್ರಕ್ಕೆ 2500 ಸೈಟ್ ನೀಡಲು ರೂಪುರೇಷು ಸಿದ್ದವಾಗಿದೆ. ಕೊರಟಗೆರೆ ಕ್ಷೇತ್ರಕ್ಕೆ ಹೆಚ್ಚುವರಿ 4 ರಿಂದ 5 ಸಾವಿರ ಸೈಟ್ ನೀಡಲು ಭೂಮಿ ಗುರುತಿಸಲು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮಸಭೆಯಲ್ಲಿ ಜಿಲ್ಲಾಮಟ್ಟದ ವಿಶೇಷ ಅಧಿಕಾರಿಗಳ ತಂಡ ಸೈಟ್ ಇಲ್ಲದವರಿಗೆ ನಿವೇಶನ ನೀಡಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಗ್ರಾಪಂ ಪಿಡಿಓಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿಯೇ ಇದ್ದು ಹಾಜರಾತಿ ಇರಲೇಬೇಕು. ನರೇಗಾ ಯೋಜನೆ ಅಥವಾ ಸರಕಾರದ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷದ ಜೊತೆ ವಿಳಂಬ ಮಾಡುವ ಪಿಡಿಓಗಳ ವಿರುದ್ದ ಸರಕಾರಕ್ಕೆ ವರಧಿ ಕಳುಹಿಸುತ್ತೇನೆ. ಈಗಾಗಲೇ ತುಮಕೂರು ಜಿಲ್ಲೆಯಲ್ಲಿ 16 ಜನ ಪಿಡಿಓಗಳ ಅಮಾನತು ಆಗಿದೆ. ಇದು ಇನ್ನಷ್ಟು ಹೆಚ್ಚು ಆಗಬಹುದು ಇದಕ್ಕೆ ಅವಕಾಶ ಮಾಡಿಕೊಡದೇ ಚುನಾವಣೆ ಇರ್ಲಿ ಇಲ್ಲದೇ ಇರಲಿ ಜನರ ಬಳಿನಿಂತು ಕೆಲಸ ಮಾಡಿ ತೋರಿಸಿ ಎಂದು ಹೇಳಿದರು.
ಸಭೆಯಲ್ಲಿ ಮಧುಗಿರಿ ಗ್ರಾಮೀಣ ಮತ್ತು ಕುಡಿಯುವ ನೀರು ಇಇ ರವೀಶ್, ಕೊರಟಗೆರೆ ಎಇಇ ಕೀರ್ತಿನಾಯಕ್, ತಹಶೀಲ್ದಾರ್ ಮಂಜುನಾಥ.ಕೆ, ತಾಪಂ ಇಓ ಅಪೂರ್ವ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಶಿಲ್ಪಾ, ನರೇಗಾ ಎಡಿಎ ಗುರುಮೂರ್ತಿ, ತಾಪಂ ಯೋಜನಾಧಿಕಾರಿ ಮಧುಸೂಧನ್, 24 ಗ್ರಾಪಂಗಳ ಪಿಡಿಓ ಮತ್ತು ನರೇಗಾ ಇಂಜಿನಿಯರ್‌ಗಳು ಉಪಸ್ತಿತರಿದ್ದರು.
ಕಡ್ಲೇಪುರಿ ತಿನ್ನೋಕೆ ಹೋಗಿ ನೀವು..
ನರೇಗಾ ಯೋಜನೆ ಅನುಷ್ಠಾನ ಮಾಡುವಲ್ಲಿ ಕೊರಟಗೆರೆ ಕ್ಷೇತ್ರದ ೨೪ಗ್ರಾಪಂಗಳ ಪೈಕಿ ಕ್ಯಾಮೇನಹಳ್ಳಿ ಗ್ರಾಪಂ ಕೊನೆಯ ಸ್ಥಾನದಲ್ಲಿದೆ. ಗ್ರಾಪಂ ಕಚೇರಿಯಲ್ಲಿ ಕುಳಿತು ಏನು ಕತ್ತೇ ಕಾಯ್ತಿರಾ ಜ್ಞಾನ ಇಲ್ವಾ ನಿಮಗೇ. ನರೇಗಾ ಕಾಮಗಾರಿ ನಿರ್ಲಕ್ಷ ಮಾಡಿದ್ದ ಕ್ಯಾಮೇನಹಳ್ಳಿ ಪಿಡಿಓ ಕಳೆದ ೪ತಿಂಗಳ ಹಿಂದೆ ಅಮಾನತು ಆಗಿರೋದು ನಿಮಗೇ ಗೋತ್ತಿಲ್ಲವೇ. ಈಗ ನಿಮಗೂ ಇದೇ ಆಗಬೇಕಾ ಎಂದು ಕ್ಯಾಮೇನಹಳ್ಳಿ ಮತ್ತು ಅಕ್ಕಿರಾಂಪುರ ಪಿಡಿಓಗೆ ಜಿಪಂ ಸಿಇಓ ಪ್ರಭು.ಜಿ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆಯಿತು.
ತಾಪಂ ವಿಶೇಷಸಭೆಯ ಮುಖ್ಯಾಂಶಗಳು..
– ನರೇಗಾ ಯೋಜನೆ ಅನುಷ್ಠಾನದಲ್ಲಿ ಕೊನೆಯಾದ ಕೊರಟಗೆರೆ
– ಸರಕಾರಿ ಶಾಲೆ ಮತ್ತು ಅಂಗನವಾಡಿ ಕಾಮಗಾರಿಗಳ ನಿರ್ಲಕ್ಷ
– 24 ಗ್ರಾಪಂಯ ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಜಿಪಂ ಸಿಇಓ
– ಹಳ್ಳಿ ಜನತೆ ಗುಳೆ ಹೋಗದಂತೆ ತಡೆಯಲು ನರೇಗಾ ಸಹಕಾರಿ
– ತುಮಕೂರು ಜಿಲ್ಲೆಯಲ್ಲಿ ಕೊರಟಗೆರೆ ಕ್ಷೇತ್ರಕ್ಕೆ ಕೊನೆಯ ಸ್ಥಾನ
– 24 ಗ್ರಾಪಂಗಳಿಗೆ ತಲಾ 1 ಸಾವಿರದಂತೆ 24 ಸಾವಿರ ಸಸಿಗಳು ಸಿದ್ದ
– ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಮುನ್ನೇಚ್ಚರಿಕೆ ಕ್ರಮ ಅಗತ್ಯ
– 24 ಗಂಟೆಯೊಳಗೆ ನೀರಿಗೆ ಪರಿಹಾರ ನೀಡುವಂತೆ ಪಿಡಿಓಗಳಿಗೆ ಸೂಚನೆ
– ನಿವೇಶನ ರಹಿತರಿಗೆ 2500 ಸೈಟ್‌ಗಳು ನೀಡಲು ರೂಪುರೇಷು ಸಿದ್ದತೆ
– ಅಲೆಮಾರಿ ಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಇಓಗೆ ಆದೇಶ
ಕುಡಿಯುವ ನೀರು ಸಮಸ್ಯೆ ಆದರೇ ೨೪ಗಂಟೆಯೊಳಗೆ ಗ್ರಾಪಂ ಅಧಿಕಾರಿವರ್ಗ ಸರಿಪಡಿಸಬೇಕಿದೆ. ಗ್ರಾಪಂಗೊಂದು ಉದ್ಯಾನವನ ನಿರ್ಮಾಣಕ್ಕಾಗಿ 24 ಸಾವಿರ ಸಸಿಗಳು ಸಾಮಾಜಿಕ ವಲಯ ಅರಣ್ಯದ ಬಳಿ ಸಿದ್ದವಾಗಿವೆ. ಸರಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಕಡ್ಡಾಯವಾಗಿ ಸಸಿಗಳನ್ನು ಬೆಳೆಸಬೇಕಿದೆ. ಗ್ರಾಮೀಣ ಜನತೆ ಗುಳೆ ಹೋಗದಂತೆ ಮುನ್ನಚ್ಚರಿಕೆ ಅಗತ್ಯ ಇಲ್ಲವಾದ್ರೇ ಗ್ರಾಪಂ ಪಿಡಿಓಗಳ ಮೇಲೆ ಕ್ರಮ ಆಗುತ್ತೇ.
– ಪ್ರಭು.ಜಿ. ಜಿಪಂ ಸಿಇಓ. ತುಮಕೂರು

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.